AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2025: ಕೇರಳಕ್ಕೆ ಮೇ 25ರೊಳಗೆ ಮುಂಗಾರು ಪ್ರವೇಶ; ಕರ್ನಾಟಕದಲ್ಲೂ ಬೇಗ ಮಳೆಗಾಲ ಶುರು

ಮಾನ್ಸೂನ್‌ಗೂ ಮುಂಚಿತವಾಗಿ ಮೇ 24ರವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಪುದುಚೇರಿ, ಕಾರೈಕಲ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಈ ಬಾರಿ ಮುಂಚಿತವಾಗಿ ಮಳೆ ಆರಂಭವಾಗುವುದರಿಂದ ಬಿಸಿಲಿನ ಬೇಗೆ ಕಡಿಮೆಯಾಗುವುದಲ್ಲದೆ, ಅಕ್ಕಿ, ಜೋಳ, ಹತ್ತಿ, ಸೋಯಾಬೀನ್ ಮತ್ತು ಇತರ ಎಣ್ಣೆಬೀಜಗಳಂತಹ ಬೆಳೆಗಳ ಬಿತ್ತನೆಯೂ ಹೆಚ್ಚಾಗುತ್ತದೆ.

Monsoon 2025: ಕೇರಳಕ್ಕೆ ಮೇ 25ರೊಳಗೆ ಮುಂಗಾರು ಪ್ರವೇಶ; ಕರ್ನಾಟಕದಲ್ಲೂ ಬೇಗ ಮಳೆಗಾಲ ಶುರು
Rainfall
ಸುಷ್ಮಾ ಚಕ್ರೆ
|

Updated on: May 20, 2025 | 8:45 PM

Share

ನವದೆಹಲಿ, ಮೇ 20: ನೈಋತ್ಯ ಮಾನ್ಸೂನ್ (Monsoon 2025) ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು. ಆದರೆ ಈ ವರ್ಷ ಬಹಳ ಮುಂಚೆಯೇ ಆಗಬಹುದು. ಐಎಂಡಿ ಈ ಹಿಂದೆ ಮೇ 27ರ ವೇಳೆಗೆ ಮಾನ್ಸೂನ್ ಕೇರಳವನ್ನು ತಲುಪುತ್ತದೆ ಎಂದು ನಿರೀಕ್ಷಿಸಿತ್ತು. ಆದರೆ, ಅದಕ್ಕೂ 2-3 ದಿನಗಳು ಮುಂಚಿತವಾಗಿಯೇ ಮಾನ್ಸೂನ್ ಆಗಮನವಾಗುವ ಸಾಧ್ಯತೆಯಿದೆ. ಮುಂಚಿತವಾಗಿ ಮಳೆಯಾಗುವುದರಿಂದ ಬಿಸಿಲಿನ ಬೇಗೆ ಕಡಿಮೆಯಾಗುವುದಲ್ಲದೆ, ಭತ್ತ, ಜೋಳ, ಹತ್ತಿ, ಸೋಯಾಬೀನ್ ಮತ್ತು ಇತರ ಎಣ್ಣೆಬೀಜಗಳಂತಹ ಬಂಪರ್ ಬೆಳೆಗಳ ಬಿತ್ತನೆಯೂ ಹೆಚ್ಚಾಗುತ್ತದೆ.

“ಪ್ರಸ್ತುತ ಇರುವ ವೇಗದಲ್ಲಿಯೇ ಮಳೆ ಮುಂದುವರೆದರೆ ಮತ್ತು ಇತರ ಪರಿಸ್ಥಿತಿಗಳು ಅನುಕೂಲಕರವಾಗಿದ್ದರೆ ಮುಂದಿನ 4-5 ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ” ಎಂದು ಐಎಂಡಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವರ್ಷ, ಮಾನ್ಸೂನ್ ಮೇ 30ರಂದು ಕೇರಳದ ಕರಾವಳಿಯನ್ನು ತಲುಪಿತು. ಇದಕ್ಕೂ ಮೊದಲು ಜೂನ್ 8 (2023), ಮೇ 29 (2022), ಜೂನ್ 3 (2021) ಮತ್ತು ಜೂನ್ 1 (2020)ರಂದು ಕೇರಳದಲ್ಲಿ ಮುಂಗಾರು ಪ್ರವೇಶವಾಗಿತ್ತು.

ಇದನ್ನೂ ಓದಿ: Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, ಬೆಂಗಳೂರಲ್ಲೂ ಮೇ26ರವರೆಗೆ ಭಾರಿ ಮಳೆ

ಇದನ್ನೂ ಓದಿ
Image
Bangalore Rains: ಬೆಂಗಳೂರಿನಲ್ಲಿ ಮಧ್ಯಾಹ್ನದಿಂದಲೇ ಶುರುವಾದ ಮಳೆ
Image
ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆ
Image
ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಸಾಲು ಅವಾಂತರ
Image
ಸಿಡಿಲಿಗೆ ಒಂದೇ ದಿನ ಐವರು ಸಾವು: ಈ ಸಿಡಿಲಿನಿಂದ ತಪ್ಪಿಸಿಕೊಳ್ಳುವುದ್ಹೇಗೆ?

ನೈಋತ್ಯ ಮಾನ್ಸೂನ್ ಭಾರತದ ಕೃಷಿ ಆರ್ಥಿಕತೆಗೆ ಅತ್ಯಗತ್ಯವಾಗಿದ್ದು, ವಾರ್ಷಿಕ ಮಳೆಯ ಸುಮಾರು 70%ರಷ್ಟು ಭಾಗವನ್ನು ಹೊಂದಿದೆ. ಇದು ದೇಶದ ನಿವ್ವಳ ಬಿತ್ತನೆ ಪ್ರದೇಶದ ಸುಮಾರು 51% ಅನ್ನು ಬೆಂಬಲಿಸುತ್ತದೆ.

ಮೇ 13ರಂದು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು ಉತ್ತರ ಅಂಡಮಾನ್ ಸಮುದ್ರದ ಕೆಲವು ಭಾಗಗಳಿಗೆ ಮಾನ್ಸೂನ್ ನಿಗದಿತ ಸಮಯಕ್ಕಿಂತ 2 ದಿನ ಮುಂಚಿತವಾಗಿ ಪ್ರವೇಶಿಸಿತ್ತು. ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದ ಹೆಚ್ಚಿನ ಭಾಗಗಳು ಅದರಲ್ಲೂ ಲಕ್ಷದ್ವೀಪದ ಕೆಲವು ಭಾಗಗಳು, ಕೇರಳ, ತಮಿಳುನಾಡು, ಕರ್ನಾಟಕ, ದಕ್ಷಿಣ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಬಂಗಾಳ ಕೊಲ್ಲಿಯ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ: Karnataka Rains: ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ವರ್ಷಧಾರೆ

ಈ ವರ್ಷ ದೇಶಾದ್ಯಂತ ನೈಋತ್ಯ ಮಾನ್ಸೂನ್ ಋತುಮಾನದ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ. ಮೇ 22ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳು ರೆಡ್ ಅಲರ್ಟ್‌ನಲ್ಲಿವೆ. ಕೇರಳ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮೇ 24ರವರೆಗೆ ಭಾರೀ ಮಳೆಯಾಗುವ ಬಗ್ಗೆ ಐಎಂಡಿ ಎಚ್ಚರಿಕೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ