AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಮ್‌ಸೋತ್ ಬಂಧಿಸಿದ ಇಡಿ

ಈ ಹಿಂದೆ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಎರಡು ಬಾರಿ ಬಂಧಿಸಿತ್ತು. ಅರಣ್ಯ ಹಗರಣದಲ್ಲಿ ಮೊದಲು ವಿಜಿಲೆನ್ಸ್‌ನಿಂದ ಬಂಧಿಸಲ್ಪಟ್ಟು ಜೈಲಿನಲ್ಲಿಯೇ ಇದ್ದರು. ಆ ಬಳಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮತ್ತೆ ಬಂಧಿತರಾಗಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಮ್‌ಸೋತ್ ಬಂಧಿಸಿದ ಇಡಿ
ಸಾಧು ಸಿಂಗ್ ಧರಮ್‌ಸೋತ್
ರಶ್ಮಿ ಕಲ್ಲಕಟ್ಟ
|

Updated on:Jan 15, 2024 | 9:02 PM

Share

ದೆಹಲಿ ಜನವರಿ 15: ಕಾಂಗ್ರೆಸ್ (Congress) ನಾಯಕ ಮತ್ತು ಪಂಜಾಬ್ (Punjab) ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ (sadhu Singh Dharamsot) ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಧರಮ್‌ಸೋತ್ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಈ ಹಿಂದೆ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರನ್ನು ಎರಡು ಬಾರಿ ಬಂಧಿಸಿತ್ತು. ಅರಣ್ಯ ಹಗರಣದಲ್ಲಿ ಮೊದಲು ವಿಜಿಲೆನ್ಸ್‌ನಿಂದ ಬಂಧಿಸಲ್ಪಟ್ಟು ಜೈಲಿನಲ್ಲಿಯೇ ಇದ್ದರು. ಆ ಬಳಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮತ್ತೆ ಬಂಧಿತರಾಗಿದ್ದರು.

64 ವರ್ಷದ ರಾಜಕಾರಣಿಯನ್ನು ಇಡಿ, ಜಲಂಧರ್‌ನಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಕಸ್ಟಡಿಗೆ ತೆಗೆದುಕೊಂಡಿತು. ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯದ ಮತ್ತೊಬ್ಬ ಅರಣ್ಯ ಸಚಿವ ಸಂಗತ್ ಸಿಂಗ್ ಗಿಲ್ಜಿಯಾನ್, ಕೆಲವು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಇತರರ ಮೇಲೆ ಇಡಿ ದಾಳಿ ನಡೆಸಿತ್ತು.

ತನಿಖೆಯು ರಾಜ್ಯ ಅರಣ್ಯ ಇಲಾಖೆಯಲ್ಲಿ ಮರ ಕಡಿಯಲು ಪರವಾನಿಗೆಗಳನ್ನು ನೀಡುವುದರ ವಿರುದ್ಧ ಮತ್ತು ಇಲಾಖೆಯಲ್ಲಿ ವರ್ಗಾವಣೆ/ಪೋಸ್ಟಿಂಗ್, ಇತರ ಆರೋಪಗಳ ಜೊತೆಗೆ “ಲಂಚ” ಆರೋಪಗಳಿಗೆ ಸಂಬಂಧಿಸಿದೆ.

ಧರಮ್‌ಸೋತ್ ಅವರು ಐದು ಬಾರಿ ಶಾಸಕರಾಗಿದ್ದಾರೆ ಮತ್ತು ಕಳೆದ ವರ್ಷ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪದ ಪ್ರಕರಣದಲ್ಲಿ ಬಂಧಿಸಿದ್ದರು.ಅವರು ನಭಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರೆ, ಗಿಲ್ಜಿಯಾನ್ ಹೋಶಿಯಾರ್‌ಪುರ ಜಿಲ್ಲೆಯ ಉರ್ಮಾರ್ ಕ್ಷೇತ್ರದಿಂದ ಶಾಸಕರಾಗಿದ್ದರು.

ಇದನ್ನೂ ಓದಿ:Forex: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ ಕಳೆದ ಐದು ವಾರದಲ್ಲಿ ಮೊದಲ ಬಾರಿಗೆ ಇಳಿಕೆ

ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ದಾಖಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣವು ಪಂಜಾಬ್ ವಿಜಿಲೆನ್ಸ್ ಬ್ಯೂರೋದ ಎಫ್‌ಐಆರ್‌ನಿಂದ ಅರಣ್ಯ ಇಲಾಖೆಯಲ್ಲಿನ ಆಪಾದಿತ ಅಕ್ರಮಗಳು ಮತ್ತು ಪರವಾನಗಿ ನೀಡಲು ಸಂಬಂಧಿಸಿದ ಮಂತ್ರಿಗಳು ಮತ್ತು ಅಧಿಕಾರಿಗಳು ಲಂಚ ಪಡೆದ ಆರೋಪಗಳನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Mon, 15 January 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ