AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆನ್ ಜಿ, ಜೆನ್ ಅಲ್ಫಾ ಜತೆ ನಾಳೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

ನೀಟ್ ವಿಚಾರದಲ್ಲಿ ಪ್ರತಿಭಟನೆ ನಡೆಸಿದ ನಂತರ ದೇಶದಲ್ಲಿ ಜೆನ್ ಜಿ ಯುವ ಸಮೂಹದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಇದೀಗ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜೆನ್ ಜಿ, ಜೆನ್ ಅಲ್ಫಾ ಯುವ ಜನರ ಜತೆ ಸಂವಾದ ನಡೆಸಲಿದ್ದಾರೆ.

ಜೆನ್ ಜಿ, ಜೆನ್ ಅಲ್ಫಾ ಜತೆ ನಾಳೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ
ಮೋಹನ್ ಭಾಗವತ್Image Credit source: PTI
ಗಣಪತಿ ಶರ್ಮಾ
|

Updated on: Aug 05, 2026 | 9:50 AM

Share

ಮುಖ್ಯಾಂಶಗಳು

  • ಆಗಸ್ಟ್ 6ರಂದು ಮೋಹನ್ ಭಾಗವತ್ ಯುವ ಸಂವಾದ
  • 2,000 Gen Z ಯುವಕರು ಕಾರ್ಯಕ್ರಮದಲ್ಲಿ ಭಾಗಿ
  • ಭಾರತೀಯತೆಯ ಸಂದೇಶ ಮುಂದಿನ ಪೀಳಿಗೆಗೆ ತಲುಪಿಸುವ ಗುರಿ

ನವದೆಹಲಿ, ಆಗಸ್ಟ್ 5: ಆಗಸ್ಟ್ 6ರಂದು ಜೆನ್ ಜಿ (Gen Z) ಮತ್ತು ಜೆನ್ ಅಲ್ಫಾ (Gen Alpha) ಯುವಜನರೊಂದಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮಕ್ಕೆ ಅವರು ಖುದ್ದಾಗಿ ಹಾಜರಾಗಲಿದ್ದು, ಯುವಜನರ ಜತೆ ಚರ್ಚೆ, ಸಂವಾದ ನಡೆಸಿದ್ದಾರೆ. ಈ ಮೂಲಕ ಭಾರತೀಯತೆಯ ವಿಚಾರಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಉದ್ದೇಶವಿದೆ ಎಂದು IIMUN (India’s International Movement to Unite Nations) ಸಂಸ್ಥಾಪಕ ರಿಷಭ್ ಶಾ ತಿಳಿಸಿದ್ದಾರೆ. ಯುವಜನರಿಗಾಗಿ ಇಂತಹ ಕಾರ್ಯಕ್ರಮಗಳನ್ನು ತಮ್ಮ ಸಂಸ್ಥೆ ಕಳೆದ 15 ವರ್ಷಗಳಿಂದ ಆಯೋಜಿಸುತ್ತಿದೆ ಎಂದು ರಿಷಭ್ ಶಾ ತಿಳಿಸಿದ್ದಾರೆ.

ಪ್ರತಿ ವರ್ಷ ಆಗಸ್ಟ್​​ನಲ್ಲಿ ಕಾರ್ಯಕ್ರಮ

ಪ್ರತಿ ವರ್ಷ ಆಗಸ್ಟ್ 1ರಿಂದ 15ರ ನಡುವಿನ ಅವಧಿಯಲ್ಲಿ ಸಂಸ್ಥೆಯ ಪ್ರಮುಖ ಕಾರ್ಯಕ್ರಮ ನಡೆಯುತ್ತದೆ. ವರ್ಷವಿಡೀ ಭಾರತ ಸೇರಿದಂತೆ ಹಲವು ದೇಶಗಳಲ್ಲಿ 11ರಿಂದ 19 ವರ್ಷದ ಮಕ್ಕಳು ಮತ್ತು ಯುವಜನರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇಂದಿನ ಸಂದರ್ಭದಲ್ಲಿ ಈ ವಯೋಮಾನದವರನ್ನು Gen Z ಮತ್ತು Gen Alpha ಎಂದು ಕರೆಯಲಾಗುತ್ತದೆ ಎಂದು ರಿಷಭ್ ಶಾ ವಿವರಿಸಿದ್ದಾರೆ.

ಒಟ್ಟು ನಾಲ್ಕು ದಿನಗಳ ಕಾರ್ಯಕ್ರಮ

ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ Gen Z ಮತ್ತು Gen Alpha ಪೀಳಿಗೆಯವರು ವಿವಿಧ ವಿಚಾರಗಳ ಕುರಿತು ಚರ್ಚೆ ಹಾಗೂ ಸಂವಾದಗಳಲ್ಲಿ ಭಾಗವಹಿಸುತ್ತಾರೆ. ಮೊದಲ ದಿನ ಪ್ರಮುಖ ಗಣ್ಯರ ಭಾಷಣಗಳು ನಡೆಯಲಿದ್ದು, ಎರಡನೇ, ಮೂರನೇ ಮತ್ತು ನಾಲ್ಕನೇ ದಿನಗಳಲ್ಲಿ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಚಾರಗಳ ಕುರಿತು ಚರ್ಚೆ ಮತ್ತು ಡಿಬೇಟ್‌ಗಳು ನಡೆಯಲಿವೆ ಎಂದು ರಿಷಭ್ ಶಾ ಮಾಹಿತಿ ನೀಡಿದ್ದಾರೆ.

ರಿಷಭ್ ಶಾ ಮಾತಿನ ವಿಡಿಯೋ

ಇದೇ ಮಾದರಿಯ ಕಾರ್ಯಕ್ರಮಗಳನ್ನು ದೇಶದ 108 ನಗರಗಳು ಹಾಗೂ 15 ದೇಶಗಳಲ್ಲಿ ಆಯೋಜಿಸಲಾಗುತ್ತದೆ. ಆಗಸ್ಟ್‌ನಲ್ಲಿ ನಡೆಯುವ ಕಾರ್ಯಕ್ರಮವು ಈ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮವಾಗಿದೆ ಎಂದು ರಿಷಭ್ ಶಾ ಹೇಳಿದ್ದಾರೆ.

2000 ಮಂದಿ ಭಾಗವಹಿಸುವ ಕಾರ್ಯಕ್ರಮ

ಈ ಬಾರಿಯ ಕಾರ್ಯಕ್ರಮದಲ್ಲಿ ಒಟ್ಟು 2,000 ಮಂದಿ ಭಾಗವಹಿಸಲಿದ್ದು, ಅವರೆಲ್ಲರೂ Gen Z ಪೀಳಿಗೆಗೆ ಸೇರಿದವರು ಎಂದು ಅವರು ತಿಳಿಸಿದ್ದಾರೆ. Gen Z ಕೇಂದ್ರಿತ ಚರ್ಚೆಯಾಗಿರುವುದರಿಂದ ಈ ಕಾರ್ಯಕ್ರಮ ಇದೀಗ ಹೆಚ್ಚಿನ ಗಮನ ಸೆಳೆಯುತ್ತಿದೆ ಎಂದು ರಿಷಭ್ ಶಾ ಹೇಳಿದ್ದಾರೆ.

ಖುದ್ದಾಗಿ ಭಾಗವಹಿಸಲಿರುವ ಮೋಹನ್ ಭಾಗವತ್

ಮೋಹನ್ ಭಾಗವತ್ ಅವರು ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸುತ್ತಾರೆಯೇ ಅಥವಾ ನೇರವಾಗಿ ಹಾಜರಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ರಿಷಭ್ ಶಾ, ಖುದ್ದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

2016ರಲ್ಲೂ ಯುವಜನತೆ ಜತೆ ಸಂವಾದ ನಡೆಸಿದ್ದ ಭಾಗವತ್

ಈ ಹಿಂದೆ 2016 ಮತ್ತು 2020ರಲ್ಲಿಯೂ ಯುವಜನರೊಂದಿಗೆ ಸಂವಾದ ನಡೆಸಲು ಮೋಹನ್ ಭಾಗವತ್ ಅವರನ್ನು ಆಹ್ವಾನಿಸಲಾಗಿತ್ತು. ಆ ಸಂದರ್ಭಗಳಲ್ಲಿಯೂ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಯುವಜನರಿಗೆ ಮಾರ್ಗದರ್ಶನ ನೀಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು ಎಂದು ರಿಷಭ್ ಶಾ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಜತೆಗೂ ನಡೆದಿತ್ತು ಸಂವಾದ

ವಿವಿಧ ಕ್ಷೇತ್ರಗಳ ಹಲವು ಪ್ರಮುಖ ವ್ಯಕ್ತಿಗಳು ಈ ವೇದಿಕೆಯಲ್ಲಿ ಈ ಹಿಂದೆ ಭಾಗವಹಿಸಿ ಯುವಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ IIMUN ನಾಯಕತ್ವ ತಂಡದೊಂದಿಗೆ ಸಂವಾದ ನಡೆಸಿದ್ದಾರೆ ಎಂದು ರಿಷಭ್ ಶಾ ಹೇಳಿದ್ದಾರೆ. ಮುಂದಿನ ಪೀಳಿಗೆಗೆ ‘ಭಾರತೀಯತೆ’ಯ ಮನೋಭಾವವನ್ನು ಕೊಂಡೊಯ್ಯುವುದು ಈ ವೇದಿಕೆಯ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್