AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modipara vs Didir Doot: ಪಶ್ಚಿಮ ಬಂಗಾಳದಲ್ಲಿ ಆ್ಯಪ್​ ಫೈಟ್​! ಬಿಡುಗಡೆ ಆಯ್ತು ಮೋದಿ-ಮಮತಾ ಅಪ್ಲಿಕೇಶ್​​ನಗಳು!

ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿರುವ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕರು​,ಕಾರ್ಯಕರ್ತರು ಆ್ಯಪ್​ ಡೌನ್​ಲೋಡ್​ ಮಾಡುವಂತೆ ಕೋರುತ್ತಿದ್ದಾರೆ.

Modipara vs Didir Doot: ಪಶ್ಚಿಮ ಬಂಗಾಳದಲ್ಲಿ ಆ್ಯಪ್​ ಫೈಟ್​! ಬಿಡುಗಡೆ ಆಯ್ತು ಮೋದಿ-ಮಮತಾ ಅಪ್ಲಿಕೇಶ್​​ನಗಳು!
ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ
ರಾಜೇಶ್ ದುಗ್ಗುಮನೆ
|

Updated on:Feb 15, 2021 | 2:13 PM

Share

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಅಧಿಕಾರಕ್ಕೇರಿದ ನಂತರ ಡಿಜಿಟಲ್​ ಇಂಡಿಯಾದ ಕನಸನ್ನು ಜನರ ಮುಂದಿಟ್ಟರು. ಅದರ ಪರಿಣಾಮವಾಗಿ ಇಂದು ನಿಧಾನವಾಗಿ ಭಾರತ ಡಿಜಿಟಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅಂತಯೇ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರಕ್ಕೆ ಡಿಜಿಟಲೀಕರಣದ ಆಯಾಮ ನೀಡಿದ್ದಾರೆ. ಮೋದಿ, ಮೋದಿಪರ (ಮೋದಿಯ ನೆರೆಹೊರೆಯವರು) ಆ್ಯಪ್​ ಬಿಡುಗಡೆ ಮಾಡಿದ್ದಾರೆ. ಇದು ಮಮತಾ ಬ್ಯಾನರ್ಜಿ ಬಿಡುಗಡೆ ಮಾಡಿರುವ, ದೀದಿರ್ ದೂತ್​ (ದಿದಿಯ ಮೆಸೆಂಜರ್) ಆ್ಯಪ್​​ಗೆ ಕೌಂಟರ್​ ಎನ್ನಲಾಗುತ್ತಿದೆ.

ಡಿಜಿಟಲೀಕರಣದ ಮಂತ್ರ ಪಠಿಸುತ್ತಾ ಮಮತಾ ಬ್ಯಾನರ್ಜಿ ಫೆಬ್ರವರಿ 4ರಂದು ದೀದಿರ್ ದೂತ್​ ಆ್ಯಪ್​ ರಿಲೀಸ್​ ಮಾಡಿದ್ದರು. ಮೂರು ದಿನಗಳ ಹಿಂದೆ ಅಮಿತ್​ ಶಾ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಈ ವೇಳೆ ಮೋದಿಪರ ಆ್ಯಪ್​   ಬಿಡುಗಡೆ ಮಾಡಿದ್ದರು.

ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿರುವ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕರು​,ಕಾರ್ಯಕರ್ತರು ಆ್ಯಪ್​ ಡೌನ್​ಲೋಡ್​ ಮಾಡುವಂತೆ ಕೋರುತ್ತಿದ್ದಾರೆ. ಅಷ್ಟೇ ಅಲ್ಲ, ಈ ಆ್ಯಪ್​ನ ವಿಶೇಷತೆ ಹಾಗೂ ಆ್ಯಪ್​ ಬಳಕೆ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಹೀಗಾಗಿ, ಕೆಲವೇ ದಿನಗಳಲ್ಲಿ ಈ ಆ್ಯಪ್​ಗಳು ಲಕ್ಷಾಂತರ ಡೌನ್​ಲೋಡ್​ ಕಂಡಿವೆ.

ಇದನ್ನೂ ಓದಿ:  ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ಐದು ರೂಪಾಯಿ ಊಟ, ‘ಮಾ’ ಯೋಜನೆ ಜಾರಿಗೆ ತಂದ ಮಮತಾ

ರಾಜಕೀಯ ಪಂಡಿತ ಪ್ರಶಾಂತ್​ ಕಿಶೋರ್​ ಈ ಬಾರಿ ಟಿಎಂಸಿ ಪ್ರಚಾರಕ್ಕೆ ತಂತ್ರಗಾರಿಕೆ ರೂಪಿಸಿದ್ದಾರೆ. ಅವರು ಈ ಆ್ಯಪ್​ ಐಡಿಯಾದ ಜನಕ. ಈಗ ಬಿಜೆಪಿ ಕೂಡ ತಾವೇನು ಹಿಂದೆ ಬಿದ್ದಿಲ್ಲ ಎನ್ನುವ ರೀತಿಯಲ್ಲಿ ಆ್ಯಪ್​ ಪರಿಚಯಿಸಿದೆ.

ಪಶ್ಚಿಮ ಬಂಗಾಳ ಚುನಾವಣೆಗೂ ಮೊದಲೇ  ಮಮತಾಗೆ ಶಾಕ್​ ಮೇಲೆ ಶಾಕ್​ ಉಂಟಾಗುತ್ತಿದೆ. ಟಿಎಂಸಿ ಸಾಕಷ್ಟು ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದು ಮಮತಾಗೆ ಭಾರೀ ಹಿನ್ನಡೆ ಉಂಟು ಮಾಡುತ್ತಿದೆ.

Published On - 2:10 pm, Mon, 15 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ