AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hemant Soren: ದೆಹಲಿಗೆ ಬಂದಿದ್ದ ಜಾರ್ಖಂಡ್​ ಸಿಎಂ ಹೇಮಂತ್ ಸೊರೆನ್ ನಾಪತ್ತೆ, ಬಿಎಂಡಬ್ಲ್ಯೂ ಕಾರು ವಶಪಡಿಸಿಕೊಂಡ ಇಡಿ

ದೆಹಲಿಗೆ ಬಂದ ಬಳಿಕ ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್ ಸೊರೆನ್ ನಾಪತ್ತೆಯಾಗಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜನವರಿ 31ರವರೆಗೆ ಜಾರಿ ನಿರ್ದೇಶನಾಲಯ ಸಮಯಾವಕಾಶವನ್ನು ನೀಡಿದೆ. ಸೋಮವಾರ ಇಡಿ ತಂಡವು ಹೇಮಂತ್ ಅವರ ದೆಹಲಿ ನಿವಾಸದಲ್ಲಿಯೇ ಇತ್ತು, ಆದರೂ ಎಲ್ಲಿಯೂ ಅವರು ಪತ್ತೆಯಾಗಿಲ್ಲ, ಬಳಿಕ ಅವರ ಬಿಎಂಡಬ್ಲ್ಯೂ ಕಾರನ್ನು ಇಡಿ ವಶಕ್ಕೆ ಪಡೆದಿದೆ.

Hemant Soren: ದೆಹಲಿಗೆ ಬಂದಿದ್ದ ಜಾರ್ಖಂಡ್​ ಸಿಎಂ ಹೇಮಂತ್ ಸೊರೆನ್ ನಾಪತ್ತೆ, ಬಿಎಂಡಬ್ಲ್ಯೂ ಕಾರು ವಶಪಡಿಸಿಕೊಂಡ ಇಡಿ
ಹೇಮಂತ್ ಸೊರೆನ್Image Credit source: Amarujala.com
ನಯನಾ ರಾಜೀವ್
|

Updated on: Jan 30, 2024 | 10:01 AM

Share

ದೆಹಲಿಗೆ ಬಂದ ಬಳಿಕ ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್ ಸೊರೆನ್(Hemant Soren)ನಾಪತ್ತೆಯಾಗಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜನವರಿ 31ರವರೆಗೆ ಜಾರಿ ನಿರ್ದೇಶನಾಲಯ ಸಮಯಾವಕಾಶವನ್ನು ನೀಡಿದೆ. ಸೋಮವಾರ ಇಡಿ ತಂಡವು ಹೇಮಂತ್ ಅವರ ದೆಹಲಿ ನಿವಾಸದಲ್ಲಿಯೇ ಇತ್ತು, ಆದರೂ ಎಲ್ಲಿಯೂ ಅವರು ಪತ್ತೆಯಾಗಿಲ್ಲ, ಬಳಿಕ ಅವರ ಬಿಎಂಡಬ್ಲ್ಯೂ ಕಾರನ್ನು ಇಡಿ ವಶಕ್ಕೆ ಪಡೆದಿದೆ.

ಈ ವೇಳೆ ಹೇಮಂತ್ ಸೊರೆನ್ ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಇಡಿ ತಂಡ ಹೇಳಿದೆ. ಸೋಮವಾರ ದೆಹಲಿಯಲ್ಲಿರುವ ಸಿಎಂ ಹೇಮಂತ್ ಸೊರೆನ್ ಮನೆ ಮೇಲೂ ಇಡಿ ದಾಳಿ ನಡೆಸಿತ್ತು. ಈ ವೇಳೆ ತನಿಖಾ ತಂಡ ಕೆಲವು ದಾಖಲೆಗಳನ್ನು ಹಾಗೂ ಅವರ ಬಿಎಂಡಬ್ಲ್ಯು ಕಾರನ್ನು ಜಪ್ತಿ ಮಾಡಿದೆ. ಇಡಿ ಉನ್ನತ ಮೂಲಗಳ ಪ್ರಕಾರ, ತನಿಖಾ ಸಂಸ್ಥೆಗೆ ಮುಖ್ಯಮಂತ್ರಿ ಕಚೇರಿಯಿಂದ ಮೇಲ್ ಬಂದಿದೆ. ಜನವರಿ 31ರಂದು ಸಿಎಂ ತನಿಖೆಗೆ ಸಹಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅವರನ್ನು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯದ ಕೆಲವು ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿವೆ. ಶನಿವಾರ ತಡರಾತ್ರಿ ಸೊರೆನ್ ದಿಢೀರ್ ದೆಹಲಿಗೆ ಹೊರಟಿದ್ದರು, ಚಾರ್ಟರ್ಡ್​ ವಿಮಾನದಲ್ಲಿ ಮುಂಜಾನೆ ದೆಹಲಿಗೆ ಬಂದಿಳಿದಿದ್ದರು.

ಮತ್ತಷ್ಟು ಓದಿ: Hemant Soren: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪತ್ತೆ ಹಚ್ಚುವಲ್ಲಿ ಇಡಿ ತಂಡ ವಿಫಲ

ಅಂದಿನಿಂದ ಇಲ್ಲಿಯವರೆಗೆ ಅವರು ಎಲ್ಲಿದ್ದಾರೆ ಎಂದು ಯಾರಿಗೂ ತಿಳಿದಿಲ್ಲ. ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಇಡಿ 10ನೇ ಸಮನ್ಸ್ ಕಳುಹಿಸಿದೆ. ಇದಕ್ಕೂ ಮುನ್ನ ಜನವರಿ 20ರಂದು ಜಾರ್ಖಂಡ್‌ನಲ್ಲಿ ಇಡಿ ಸೋರೆನ್‌ರನ್ನು ವಿಚಾರಣೆ ನಡೆಸಿತ್ತು. ಈ ವೇಳೆ ಸೊರೆನ್‌ಗೆ 50 ಪ್ರಶ್ನೆಗಳನ್ನು ಕೇಳಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!