Mohan Bhagwat: ನಾವು ನಮಗಾಗಿ ಮಾತ್ರ ಬದುಕುವವರಲ್ಲ, ದೇಶದ ಶಿಕ್ಷಣ, ಆರೋಗ್ಯ ವ್ಯವಸ್ಥೆ ನಾಶ ಮಾಡಿದ್ದು ಬ್ರಿಟಿಷರು

ನಮ್ಮ ಶಿಕ್ಷಣ ವ್ಯವಸ್ಥೆಯು ಉದ್ಯೋಗಕ್ಕಾಗಿ ಮಾತ್ರವಲ್ಲ, ಜ್ಞಾನದ ಮಾಧ್ಯಮವೂ ಆಗಿತ್ತು. ಬ್ರಿಟಿಷರು ಬರುವುದಕ್ಕಿಂದ ಮೊದಲು ಶಿಕ್ಷಣಕ್ಕೆ ನೀಡುತ್ತಿದ್ದ ಮೌಲ್ಯ ಹೆಚ್ಚಾಗಿತ್ತು, ಜೊತೆಗೆ ಅದಕ್ಕೆ ನೀಡುತ್ತಿದ್ದ ಹಣವು ಕೂಡ ಕಡಿಮೆ ಇತ್ತು.

Mohan Bhagwat: ನಾವು ನಮಗಾಗಿ ಮಾತ್ರ ಬದುಕುವವರಲ್ಲ, ದೇಶದ ಶಿಕ್ಷಣ, ಆರೋಗ್ಯ ವ್ಯವಸ್ಥೆ ನಾಶ ಮಾಡಿದ್ದು ಬ್ರಿಟಿಷರು
ಮೋಹನ್ ಭಾಗವತ್
Follow us
|

Updated on:Mar 06, 2023 | 11:15 AM

ಭಾರತದ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಿದ್ದು ಬ್ರಿಟಿಷರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಭಾರತದಲ್ಲಿ ಬ್ರಿಟಿಷರ ಆಳ್ವಿಕೆಯ ಮೊದಲು, 70 ರಿಂದ 80% ರಷ್ಟು ವಿದ್ಯಾವಂತರಾಗಿದ್ದರು ಮತ್ತು ದೇಶದಲ್ಲಿ ನಿರುದ್ಯೋಗ ಇರಲಿಲ್ಲ. ನಮ್ಮ ಶಿಕ್ಷಣ ವ್ಯವಸ್ಥೆಯು ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ವಿನ್ಯಾಸಗೊಳಿಸಿರುವುದರಿಂದ ಜಾತಿ ಮತ್ತು ಬಣ್ಣದ ಆಧಾರದ ಮೇಲೆ ಯಾವುದೇ ತಾರತಮ್ಯ ಇರಲಿಲ್ಲ. ಆದರೆ ಬ್ರಿಟಿಷರು ಇಲ್ಲಿ ಇಂಗ್ಲೆಂಡ್‌ನ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತಂದರು ಮತ್ತು ಇದು ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಿತು ಎಂದು ಭಾಗವತ್ ಅವರು ಆತ್ಮ ಮನೋಹರ್ ಜೈನ್ ಆರಾಧನಾ ದೇವಾಲಯ ಸಂಕೀರ್ಣದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ನಮ್ಮ ಶಿಕ್ಷಣ ವ್ಯವಸ್ಥೆಯು ಉದ್ಯೋಗಕ್ಕಾಗಿ ಮಾತ್ರವಲ್ಲ, ಜ್ಞಾನದ ಮಾಧ್ಯಮವೂ ಆಗಿತ್ತು. ಬ್ರಿಟಿಷರು ಬರುವುದಕ್ಕಿಂದ ಮೊದಲು ಶಿಕ್ಷಣಕ್ಕೆ ನೀಡುತ್ತಿದ್ದ ಮೌಲ್ಯ ಹೆಚ್ಚಾಗಿತ್ತು, ಜೊತೆಗೆ ಅದಕ್ಕೆ ನೀಡುತ್ತಿದ್ದ ಹಣವು ಕೂಡ ಕಡಿಮೆ ಇತ್ತು. ಇಲ್ಲಿ ಜಾತಿ, ಧರ್ಮ ಎಂಬ ಭೇದವಿಲ್ಲದೆ ಎಲ್ಲರಿಗೂ ಪ್ರವೇಶಿಸಬಹುದು. ಆದ್ದರಿಂದ ಸಮಾಜವು ಶಿಕ್ಷಣದ ಮೌಲ್ಯಗಳನ್ನು ತಿಳಿದುಕೊಂಡಿತ್ತು, ಇತಂಹ ಶಿಕ್ಷಣದಿಂದ ಹೊರಬಂದ ವಿದ್ವಾಂಸರು, ಕಲಾವಿದರು ಮತ್ತು ಕುಶಲಕರ್ಮಿಗಳು ಪ್ರಪಂಚದಾದ್ಯಂತ ಗುರುತಿಸಲ್ಪಟ್ಟರು, ಎಂದು ಅವರು ಹೇಳಿದರು.

ಇದನ್ನೂ ಓದಿ: Mohan Bhagwat: ಜಾತಿಗಳ ಸೃಷ್ಟಿಯಾಗಿದ್ದು ದೇವರಿಂದಲ್ಲ, ಪುರೋಹಿತರಿಂದ: ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥರು ಶೈಕ್ಷಣಿಕ ವ್ಯವಸ್ಥೆಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ಜತೆಗೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳನ್ನು ಸುಧಾರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಸಾರ್ವಜನಿಕರಿಗೆ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಆಸ್ಪತ್ರೆಯನ್ನು ನಿರ್ಮಿಸುವುದು ಸೇರಿದಂತೆ ಆತ್ಮ ಮನೋಹರ ಮುನಿ ಆಶ್ರಮ ಮಾಡಿದ ಕಾರ್ಯವನ್ನು ಭಾಗವತ್ ಶ್ಲಾಘಿಸಿದರು.

ವೈದ್ಯಕೀಯ ಮತ್ತು ಶಿಕ್ಷಣ ಎರಡೂ ದುಬಾರಿಯಾಗುತ್ತಿರುವುದರಿಂದ ಎಲ್ಲರಿಗೂ ಆರೋಗ್ಯ ಮತ್ತು ಶಿಕ್ಷಣವು ನಮ್ಮ ದೇಶದ ಅತಿದೊಡ್ಡ ಅಗತ್ಯವಾಗಿದೆ ಎಂದು ಭಾಗವತ್ ಹೇಳಿದರು ಮತ್ತು ಸಾಮಾನ್ಯ ಜನರಿಗೆ ವೈದ್ಯಕೀಯ ಮತ್ತು ಶಿಕ್ಷಣವನ್ನು ಅಗ್ಗದ ದರದಲ್ಲಿ ಸುಲಭವಾಗಿ ತಲುಪಿಸುವ ಅಗತ್ಯವಿದೆ.

ನಾವು ನಮಗಾಗಿ ಮಾತ್ರ ಬದುಕುವವರಲ್ಲ. ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳು ಸರ್ವಜನ್ ಹಿತಯ್-ಸರ್ಜನ್ ಸುಖಯ್ (ಎಲ್ಲರ ಕಲ್ಯಾಣ-ಎಲ್ಲರಿಗೂ ಸಂತೋಷ) ಪ್ರಜ್ಞೆಯನ್ನು ಒಳಗೊಂಡಿವೆ ಎಂದು ಅವರು ಹೇಳಿದರು, ಸಮಾಜವನ್ನು ಬಲಪಡಿಸುವ ಮೂಲಕ ಮಾತ್ರ, ಜನರು ದೇಶದಲ್ಲಿ ಒಳ್ಳೆಯದನ್ನು ನೋಡಬಹುದು.ನಾವು ಸಂತೋಷವಾಗಿರಲು ಬಯಸಿದರೆ, ಸಮಾಜವನ್ನು ಸಂತೋಷಪಡಿಸಬೇಕು ಎಂದು ಅವರು ಹೇಳಿದರು.

Published On - 11:15 am, Mon, 6 March 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ