AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​-ಹಮಾಸ್​ ಕಂಡಂತೆ ಭಾರತ ಈ ವಿಚಾರದಲ್ಲಿ ಎಂದಿಗೂ ಸಂಘರ್ಷವನ್ನು ಕಂಡಿಲ್ಲ: ಮೋಹನ್ ಭಾಗವತ್

ಹಿಂದೂ ಧರ್ಮವು ಎಲ್ಲಾ ಪಂಗಡಗಳನ್ನು ಗೌರವಿಸುತ್ತದೆ ಮತ್ತು ಹಮಾಸ್-ಇಸ್ರೇಲ್ ಯುದ್ಧಕ್ಕೆ ಕಾರಣವಾದಂತಹ ವಿಷಯಗಳಲ್ಲಿ ಭಾರತವು ಎಂದಿಗೂ ಕಲಹಗಳನ್ನು ಕಂಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.

ಇಸ್ರೇಲ್​-ಹಮಾಸ್​ ಕಂಡಂತೆ ಭಾರತ ಈ ವಿಚಾರದಲ್ಲಿ ಎಂದಿಗೂ ಸಂಘರ್ಷವನ್ನು ಕಂಡಿಲ್ಲ: ಮೋಹನ್ ಭಾಗವತ್
ಮೋಹನ್ ಭಾಗವತ್ Image Credit source: ABP Live
ನಯನಾ ರಾಜೀವ್
|

Updated on: Oct 22, 2023 | 10:28 AM

Share

ಹಿಂದೂ ಧರ್ಮವು ಎಲ್ಲಾ ಪಂಗಡಗಳನ್ನು ಗೌರವಿಸುತ್ತದೆ ಮತ್ತು ಹಮಾಸ್-ಇಸ್ರೇಲ್ ಯುದ್ಧಕ್ಕೆ ಕಾರಣವಾದಂತಹ ವಿಷಯಗಳಲ್ಲಿ ಭಾರತವು ಎಂದಿಗೂ ಕಲಹಗಳನ್ನು ಕಂಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350ನೇ ವರ್ಷದ ಅಂಗವಾಗಿ ಇಲ್ಲಿನ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ದೇಶದಲ್ಲಿ ಎಲ್ಲಾ ಪಂಗಡಗಳು ಮತ್ತು ನಂಬಿಕೆಗಳನ್ನು ಗೌರವಿಸುವ ಸಂಸ್ಕೃತಿ ಹಿಂದೂ ಧರ್ಮಕ್ಕಿದೆ. ಇದು ಹಿಂದೂಗಳ ದೇಶ. ಅದರರ್ಥ ನಾವು ಇತರ ಎಲ್ಲ (ಧರ್ಮಗಳನ್ನು) ತಿರಸ್ಕರಿಸುತ್ತೇವೆ ಎಂದಲ್ಲ.

ಎಲ್ಲೆಡೆ ಕಲಹಗಳು ನಡೆಯುತ್ತಿವೆ. ಉಕ್ರೇನ್ ಯುದ್ಧ, ಹಮಾಸ್-ಇಸ್ರೇಲ್ ಯುದ್ಧದ ಬಗ್ಗೆ ನೀವು ಕೇಳಿರಬೇಕು. ನಮ್ಮ ದೇಶದಲ್ಲಿ, ಅಂತಹ ವಿಷಯಗಳಲ್ಲಿ ಎಂದಿಗೂ ಯುದ್ಧಗಳು ನಡೆದಿಲ್ಲ.

ಶಿವಾಜಿ ಮಹಾರಾಜರ ಕಾಲದಲ್ಲಿ ನಡೆದ ದಾಳಿ ಆ ರೀತಿಯದ್ದಾಗಿತ್ತು. ಆದರೆ ನಾವು ಈ ವಿಷಯದಲ್ಲಿ ಯಾರೊಂದಿಗೂ ಜಗಳವಾಡಲಿಲ್ಲ. ಅದಕ್ಕಾಗಿಯೇ ನಾವು ಹಿಂದೂಗಳು ಎಂದು ಮೋಹನ್ ಭಾಗವತ್ ಹೇಳಿದರು.

ಮತ್ತಷ್ಟು ಓದಿ: Israel Gaza War: ಗಾಜಾದ ವೆಸ್ಟ್​ ಬ್ಯಾಂಕ್​ನ ಅಲ್​-ಅನ್ಸಾರ್​ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ನಡೆಯುತ್ತಿದೆ. ಈ ಸಂಘರ್ಷದಲ್ಲಿ ಎರಡೂ ಕಡೆಗಳಿಂದ 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಜೆರುಸಲೇಂನಲ್ಲಿರುವ ಅಲ್-ಅಕ್ಸಾ ಮಸೀದಿಯನ್ನು ಇಸ್ರೇಲ್ ಅಪವಿತ್ರಗೊಳಿಸಿದಕ್ಕೆ ಇದು ಸೇಡು ಎಂದು ಹಮಾಸ್ ಹೇಳಿದೆ. ಏಪ್ರಿಲ್ 2023 ರಲ್ಲಿ ಇಸ್ರೇಲಿ ಪೊಲೀಸರು ಅಲ್-ಅಕ್ಸಾ ಮಸೀದಿಯ ಮೇಲೆ ಗ್ರೆನೇಡ್ ಎಸೆದು ಅಪವಿತ್ರಗೊಳಿಸಿದ್ದಾರೆ ಎಂದು ಹಮಾಸ್ ಹೇಳಿದೆ. ಇಸ್ರೇಲಿ ಸೇನೆಯು ಹಮಾಸ್ ಸ್ಥಾನಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ ಮತ್ತು ಅತಿಕ್ರಮಿಸುತ್ತಿದೆ.

ಇಸ್ರೇಲ್ ಸೇನೆ ನಮ್ಮ ಮಹಿಳೆಯರ ಮೇಲೆ ದಾಳಿ ನಡೆಸುತ್ತಿದೆ. ಹಮಾಸ್ ವಕ್ತಾರ ಗಾಜಿ ಹಮದ್ ಅವರು ಇಸ್ರೇಲ್ ಜೊತೆಗಿನ ಎಲ್ಲಾ ಸಂಬಂಧಗಳನ್ನು ಮುರಿಯುವಂತೆ ಅರಬ್ ದೇಶಗಳಿಗೆ ಮನವಿ ಮಾಡಿದ್ದಾರೆ. ಇಸ್ರೇಲ್ ಎಂದಿಗೂ ಉತ್ತಮ ನೆರೆಹೊರೆ ಮತ್ತು ಶಾಂತಿಯುತ ದೇಶವಾಗಲು ಸಾಧ್ಯವಿಲ್ಲ ಎಂದು ಹಮದ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ