AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ,ದಕ್ಷಿಣ ಭಾರತದಲ್ಲಿ ಬಿರುಸುಗೊಳ್ಳಲಿದೆ ಮುಂಗಾರು; ಜೂನ್ 15ಕ್ಕೆ ಒಡಿಶಾ ಮತ್ತು ಬಂಗಾಳಕ್ಕೆ ಆಗಮನ

Monsoon: ಭಾರತದ ದಕ್ಷಿಣ ಪರ್ಯಾಯ ದ್ವೀಪ ಕರಾವಳಿಯಲ್ಲಿ ಮುಂದಿನ 3 ರಿಂದ 4 ದಿನಗಳಲ್ಲಿ ಗಾಳಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಮಹಾರಾಷ್ಟ್ರ ,ದಕ್ಷಿಣ ಭಾರತದಲ್ಲಿ ಬಿರುಸುಗೊಳ್ಳಲಿದೆ ಮುಂಗಾರು; ಜೂನ್ 15ಕ್ಕೆ ಒಡಿಶಾ ಮತ್ತು ಬಂಗಾಳಕ್ಕೆ ಆಗಮನ
ಅಜ್ಮೇರ್ ನಲ್ಲಿ ಕಂಡ ದೃಶ್ಯ
TV9 Web
| Edited By: |

Updated on: Jun 06, 2021 | 3:35 PM

Share

ದೆಹಲಿ: ನೈಋತ್ಯ ಮಾನ್ಸೂನ್ ಭಾನುವಾರ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಮತ್ತು ತಮಿಳುನಾಡಿನ ಉಳಿದ ಭಾಗಗಳಲ್ಲಿ ಮತ್ತಷ್ಟು ತೀವ್ರವಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮುಂಗಾರು ಜೂನ್ 15 ರೊಳಗೆ ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಬಿಹಾರದ ಕೆಲವು ಭಾಗಗನ್ನು ತಲುಪಲಿದೆ. ಐಎಂಡಿ ತನ್ನ ಇತ್ತೀಚಿನ ಮುನ್ಸೂಚನೆಯಲ್ಲಿ, ಮುಂದಿನ 5 ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಜೂನ್ 10 ರವರೆಗೆ ಮಳೆಯಾಗುವ ನಿರೀಕ್ಷೆಯಿದೆ.

ಭಾರತದ ದಕ್ಷಿಣ ಪರ್ಯಾಯ ದ್ವೀಪ ಕರಾವಳಿಯಲ್ಲಿ ಮುಂದಿನ 3 ರಿಂದ 4 ದಿನಗಳಲ್ಲಿ ಗಾಳಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 2 ದಿನಗಳಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಭಾರತವು ಜೂನ್ ಮತ್ತು ಸೆಪ್ಟೆಂಬರ್ ನಡುವೆ ಶೇ 70 ಕ್ಕಿಂತ ಹೆಚ್ಚು ವಾರ್ಷಿಕ ಮಳೆ ಪಡೆಯುತ್ತದೆ. ಈ ವರ್ಷ, ಹವಾಮಾನ ಇಲಾಖೆಯು ದೇಶದಲ್ಲಿ ಸಾಮಾನ್ಯ ಮತ್ತು ಅದಕ್ಕಿಂತ ಸ್ವಲ್ಪ ಹೆಚ್ಚು ಮಳೆಯ ನಿರೀಕ್ಷಿಸಿದೆ. ಐಎಂಡಿ ಈ ಜೂನ್‌ನಲ್ಲಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆಯನ್ನು ಸಹ ನೀಡಿದೆ. ಮುಂದಿನ ಐದು ದಿನಗಳಲ್ಲಿ ದೇಶದಲ್ಲಿ ಯಾವುದೇ ಬಿಸಿ ಗಾಳಿಯ ಪರಿಸ್ಥಿತಿಗಳಿಲ್ಲ ಎಂದು ಅದು ಹೇಳಿದೆ.

ಏತನ್ಮಧ್ಯೆ, ಮಾನ್ಸೂನ್ ತನ್ನ ಸಾಮಾನ್ಯ ಪ್ರಾರಂಭದ ದಿನಾಂಕಕ್ಕಿಂತ ಎರಡು ದಿನಗಳ ಮುಂಚಿತವಾಗಿ ಶನಿವಾರ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಆಗಮಿಸಿತು.

ಕರ್ನಾಟಕದಲ್ಲಿ ಮುಂಗಾರು ಶುಕ್ರವಾರ ರಾಜ್ಯದ ಉತ್ತರ ಆಂತರಿಕ ಭಾಗಗಳಿಗೆ ತಲುಪಿತು. ಇದು ಭಾರಿ ಮಳೆಗೆ ಕಾರಣವಾಗಿದೆ. ನಿರಂತರ ಮಳೆಯಿಂದಾಗಿ ಬೆಂಗಳೂರಿನ ಅನೇಕ ಭಾಗಗಳು ಮುಳುಗಿದ್ದವು. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Monsoon Rains: ಈ ವರ್ಷ ಮುಂಗಾರು 2 ದಿನ ತಡ: ಕರ್ನಾಟಕದಲ್ಲಿ ಜೂನ್ 1ರಿಂದ 3ರವರೆಗೆ ಭಾರಿ ಮಳೆ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?