Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ. ಹರ್ಯಾಣದ ಫರಿದಾಬಾದ್‌ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು
ಪ್ರಿಯಾಂಕಾ ಗಾಂಧಿ ವಾದ್ರಾ
Follow us
ನಯನಾ ರಾಜೀವ್
|

Updated on: Dec 28, 2023 | 12:43 PM

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ. ಹರ್ಯಾಣದ ಫರಿದಾಬಾದ್‌ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.

ನವದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾ ಅವರಿಂದ 2006 ರಲ್ಲಿ ಭೂಮಿ ಖರೀದಿಸಿ, ಫೆಬ್ರವರಿ 2010 ರಲ್ಲಿ ಅದೇ ಭೂಮಿಯನ್ನು ಅವರಿಗೆ ಮಾರಾಟ ಮಾಡುವಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ.

ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರ ನಡುವೆ 334 ಕನಾಲ್ (40.08 ಎಕರೆ) ಅಳತೆಯ ಮೂರು ತುಂಡು ಭೂಮಿಯನ್ನು ಖರೀದಿಸಿದ್ದಾರೆ ಮತ್ತು ಅದೇ ಭೂಮಿಯನ್ನು 2010ರಲ್ಲಿ ಮಾರಾಟ ಮಾಡಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಲಂಡನ್ ಮೂಲದ ಸಂಜಯ್ ಭಂಡಾರಿ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಯುಎಇ ಮೂಲದ ಎನ್‌ಆರ್‌ಐ ಉದ್ಯಮಿ ಸಿಸಿ ಅಥವಾ ಚೆರುವತ್ತೂರು ಚಾಕುಟ್ಟಿ ಥಂಪಿ ಮತ್ತು ಯುಕೆ ಪ್ರಜೆ ಸುಮಿತ್ ಚಡ್ಡಾ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಇಡಿ ಹೇಳಿಕೆ ನೀಡಿದೆ.

ಮತ್ತಷ್ಟು ಓದಿ: ಸೋನಿಯಾ ಅಳಿಯ ರಾಬರ್ಟ್ ವಾದ್ರಾಗೆ ಮತ್ತೊಂದು ಸಂಕಷ್ಟ; ಅಕ್ರಮ ಹಣ ವರ್ಗಾವಣೆ ಆರೋಪಿ ಜತೆಗೆ ನಂಟು

ಜನವರಿ 2020 ರಲ್ಲಿ ಈ ಪ್ರಕರಣದಲ್ಲಿ ಥಂಪಿ ಅವರನ್ನು ಬಂಧಿಸಲಾಯಿತು ಮತ್ತು ಇಡಿ ಅವರು ವಾದ್ರಾ ಅವರ ಆಪ್ತ ಎಂದು ಆರೋಪಿಸಿದೆ. ಚಾರ್ಜ್ ಶೀಟ್‌ನಲ್ಲಿ, ಎಚ್‌ಎಲ್ ಪಹ್ವಾ ವಾದ್ರಾ ಮತ್ತು ಥಂಪಿ ಇಬ್ಬರಿಗೂ ಜಮೀನು ಮಾರಾಟ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಹರ್ಯಾಣದಲ್ಲಿ ಜಮೀನು ಖರೀದಿಸಲು ಬೇನಾಮಿ ಹಣ ನೀಡಲಾಗಿದ್ದು, ವಾದ್ರಾ ಜಮೀನು ಮಾರಾಟಕ್ಕೆ ಸಂಪೂರ್ಣ ಹಣ ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ