Hemant Soren: ದೆಹಲಿಗೆ ಬಂದಿದ್ದ ಜಾರ್ಖಂಡ್​ ಸಿಎಂ ಹೇಮಂತ್ ಸೊರೆನ್ ನಾಪತ್ತೆ, ಬಿಎಂಡಬ್ಲ್ಯೂ ಕಾರು ವಶಪಡಿಸಿಕೊಂಡ ಇಡಿ

ದೆಹಲಿಗೆ ಬಂದ ಬಳಿಕ ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್ ಸೊರೆನ್ ನಾಪತ್ತೆಯಾಗಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜನವರಿ 31ರವರೆಗೆ ಜಾರಿ ನಿರ್ದೇಶನಾಲಯ ಸಮಯಾವಕಾಶವನ್ನು ನೀಡಿದೆ. ಸೋಮವಾರ ಇಡಿ ತಂಡವು ಹೇಮಂತ್ ಅವರ ದೆಹಲಿ ನಿವಾಸದಲ್ಲಿಯೇ ಇತ್ತು, ಆದರೂ ಎಲ್ಲಿಯೂ ಅವರು ಪತ್ತೆಯಾಗಿಲ್ಲ, ಬಳಿಕ ಅವರ ಬಿಎಂಡಬ್ಲ್ಯೂ ಕಾರನ್ನು ಇಡಿ ವಶಕ್ಕೆ ಪಡೆದಿದೆ.

Hemant Soren: ದೆಹಲಿಗೆ ಬಂದಿದ್ದ ಜಾರ್ಖಂಡ್​ ಸಿಎಂ ಹೇಮಂತ್ ಸೊರೆನ್ ನಾಪತ್ತೆ, ಬಿಎಂಡಬ್ಲ್ಯೂ ಕಾರು ವಶಪಡಿಸಿಕೊಂಡ ಇಡಿ
ಹೇಮಂತ್ ಸೊರೆನ್
Image Credit source: Amarujala.com

Updated on: Jan 30, 2024 | 10:01 AM

ದೆಹಲಿಗೆ ಬಂದ ಬಳಿಕ ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್ ಸೊರೆನ್(Hemant Soren)ನಾಪತ್ತೆಯಾಗಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜನವರಿ 31ರವರೆಗೆ ಜಾರಿ ನಿರ್ದೇಶನಾಲಯ ಸಮಯಾವಕಾಶವನ್ನು ನೀಡಿದೆ. ಸೋಮವಾರ ಇಡಿ ತಂಡವು ಹೇಮಂತ್ ಅವರ ದೆಹಲಿ ನಿವಾಸದಲ್ಲಿಯೇ ಇತ್ತು, ಆದರೂ ಎಲ್ಲಿಯೂ ಅವರು ಪತ್ತೆಯಾಗಿಲ್ಲ, ಬಳಿಕ ಅವರ ಬಿಎಂಡಬ್ಲ್ಯೂ ಕಾರನ್ನು ಇಡಿ ವಶಕ್ಕೆ ಪಡೆದಿದೆ.

ಈ ವೇಳೆ ಹೇಮಂತ್ ಸೊರೆನ್ ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಇಡಿ ತಂಡ ಹೇಳಿದೆ. ಸೋಮವಾರ ದೆಹಲಿಯಲ್ಲಿರುವ ಸಿಎಂ ಹೇಮಂತ್ ಸೊರೆನ್ ಮನೆ ಮೇಲೂ ಇಡಿ ದಾಳಿ ನಡೆಸಿತ್ತು. ಈ ವೇಳೆ ತನಿಖಾ ತಂಡ ಕೆಲವು ದಾಖಲೆಗಳನ್ನು ಹಾಗೂ ಅವರ ಬಿಎಂಡಬ್ಲ್ಯು ಕಾರನ್ನು ಜಪ್ತಿ ಮಾಡಿದೆ. ಇಡಿ ಉನ್ನತ ಮೂಲಗಳ ಪ್ರಕಾರ, ತನಿಖಾ ಸಂಸ್ಥೆಗೆ ಮುಖ್ಯಮಂತ್ರಿ ಕಚೇರಿಯಿಂದ ಮೇಲ್ ಬಂದಿದೆ. ಜನವರಿ 31ರಂದು ಸಿಎಂ ತನಿಖೆಗೆ ಸಹಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅವರನ್ನು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯದ ಕೆಲವು ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿವೆ.
ಶನಿವಾರ ತಡರಾತ್ರಿ ಸೊರೆನ್ ದಿಢೀರ್ ದೆಹಲಿಗೆ ಹೊರಟಿದ್ದರು, ಚಾರ್ಟರ್ಡ್​ ವಿಮಾನದಲ್ಲಿ ಮುಂಜಾನೆ ದೆಹಲಿಗೆ ಬಂದಿಳಿದಿದ್ದರು.

ಮತ್ತಷ್ಟು ಓದಿ: Hemant Soren: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪತ್ತೆ ಹಚ್ಚುವಲ್ಲಿ ಇಡಿ ತಂಡ ವಿಫಲ

ಅಂದಿನಿಂದ ಇಲ್ಲಿಯವರೆಗೆ ಅವರು ಎಲ್ಲಿದ್ದಾರೆ ಎಂದು ಯಾರಿಗೂ ತಿಳಿದಿಲ್ಲ. ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಇಡಿ 10ನೇ ಸಮನ್ಸ್ ಕಳುಹಿಸಿದೆ. ಇದಕ್ಕೂ ಮುನ್ನ ಜನವರಿ 20ರಂದು ಜಾರ್ಖಂಡ್‌ನಲ್ಲಿ ಇಡಿ ಸೋರೆನ್‌ರನ್ನು ವಿಚಾರಣೆ ನಡೆಸಿತ್ತು. ಈ ವೇಳೆ ಸೊರೆನ್‌ಗೆ 50 ಪ್ರಶ್ನೆಗಳನ್ನು ಕೇಳಲಾಯಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us