AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ, ಇಲ್ಲಿಯವರೆಗೆ 81 ಮಂದಿ ಸಾವು

ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರ ಮಳೆ ಮತ್ತು ಭೂಕುಸಿತದಿಂದ 81 ಜನರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆಯ ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ. ಮುಂದಿನ ಕೆಲವು ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ, ಇಲ್ಲಿಯವರೆಗೆ 81 ಮಂದಿ ಸಾವು
ಹಿಮಾಚಲ ಪ್ರದೇಶ ಮಳೆImage Credit source: Mint
ನಯನಾ ರಾಜೀವ್
|

Updated on: Aug 17, 2023 | 9:24 AM

Share

ಹಿಮಾಚಲ ಪ್ರದೇಶ(Himachal Pradesh) ಮತ್ತು ಉತ್ತರಾಖಂಡ(Uttarakhand)ದಲ್ಲಿ ನಿರಂತರ ಮಳೆ ಮತ್ತು ಭೂಕುಸಿತ(Landslide)ದಿಂದ 81 ಜನರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆಯ ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ. ಮುಂದಿನ ಕೆಲವು ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಬುಧವಾರ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದ್ದು, ಹೆಚ್ಚಿನ ಮೃತದೇಹಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಭಾನುವಾರ ರಾತ್ರಿಯಿಂದ ಒಟ್ಟು 57 ಶವಗಳನ್ನು ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Himachal Pradesh Rain: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹದ ಎಚ್ಚರಿಕೆ, 7 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ, ಅಲ್ಲಿ ಮೂರು ಪ್ರದೇಶಗಳು- ಸಮ್ಮರ್ ಹಿಲ್, ಫಾಗ್ಲಿ ಮತ್ತು ಕೃಷ್ಣ ನಗರವು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾಗಿವೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ ರಾಜ್ಯದಲ್ಲಿ ಒಟ್ಟು 214 ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಮತ್ತು 38 ಜನರು ಇನ್ನೂ ನಾಪತ್ತೆಯಾಗಿದ್ದಾರೆ.

ಸಮ್ಮರ್ ಹಿಲ್ ಮತ್ತು ಕೃಷ್ಣ ನಗರ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಮ್ಮರ್ ಹಿಲ್ ಸೈಟ್‌ನಿಂದ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿಮ್ಲಾ ಡೆಪ್ಯುಟಿ ಕಮಿಷನರ್ ಆದಿತ್ಯ ನೇಗಿ ತಿಳಿಸಿದ್ದಾರೆ. ಇದುವರೆಗೆ ಸಮ್ಮರ್ ಹಿಲ್‌ನಲ್ಲಿ 13, ಫಾಗ್ಲಿಯಲ್ಲಿ ಐದು ಮತ್ತು ಕೃಷ್ಣನಗರದಲ್ಲಿ ಎರಡು ಮೃತ ದೇಹಗಳು ಪತ್ತೆಯಾಗಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಸಂಭವಿಸುವ ಭೀತಿಯಲ್ಲಿ ಕೃಷ್ಣಾ ನಗರದಲ್ಲಿನ ಸುಮಾರು 15 ಮನೆಗಳನ್ನು ತೆರವುಗೊಳಿಸಲಾಗಿದ್ದು, ಕುಟುಂಬಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿವೆ. ಹಿಮಾಚಲ ಪ್ರದೇಶವು ಈ ವರ್ಷ 54 ದಿನಗಳ ಮುಂಗಾರಿನಲ್ಲಿ ಈಗಾಗಲೇ 742 ಮಿಮೀ ಮಳೆಯನ್ನು ಕಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?