AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ನವಾಬ್ ಮಲಿಕ್​​ಗೆ ಮಧ್ಯಂತರ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ಸುಪ್ರೀಂ ಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ನವಾಬ್ ಮಲಿಕ್​​ಗೆ ಮಧ್ಯಂತರ ಜಾಮೀನು
ಮಾಜಿ ಸಚಿವ ನವಾಬ್ ಮಲಿಕ್
ಅಕ್ಷಯ್​ ಪಲ್ಲಮಜಲು​​
|

Updated on:Aug 11, 2023 | 4:58 PM

Share

ದೆಹಲಿ, ಆ.11 : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ನಾಯಕ ನವಾಬ್ ಮಲಿಕ್ (Nawab Malik) ಅವರಿಗೆ ಸುಪ್ರೀಂ ಕೋರ್ಟ್ ಇಂದು (ಆ.11) ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ 23, 2022 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು, ಇದೀಗ 1.5 ವರ್ಷಗಳ ನಂತರ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ.

ಈ ಮಧ್ಯಂತರ ಜಾಮೀನು ಅರ್ಹತೆಯ ಮೇಲೆ ಅಲ್ಲ, ವೈದ್ಯಕೀಯ ಕಾರಣಗಳಿಗಾಗಿ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್​ ಸ್ಪಷ್ಟಪಡಿಸಿದೆ. ನವಾಬ್ ಮಲಿಕ್ ಅವರು ಕಿಡ್ನಿ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯ ಅರ್ಜಿಗೆ 5 ವಾರಗಳಲ್ಲಿ ಕೌಂಟರ್ ಅಫಿಡವಿಟ್ ಸಲ್ಲಿಸಿದ ನಂತರ ಅದನ್ನು ಮರುಜೋಡಣೆ ಮಾಡಿ ನಂತರ ಅದನ್ನು ವಿಚಾರಣೆ ಮಾಡಿ ಜಾಮೀನು ನೀಡಲಾಗಿದೆ.

ಈ ಹಿಂದೆ ನವಾಬ್ ಮಲಿಕ್ ಅವರು ಬಾಂಬೆ ಹೈಕೋರ್ಟ್​ಗೆ ತಾತ್ಕಾಲಿಕ ವೈದ್ಯಕೀಯ ಪರೀಕ್ಷೆಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಕೋರ್ಟ್​ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ಸುಪ್ರೀಂ ಕೋರ್ಟ್​ಗೆ ಮರುಅರ್ಜಿ ಸಲ್ಲಿಸಿದ್ದಾರೆ. ಇದೀಗ ಸುಪ್ರೀಂ ಅವರಿಗೆ ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಈ ಆದೇಶ ನೀಡಿದೆ.

ಇದನ್ನೂ ಓದಿ: ಮಾಜಿ ಸಚಿವ ನವಾಬ್ ಮಲಿಕ್‌ಗೆ ಜಾಮೀನು ನಿರಾಕರಿಸಿದ ಮುಂಬೈ ಕೋರ್ಟ್

ನವಾಬ್ ಮಲಿಕ್ ದಾವೂದ್ ಲಿಂಕ್: ಅಕ್ರಮ ಹಣ ವರ್ಗಾವಣೆ ಪ್ರಕರಣ

ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂ ಮತ್ತು ಶಕೀಲ್ ಶೇಖ್ ಬಾಬು ಮೊಯಿಯುದ್ದೀನ್ ಅಕಾ ಛೋಟಾ ಶಕೀಲ್, ಇಬ್ರಾಹಿಂ ಮುಷ್ತಾಕ್ ಅಬ್ದುಲ್ ರಜಾಕ್ ಮೆಮನ್ ಅಕಾ ಟಿಗರ್ ಮೆಮನ್ ಸೇರಿದಂತೆ ಆತನ ಆಪ್ತರೊಂದಿಗೆ ನವಾಬ್ ಮಲಿಕ್ ಅವರ ಹೆಸರು ಕೂಡ ತಲುಕು ಹಾಕುತ್ತಿದ್ದ ಕಾರಣ ಎನ್‌ಐಎ ನವಾಬ್ ಮಲಿಕ್ ಅವರನ್ನು ಪಿಎಂಎಲ್‌ಎ ಅಡಿಯಲ್ಲಿ ಬಂಧಿಸಿತ್ತು.

ನವಾಬ್ ಮಲಿಕ್ ಅವರು ದಾವೂದ್‌ನ ಸಹೋದರಿ ದಿವಂಗತ ಹಸೇನಾ ಪರ್ಕರ್‌ಳೊಂದಿಗೆ ವ್ಯವಹರಿಸಿದ್ದರು ಮತ್ತು ಸೆಪ್ಟೆಂಬರ್ 2005ರಲ್ಲಿ ಫ್ಯಾಬ್ರಿಕೇಟೆಡ್ ಪವರ್ ಆಫ್ ಅಟಾರ್ನಿ ಬಳಸಿ ಕುರ್ಲಾದಲ್ಲಿನ ಗೋವಾಲಾ ಕಾಂಪೌಂಡ್​​ನ್ನು ಕಬಳಿಸಲು ಸಂಚು ರೂಪಿಸಿದ್ದರು ಎಂದು ಇಡಿ ಹೇಳಿದೆ. ಇದರ ಜತೆಗೆ ಭಾರತದ ₹ 15.99 ಕೋಟಿ ಮೊತ್ತದ ಹಣವನ್ನು ಭಯೋತ್ಪಾದಕ ನಿಧಿಗಾಗಿ ಬಳಸಲಾಗಿದೆ ಎಂದು ಇಡಿ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 11 August 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?