AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿಯ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ದೃಷ್ಟಿ ಮರಳಿಸಿದ ವೈದ್ಯರು

ಹರ್ಯಾಣದ ವೈದ್ಯರು ಮಂಗನ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕೋತಿಯೊಂದು ವಿದ್ಯುತ್​ ತಗುಲಿ ಕೆಳಗೆ ಬಿದ್ದಿತ್ತು, ನಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರಾಣಿಪ್ರಿಯರೊಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಆಗ ಮಂಗನ ಕಣ್ಣಿಗೆ ಪೊರೆ ಬಂದಿರುವ ಕಾರಣ ಅದಕ್ಕೆ ಕಣ್ಣು ಕಾಣದೆ ಅನಾಹುತಗಳು ಸಂಭವಿಸುತ್ತಿದೆ ಎಂಬುದನ್ನು ಅರಿತು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

ಕೋತಿಯ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ದೃಷ್ಟಿ ಮರಳಿಸಿದ ವೈದ್ಯರು
ಮಂಗ
ನಯನಾ ರಾಜೀವ್
|

Updated on: May 31, 2024 | 11:34 AM

Share

ಕೋತಿ(Monkey)ಯ ಕಣ್ಣಿನ ಯಶಸ್ವಿ ಪೊರೆ ಶಸ್ತ್ರ ಚಿಕಿತ್ಸೆ ನಡೆಸಿ ದೃಷ್ಟಿ ಮರಳಿಸಿ ವೈದ್ಯರು ಮಾನವೀಯತೆ ಮೆರೆದಿದ್ದಾರೆ. ಹರ್ಯಾಣದಲ್ಲಿ ಇದೇ ಮೊದಲ ಬಾರಿಗೆ ಮಂಗನ ಕಣ್ಣಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮನುಷ್ಯರಂತೆ ಮಂಗಕ್ಕೂ ಕೂಡ ಕಣ್ಣಿನ ಪೊರೆ ಸಮಸ್ಯೆ ಕಾಡುತ್ತದೆ.

ಲುವಾಸ್‌ನಲ್ಲಿನ ಅನಿಮಲ್ ಸರ್ಜರಿ ಮತ್ತು ರೇಡಿಯಾಲಜಿ ವಿಭಾಗದ ಮುಖ್ಯಸ್ಥ ಆರ್‌ಎನ್ ಚೌಧರಿ ಅವರು ಮಂಗವನ್ನು ಹಂಸಿಯ ಪ್ರಾಣಿ ಪ್ರೇಮಿ ಮುನೀಶ್ ಆಸ್ಪತ್ರೆಗೆ ಕರೆತಂದಿದ್ದಾರೆ ಎಂದು ಹೇಳಿದರು. ಮಂಗಕ್ಕೆ ಕಣ್ಣು ಕಾಣದ ಹಿನ್ನೆಲೆಯಲ್ಲಿ ಹೇಗೋ ವಿದ್ಯುತ್​ ತಂತಿ ಮೇಲೆ ಹಾರಿದ ಪರಿಣಾಮ ವಿದ್ಯುತ್ ಪ್ರವಹಿಸಿತ್ತು. ಅದು ಕುಂಟುತ್ತಾ ಹೋಗುತ್ತಿತ್ತು. ಅದಕ್ಕೆ ಚಿಕಿತ್ಸೆ ಕೊಡಿಸಬೇಕೆಂದು ಕರೆದೊಯ್ದಾದ ಕಣ್ಣು ಕಾಣಿಸದಿರುವುದು ಗೊತ್ತಾಗಿದೆ. ನಂತರ ಚಿಕಿತ್ಸೆಗಾಗಿ ಕೋತಿಯನ್ನು ಲುವಾಸ್‌ನ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ಕರೆತರಲಾಯಿತು ಎಂದರು.

ಪರೀಕ್ಷೆ ನಡೆಸಿದಾಗ ಎರಡು ಕಣ್ಣುಗಳಿಗೆ ಪೊರೆ ಬಂದಿರುವುದು ತಿಳಿದಿದೆ. ಬಳಿಕ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಈಗ ಮಂಗಕ್ಕೆ ಕಣ್ಣು ಕಾಣುತ್ತಿದೆ.

ಮತ್ತಷ್ಟು ಓದಿ:ಹುಕ್ಕೇರಿ: ರಸ್ತೆ ಅಪಘಾತದಲ್ಲಿ ಮರಿ ಮಂಗ ಸಾವು, ತಾಯಿಯ ಆಕ್ರಂದನ: ಸ್ಥಳೀಯರಿಂದ ಆರೈಕೆ

CPR ಮೂಲಕ ಮಂಗನ ಜೀವ ಉಳಿಸಿದ ಪೊಲೀಸ್​ ಯುಪಿಯ ಬುಲಂದ್‌ಶಹರ್‌ನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿಯೊಬ್ಬರು ಕೋತಿಗೆ ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ. ಛಾತಾರಿ ಪೊಲೀಸ್ ಠಾಣೆ ಬಳಿ ಬಿಸಿಲಿಗೆ ಕೋತಿಯೊಂದು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ವರದಿಯಾಗಿದೆ.

ಸ್ಥಳದಲ್ಲೇ ಇದ್ದ ಪೊಲೀಸ್‌ ಅಧಿಕಾರಿ ವಿಕಾಸ್‌ ತೋಮರ್‌ ತಕ್ಷಣವೇ ಕೋತಿಗೆ ಸಿಪಿಆರ್‌ ನೀಡಲು ಆರಂಭಿಸಿದರು. ಕ್ರಮೇಣ ಮಂಗನ ಸ್ಥಿತಿ ಸುಧಾರಿಸತೊಡಗಿತು. ಆಗ ಪೋಲೀಸರು ಕುಡಿಯಲು ನೀರು ಕೊಟ್ಟರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್