Sign In

By signing in or creating an account, you agree with Associated Broadcasting Company's Terms & Conditions and Privacy Policy.

Money Laundering Case: ಅಕ್ರಮ ಹಣ ವರ್ಗಾವಣೆ, ಇಡಿಯಿಂದ ತಮಿಳುನಾಡು ಸಚಿವ ಸೆಂಥಿಲ್ ಬಂಧನ, ಬಿಕ್ಕಿ ಬಿಕ್ಕಿ ಅತ್ತ ಸಚಿವರು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದ್ದು ಅವರನ್ನು ವಶಕ್ಕೆ ಪಡೆದಿದ್ದಾರೆ.

Money Laundering Case: ಅಕ್ರಮ ಹಣ ವರ್ಗಾವಣೆ, ಇಡಿಯಿಂದ ತಮಿಳುನಾಡು ಸಚಿವ ಸೆಂಥಿಲ್ ಬಂಧನ, ಬಿಕ್ಕಿ ಬಿಕ್ಕಿ ಅತ್ತ ಸಚಿವರು
ಸೆಂಥಿಲ್ ಬಾಲಾಜಿ
Follow us
ನಯನಾ ರಾಜೀವ್
|

Updated on: Jun 14, 2023 | 8:20 AM

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದ್ದು ಅವರನ್ನು ವಶಕ್ಕೆ ಪಡೆದಿದ್ದಾರೆ.  ಬಂಧನದ ಸಮಯದಲ್ಲಿ ಮನೆ ಎದುರು ಹೈ ಡ್ರಾಮಾ ನಡೆಸಿದ್ದಾರೆ, ಜೋರಾಗಿ ಅಳಲು ಪ್ರಾರಂಭಿಸಿದ್ದರು, ಬಳಿಕ ತೀವ್ರ ಎದೆನೋವು ಎಂದು ಕುಸಿದುಬಿದ್ದಿದ್ದು ಅವರನ್ನು ಓಮಂದೂರಾರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನಲ್ಲಿರುವ ಸೆಂಥಿಲ್ ಅವರ ಮನೆ ಹಾಗೂ ಕರೂರಿನಲ್ಲಿರುವ ಅವರ ಪೂರ್ವಜರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

ತನಿಖಾ ಸಂಸ್ಥೆ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದಾಗ. ಆ ಸಮಯದಲ್ಲಿ ಅವರು ಬೆಳಗಿನ ವಾಕಿಂಗ್‌ಗೆ ಹೊರಟಿದ್ದರು. ದಾಳಿಯ ಮಾಹಿತಿ ಸಿಕ್ಕ ತಕ್ಷಣ ಟ್ಯಾಕ್ಸಿ ಹಿಡಿದು ಮನೆಗೆ ಮರಳಿದರು. ಬಾಲಾಜಿ ಬಂಧನದ ನಂತರ ಡಿಎಂಕೆ ಸಕ್ರಿಯವಾಗಿದೆ ಮತ್ತು ಅವರ ಬಂಧನವನ್ನು ಅಸಾಂವಿಧಾನಿಕ ಎಂದು ಹೇಳುತ್ತಿದೆ ಡಿಎಂಕೆ ಕೂಡ ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ.

ಮತ್ತಷ್ಟು ಓದಿ: Tamil Nadu: ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇಡಿ ದಾಳಿ

ತಮಿಳುನಾಡು ಆರೋಗ್ಯ ಸಚಿವ ಎಂ ಸುಬ್ರಮಣಿಯನ್ ಮತ್ತು ರಾಜ್ಯ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಭೇಟಿ ಮಾಡಲು ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉದಯನಿಧಿ ಸ್ಟಾಲಿನ್, ಸೆಂಥಿಲ್ ಬಾಲಾಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರದಲ್ಲಿ ಕಾನೂನು ನೆರವು ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಸೆಂಥಿಲ್ ಬಾಲಾಜಿ ಅವರನ್ನು ಟಾರ್ಗೆಟ್ ಮಾಡಿ ಚಿತ್ರಹಿಂಸೆ ನೀಡಲಾಗಿದೆ ಎಂದು ತಮಿಳುನಾಡು ಕಾನೂನು ಸಚಿವ ಎಸ್.ರಘುಪತಿ ಹೇಳಿದ್ದಾರೆ. ಇಡಿ ಅಧಿಕಾರಿಗಳು ಅವರನ್ನು 24 ಗಂಟೆಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದರು. ಇದು ಸಂಪೂರ್ಣ ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ. ಇದಕ್ಕೆ ಇಡಿ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ