AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಆಸ್ತಿ ಜಪ್ತಿ ಮಾಡಿದ ಇಡಿ

ವಶಪಡಿಸಿಕೊಂಡ ಆಸ್ತಿಯಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯ ಆಸ್ತಿ ಸೇರಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ತಮಿಳುನಾಡಿನ ಶಿವಗಂಗಾ ಸಂಸದರಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಆಸ್ತಿ ಜಪ್ತಿ ಮಾಡಿದ ಇಡಿ
ಕಾರ್ತಿ ಚಿದಂಬರಂ
ರಶ್ಮಿ ಕಲ್ಲಕಟ್ಟ
|

Updated on:Apr 18, 2023 | 9:33 PM

Share

ದೆಹಲಿ: ಐಎನ್‌ಎಕ್ಸ್ ಮೀಡಿಯಾ (INX Media case) ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದ ಮೇಲೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ (Karti Chidambaram)ಮತ್ತು ಇತರರ ₹ 11.04 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ವಶಪಡಿಸಿಕೊಂಡ ಆಸ್ತಿಯಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಆಸ್ತಿ ಸೇರಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ತಮಿಳುನಾಡಿನ ಶಿವಗಂಗಾ ಸಂಸದರಾಗಿದ್ದಾರೆ.

ಐಎನ್‌ಎಕ್ಸ್ ಮೀಡಿಯಾ ಪ್ರಕರಣವು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲಯನ್ಸ್ (UPA) ಸರ್ಕಾರದಲ್ಲಿ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಮಾಧ್ಯಮ ಸಂಸ್ಥೆಯಲ್ಲಿ ವಿದೇಶಿ ಹೂಡಿಕೆಗೆ ಅವಕಾಶ ನೀಡುವಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ವಿದೇಶಿ ಹೂಡಿಕೆಗೆ ಅನುಮತಿ ನೀಡಿದ್ದಕ್ಕಾಗಿ ಚಿದಂಬರಂ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ತನಿಖೆಯ ಸಂದರ್ಭದಲ್ಲಿ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಿಂದ ನೇರವಾಗಿ ಮತ್ತು ಪರೋಕ್ಷವಾಗಿ ಅಕ್ರಮ ತೃಪ್ತಿಯನ್ನು (ಅಪರಾಧದ ಆದಾಯ) ಸ್ವೀಕರಿಸಲಾಗಿದೆ, ಇದಕ್ಕೆ ಆರೋಪಿ ಪಿ ಚಿದಂಬರಂ ಅವರು ಇನ್ನೊಬ್ಬ ಆರೋಪಿ ಕಾರ್ತಿ ಚಿದಂಬರಂ ನಿಯಂತ್ರಿಸುವ/ಪ್ರಯೋಜನಕಾರಿ ಮಾಲೀಕತ್ವದ/ಬಳಸುವ ಶೆಲ್ ಕಂಪನಿಗಳ ಮೂಲಕ ಎಫ್‌ಐಪಿಬಿ (ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ) ಅನುಮೋದನೆಯನ್ನು ನೀಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಕುಟುಂಬದ ವಿರುದ್ಧ ರಾಜಕೀಯ ಪ್ರೇರಿತ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

ಇದನ್ನೂ ಓದಿ:  Vande Bharat Express: ಕೇರಳದ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡಿಗೂ ವಿಸ್ತರಣೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ

ಪಿ ಚಿದಂಬರಂ ಅವರನ್ನು ಆಗಸ್ಟ್ 2019 ರಲ್ಲಿ ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಬಂಧಿಸಿತು. ಅದೇ ವರ್ಷ ಅಕ್ಟೋಬರ್‌ನಲ್ಲಿ, ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿತು. ನಂತರ ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದರು. 2007 ರಲ್ಲಿ ₹305 ಕೋಟಿಗಳ ಸಾಗರೋತ್ತರ ಹಣವನ್ನು ಸ್ವೀಕರಿಸಲು ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ಗೆ ನೀಡಲಾದ ಎಫ್‌ಐಪಿಬಿ ಕ್ಲಿಯರೆನ್ಸ್‌ನಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಬಿಐ ಮೇ 2017 ರಲ್ಲಿ ತನ್ನ ಪ್ರಕರಣವನ್ನು ದಾಖಲಿಸಿತ್ತು. ನಂತರ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Tue, 18 April 23