ಇಸ್ರೇಲ್​-ಹಮಾಸ್​ ಕಂಡಂತೆ ಭಾರತ ಈ ವಿಚಾರದಲ್ಲಿ ಎಂದಿಗೂ ಸಂಘರ್ಷವನ್ನು ಕಂಡಿಲ್ಲ: ಮೋಹನ್ ಭಾಗವತ್

ಹಿಂದೂ ಧರ್ಮವು ಎಲ್ಲಾ ಪಂಗಡಗಳನ್ನು ಗೌರವಿಸುತ್ತದೆ ಮತ್ತು ಹಮಾಸ್-ಇಸ್ರೇಲ್ ಯುದ್ಧಕ್ಕೆ ಕಾರಣವಾದಂತಹ ವಿಷಯಗಳಲ್ಲಿ ಭಾರತವು ಎಂದಿಗೂ ಕಲಹಗಳನ್ನು ಕಂಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.

ಇಸ್ರೇಲ್​-ಹಮಾಸ್​ ಕಂಡಂತೆ ಭಾರತ ಈ ವಿಚಾರದಲ್ಲಿ ಎಂದಿಗೂ ಸಂಘರ್ಷವನ್ನು ಕಂಡಿಲ್ಲ: ಮೋಹನ್ ಭಾಗವತ್
ಮೋಹನ್ ಭಾಗವತ್ Image Credit source: ABP Live
Follow us
|

Updated on: Oct 22, 2023 | 10:28 AM

ಹಿಂದೂ ಧರ್ಮವು ಎಲ್ಲಾ ಪಂಗಡಗಳನ್ನು ಗೌರವಿಸುತ್ತದೆ ಮತ್ತು ಹಮಾಸ್-ಇಸ್ರೇಲ್ ಯುದ್ಧಕ್ಕೆ ಕಾರಣವಾದಂತಹ ವಿಷಯಗಳಲ್ಲಿ ಭಾರತವು ಎಂದಿಗೂ ಕಲಹಗಳನ್ನು ಕಂಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350ನೇ ವರ್ಷದ ಅಂಗವಾಗಿ ಇಲ್ಲಿನ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ದೇಶದಲ್ಲಿ ಎಲ್ಲಾ ಪಂಗಡಗಳು ಮತ್ತು ನಂಬಿಕೆಗಳನ್ನು ಗೌರವಿಸುವ ಸಂಸ್ಕೃತಿ ಹಿಂದೂ ಧರ್ಮಕ್ಕಿದೆ. ಇದು ಹಿಂದೂಗಳ ದೇಶ. ಅದರರ್ಥ ನಾವು ಇತರ ಎಲ್ಲ (ಧರ್ಮಗಳನ್ನು) ತಿರಸ್ಕರಿಸುತ್ತೇವೆ ಎಂದಲ್ಲ.

ಎಲ್ಲೆಡೆ ಕಲಹಗಳು ನಡೆಯುತ್ತಿವೆ. ಉಕ್ರೇನ್ ಯುದ್ಧ, ಹಮಾಸ್-ಇಸ್ರೇಲ್ ಯುದ್ಧದ ಬಗ್ಗೆ ನೀವು ಕೇಳಿರಬೇಕು. ನಮ್ಮ ದೇಶದಲ್ಲಿ, ಅಂತಹ ವಿಷಯಗಳಲ್ಲಿ ಎಂದಿಗೂ ಯುದ್ಧಗಳು ನಡೆದಿಲ್ಲ.

ಶಿವಾಜಿ ಮಹಾರಾಜರ ಕಾಲದಲ್ಲಿ ನಡೆದ ದಾಳಿ ಆ ರೀತಿಯದ್ದಾಗಿತ್ತು. ಆದರೆ ನಾವು ಈ ವಿಷಯದಲ್ಲಿ ಯಾರೊಂದಿಗೂ ಜಗಳವಾಡಲಿಲ್ಲ. ಅದಕ್ಕಾಗಿಯೇ ನಾವು ಹಿಂದೂಗಳು ಎಂದು ಮೋಹನ್ ಭಾಗವತ್ ಹೇಳಿದರು.

ಮತ್ತಷ್ಟು ಓದಿ: Israel Gaza War: ಗಾಜಾದ ವೆಸ್ಟ್​ ಬ್ಯಾಂಕ್​ನ ಅಲ್​-ಅನ್ಸಾರ್​ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ನಡೆಯುತ್ತಿದೆ. ಈ ಸಂಘರ್ಷದಲ್ಲಿ ಎರಡೂ ಕಡೆಗಳಿಂದ 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಜೆರುಸಲೇಂನಲ್ಲಿರುವ ಅಲ್-ಅಕ್ಸಾ ಮಸೀದಿಯನ್ನು ಇಸ್ರೇಲ್ ಅಪವಿತ್ರಗೊಳಿಸಿದಕ್ಕೆ ಇದು ಸೇಡು ಎಂದು ಹಮಾಸ್ ಹೇಳಿದೆ. ಏಪ್ರಿಲ್ 2023 ರಲ್ಲಿ ಇಸ್ರೇಲಿ ಪೊಲೀಸರು ಅಲ್-ಅಕ್ಸಾ ಮಸೀದಿಯ ಮೇಲೆ ಗ್ರೆನೇಡ್ ಎಸೆದು ಅಪವಿತ್ರಗೊಳಿಸಿದ್ದಾರೆ ಎಂದು ಹಮಾಸ್ ಹೇಳಿದೆ. ಇಸ್ರೇಲಿ ಸೇನೆಯು ಹಮಾಸ್ ಸ್ಥಾನಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ ಮತ್ತು ಅತಿಕ್ರಮಿಸುತ್ತಿದೆ.

ಇಸ್ರೇಲ್ ಸೇನೆ ನಮ್ಮ ಮಹಿಳೆಯರ ಮೇಲೆ ದಾಳಿ ನಡೆಸುತ್ತಿದೆ. ಹಮಾಸ್ ವಕ್ತಾರ ಗಾಜಿ ಹಮದ್ ಅವರು ಇಸ್ರೇಲ್ ಜೊತೆಗಿನ ಎಲ್ಲಾ ಸಂಬಂಧಗಳನ್ನು ಮುರಿಯುವಂತೆ ಅರಬ್ ದೇಶಗಳಿಗೆ ಮನವಿ ಮಾಡಿದ್ದಾರೆ. ಇಸ್ರೇಲ್ ಎಂದಿಗೂ ಉತ್ತಮ ನೆರೆಹೊರೆ ಮತ್ತು ಶಾಂತಿಯುತ ದೇಶವಾಗಲು ಸಾಧ್ಯವಿಲ್ಲ ಎಂದು ಹಮದ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ