AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಾಲಿ ಜಾತ್ರೆಯಲ್ಲಿ ಜಾಯಿಂಟ್ ವೀಲ್ ತುಂಡಾಗಿ ಬಿದ್ದು 16 ಜನರಿಗೆ ಗಾಯ; ಶಾಕಿಂಗ್ ವಿಡಿಯೋ ಇಲ್ಲಿದೆ

ಡ್ರಾಪ್ ಟವರ್ ಹೆಸರಿನ ಸ್ವಿಂಗ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಇದರಿಂದ ಸುಮಾರು 50 ಅಡಿ ಎತ್ತರದಿಂದ ಸ್ವಿಂಗ್ ಕೆಳಗೆ ಬಿದ್ದು 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೊಹಾಲಿ ಜಾತ್ರೆಯಲ್ಲಿ ಜಾಯಿಂಟ್ ವೀಲ್ ತುಂಡಾಗಿ ಬಿದ್ದು 16 ಜನರಿಗೆ ಗಾಯ; ಶಾಕಿಂಗ್ ವಿಡಿಯೋ ಇಲ್ಲಿದೆ
ಮೊಹಾಲಿ ಜಾತ್ರೆಯಲ್ಲಿ ಜಾಯಿಂಟ್ ವೀಲ್ ತುಂಡಾಗಿ ಬಿದ್ದು 16 ಜನರಿಗೆ ಗಾಯ
TV9 Web
| Edited By: |

Updated on:Sep 06, 2022 | 1:47 PM

Share

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿರುವ (Mohali) ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಜಾ ಮಾಡಲು ಹೋದಾಗ ದುರಂತ ಸಂಭವಿಸಿದೆ. ಜಾಯಿಂಟ್​ ವೀಲ್​ನಲ್ಲಿ ಮೋಜಿನ ಸವಾರಿ ಮಾಡುತ್ತಿದ್ದಾಗ ಆ ಜಾಯಿಂಟ್​ವೀಲ್ ಕಟ್ ಆಗಿ ನೆಲಕ್ಕೆ ಅಪ್ಪಳಿಸಿದೆ. ದುಶೇರಾ ಮೈದಾನದಲ್ಲಿ ಈ ಘಟನೆ ನಡೆದಿದ್ದು, 16ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಡ್ರಾಪ್ ಟವರ್ ಹೆಸರಿನ ಸ್ವಿಂಗ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಇದರಿಂದ ಸುಮಾರು 50 ಅಡಿ ಎತ್ತರದಿಂದ ಸ್ವಿಂಗ್ ಕೆಳಗೆ ಬಿದ್ದು 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಮಕ್ಕಳು, ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ. ಗಾಯಗೊಂಡ ಐವರನ್ನು ಸಿವಿಲ್ ಮತ್ತು ಇತರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊಹಾಲಿಯ 8ನೇ ಹಂತದ ದುಶೇರಾ ಮೈದಾನದಲ್ಲಿ ಲಂಡನ್ ಬ್ರಿಡ್ಜ್ ಎಂಬ ಹೆಸರಿನಲ್ಲಿ ಜಾತ್ರೆ ನಡೆಯುತ್ತಿತ್ತು. ಭಾನುವಾರವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕುಟುಂಬ ಸಮೇತ ಜಾತ್ರೆಗೆ ಆಗಮಿಸಿದ್ದರು. ಡ್ರಾಪ್ ಟವರ್ ಸ್ವಿಂಗ್‌ನಲ್ಲಿ ಸುಮಾರು 30 ಜನರಿದ್ದರು. ಸುಮಾರು 50 ಅಡಿ ಎತ್ತರದಲ್ಲಿ ಸ್ವಿಂಗ್ ತಿರುಗುತ್ತಿದ್ದಾಗ ತಾಂತ್ರಿಕ ದೋಷ ಉಂಟಾಗಿ ನೆಲಕ್ಕೆ ಅಪ್ಪಳಿಸಿದೆ.

ಇದನ್ನೂ ಓದಿ: Shocking News: ಸೆಲ್ಫೀ ಹುಚ್ಚಿಗೆ ಒಂದೇ ಕುಟುಂಬದ 6 ಜನ ಬಲಿ; ಛತ್ತೀಸ್‌ಗಢದಲ್ಲೊಂದು ದುರಂತ ಘಟನೆ

ಈ ಘಟನೆ ನಡೆದ ಕೂಡಲೆ ಜಾಯಿಂಟ್ ವೀಲ್ ನಿರ್ವಾಹಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಎಸ್‌ಡಿಎಂ ಸರಬ್ಜಿತ್ ಕೌರ್ ಮತ್ತು ನಾಯಬ್ ತಹಸೀಲ್ದಾರ್ ಅರ್ಜುನ್ ಗ್ರೆವಾಲ್ ಸ್ಥಳಕ್ಕೆ ಆಗಮಿಸಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಈ ಬಗ್ಗೆ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಅಮಿತ್ ತಲ್ವಾರ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:47 pm, Tue, 6 September 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ