AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್​ ಯಾದವ್ ಆಯ್ಕೆ

ಪಂಚ ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ (ಮಧ್ಯಪ್ರದೇಶ, ಛತ್ತೀಸ್​ಗಢ, ರಾಜಸ್ಥಾನ) ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್​​​ ಹಾಗೂ ಮಿಜೋರಾಂನಲ್ಲಿ ಸ್ಥಳೀಯ ಪಕ್ಷ ಅಧಿಕಾರ ಪಡೆದುಕೊಂಡಿದೆ. ಈಗಾಗಲೇ ಛತ್ತೀಸ್​ಗಢನಲ್ಲಿ ವಿಷ್ಣುದೇವ್ ಸಾಯಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಇದೀಗ ಮಧ್ಯಪ್ರದೇಶದಲ್ಲಿ ಮೋಹನ್​ ಯಾದವ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್​ ಯಾದವ್ ಆಯ್ಕೆ
ಮೋಹನ್​ ಯಾದವ್
ಅಕ್ಷಯ್​ ಪಲ್ಲಮಜಲು​​
|

Updated on:Dec 11, 2023 | 5:31 PM

Share

ಭೋಪಾಲ್, ಡಿ.11: ಮಧ್ಯಪ್ರದೇಶ ನೂತನ ಸಿಎಂ ಆಗಿ ಮೋಹನ್​ ಯಾದವ್ (Mohan Yadav) ಆಯ್ಕೆ​ ಮಾಡಲಾಗಿದೆ. ಮಧ್ಯಪ್ರದೇಶ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಉಜ್ಜೈನ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಮೋಹನ್​ ಯಾದವ್ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದ ಮಾಜಿ  ಸಿಎಂ ಶಿವರಾಜ್​ ಸಿಂಗ್ ಚೌಹಾಣ್​ಗೆ ನಿರಾಸೆ ಉಂಟು ಮಾಡಿದೆ.ಮುಖ್ಯಮಂತ್ರಿಯ ಜತೆಗೆ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ. ಡಿಸಿಎಂ ಆಗಿ ಜಗದೀಶ್ ದೇವಡಾ, ರಾಜೇಶ್ ಶುಕ್ಲಾ ಆಯ್ಕೆಯಾಗಿದ್ದಾರೆ.

58 ವರ್ಷದ ಯಾದವ್ ಉಜ್ಜಯಿನಿ ಜಿಲ್ಲೆಯಿಂದ ಮೂರು ಬಾರಿ ಶಾಸಕರಾಗಿದ್ದರು, ಇದೀಗ ಶಿವರಾಜ್ ಸಿಂಗ್ ಚೌಹಾಣ್ ಸ್ಥಾನಕ್ಕೆ ಮೋಹನ್​ ಯಾದವ್ ಬಂದಿರುವುದು ಪಕ್ಷದ ದೊಡ್ಡ ಬದಲಾವಣೆಯನ್ನೇ ತಂದಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಈ ಬದಲಾವಣೆಯನ್ನು ಮಾಡಿದೆ. ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಮೋಹನ್​ ಯಾದವ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ:ಕೊನೆಗೂ ಛತ್ತೀಸ್‌ಗಢದ ಸಿಎಂ ಸ್ಥಾನಕ್ಕೆ ವಿಷ್ಣುದೇವ್ ಸಾಯಿ ಹೆಸರು ಫೈನಲ್, ಪ್ರಮಾಣ ವಚನ ಯಾವಾಗ? 

ಕಳೆದ ತಿಂಗಳ ಚುನಾವಣೆಯಲ್ಲಿ ಸ್ಪರ್ಧಿಸಿದ ಮೂವರು ಕೇಂದ್ರ ಸಚಿವರಲ್ಲಿ ನರೇಂದ್ರ ಸಿಂಗ್ ತೋಮರ್ ಅವರನ್ನು ವಿಧಾನಸಭೆಯ ಸ್ಪೀಕರ್​​ನ್ನಾಗಿ ಮಾಡಲಾಗಿದೆ.ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಸಚಿವಾಲಯವನ್ನು ಮುನ್ನಡೆಸಿದ್ದ ತೋಮರ್ ಅವರು ಚೌಹಾಣ್ ಅವರಿಗೆ ಈ ಮುಖ್ಯಮಂತ್ರಿ ಸ್ಥಾನ ಸಿಗಬಹುದು ಎಂದು ಹೇಳಲಾಗಿತ್ತು. ಆದರೆ ಲೋಕಸಭೆ ಚುನಾವಣೆ ಇರುವ ಕಾರಣ ಹಿರಿಯರ ನಾಯಕರನ್ನು ಬಿಟ್ಟು ಮೋಹನ್​ ಯಾದವ್ ಅವರನ್ನು ಸಿಎಂ ಮಾಡಲಾಗಿದೆ.

ಮಾಜಿ ಸಿಎಂ ಶಿವರಾಜ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ಮೋಹನ್ ಯಾದವ್, 2013ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಮೋಹನ್ ಯಾದವ್ 2013, 2018 ಮತ್ತು 2023ರ ಚುನಾವಣೆಯಲ್ಲಿ 13 ಸಾವಿರಕ್ಕಿಂತ ಹೆಚ್ಚು ಮತಗಳಿಂದ ಜಯ ಸಾಧಿಸಿದರು. 1965ರ ಮಾರ್ಚ್ 25ರಂದು ಉಜ್ಜೈನ್‌ನಲ್ಲಿ ಜನಿಸಿದ ಮೋಹನ್ ಯಾದವ್ ಎಬಿವಿಪಿ ಕಾರ್ಯಕರ್ತರಾಗಿದ್ದರು. ತಂದೆ ಪೂನಂಚಂದ್‌ ಯಾದವ್, ಪತ್ನಿ ಸೀಮಾ ಯಾದವ್. ಇವರಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬರು ಹೆಣ್ಣು ಮಗಳು ಇದ್ದರೆ. ಯಾದವ್ ಬಿಎಸ್ಸಿ, ಎಲ್‌ಎಲ್‌ಬಿ, ಎಂಎ ಮತ್ತು ಪಿಹೆಚ್‌ಡಿ ಶಿಕ್ಷಣವನ್ನು ಕೂಡ ಪಡೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:57 pm, Mon, 11 December 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ