AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG BREAKING: ಮೊಹಮ್ಮದ್ ಜುಬೇರ್ ವಿರುದ್ಧ ಯುಪಿಯಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳಿಗೆ ಜಾಮೀನು

ಮೊಹಮ್ಮದ್ ಜುಬೇರ್  ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾನೆ.

BIG BREAKING: ಮೊಹಮ್ಮದ್ ಜುಬೇರ್ ವಿರುದ್ಧ ಯುಪಿಯಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳಿಗೆ ಜಾಮೀನು
Mohammed Zubair
TV9 Web
| Edited By: |

Updated on:Jul 20, 2022 | 3:29 PM

Share

ದೆಹಲಿ: ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ (Alt News co-founder) ಮತ್ತು ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ (Mohammed Zubair) ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಪಡೆದ ನಂತರ ಬಿಡುಗಡೆಯಾಗಲಿದ್ದಾರೆ. ಎಲ್ಲಾ ಎಫ್‌ಐಆರ್‌ಗಳಲ್ಲಿ(FIR) ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ  ಅಭಿಪ್ರಾಯಪಟ್ಟಿದೆ. ಇದು ಕಾನೂನಿನ ಒಂದು ಸೆಟ್ ತತ್ವವಾಗಿದೆ ಬಂಧನದ ಅಧಿಕಾರವನ್ನು ಮಿತವಾಗಿ ಅನುಸರಿಸಬೇಕು. ಪ್ರಸ್ತುತ ಪ್ರಕರಣದಲ್ಲಿ ಅವರನ್ನು ನಿರಂತರ ಬಂಧನದಲ್ಲಿ ಇರಿಸಲು ಮತ್ತು ಅಂತ್ಯವಿಲ್ಲದ ಶಿಕ್ಷೆಗೆ ಒಳಪಡಿಸಲು ಯಾವುದೇ ಸಮರ್ಥನೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಬಗ್ಗೆ ಒಟ್ಟಾರೆ ತನಿಖೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯ 6 ಎಫ್ಐಆರ್ ಗಳನ್ನು ಒಟ್ಟುಗೂಡಿಸಿದ್ದು ಎಲ್ಲ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾಯಿಸಿದೆ. ಪ್ರಕರಣಗಳನ್ನು  ದೆಹಲಿ ಹೈಕೋರ್ಟ್​​ಗೆ ವರ್ಗಾಯಿಸಬೇಕು ಎಂದು ಜುಬೇರ್ ಮನವಿ ಮಾಡಿದ್ದರು. ಎಫ್ಐಐಆರ್​​ಗಳನ್ನು ದೆಹಲಿಗೆ ವರ್ಗಾಯಿಸುವ ಆದೇಶವು  ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳಿಗೆ ಅನ್ವಯ ಆಗಲಿದೆ. ಇನ್ಮುಂದೆ ಜುಬೇರ್ ವಿರುದ್ದ ದಾಖಲಾಗುವ ದೂರಿಗೂ ಇದು ಅನ್ವಯಿಸುತ್ತದೆ.

ಜುಬೇರ್​ನ್ನು ಬಂಧಮುಕ್ತಗೊಳಿಸುವಂತೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಎಎಸ್ ಬೋಪಣ್ಣ ಅವರ ನ್ಯಾಯಪೀಠ ಆದೇಶಿಸಿದೆ.

ಸೀತಾಪುರ್, ಲಖೀಂಪುರ್ ಖೇರಿ,  ಮುಜಾಫರ್ ನಗರ್ , ಗಾಜಿಯಾಬಾದ್ ನಲ್ಲಿ ತಲಾ  ಒಂದು ಮತ್ತು  ಹಾಥರಸ್ ನಲ್ಲಿ ಎರಡು ಪ್ರಕರಣಗಳು ಜುಬೇರ್ ವಿರುದ್ಧ ದಾಖಲಾಗಿದೆ.  ಸುದ್ದಿನಿರೂಪಕರ ಬಗ್ಗೆ ಅಣಕವಾಡಿದ,  ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ ಮತ್ತು ದೇವರ ಬಗ್ಗೆ  ಪ್ರಚೋದನಾತ್ಮಕ ವಿಷಯ ಟ್ವೀಟ್ ಮಾಡಿದ ಆರೋಪ ಜುಬೇರ್ ಮೇಲಿದೆ.

ದೆಹಲಿಯಲ್ಲಿ ದಾಖಲಾಗಿರುವ ಏಳನೇ ಪ್ರಕರಣದಲ್ಲಿ ಜುಬೇರ್ ಗೆ ಈಗಾಗಲೇ ಜಾಮೀನು ಸಿಕ್ಕಿದೆ.

Published On - 2:51 pm, Wed, 20 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ