
ತಿರುವನಂತಪುರಂ, ಮೇ 24: ಇಂದು ನೈಋತ್ಯ ಮಾನ್ಸೂನ್ (Monsoon 2025) ಕೇರಳವನ್ನು ತಲುಪಿದೆ. 2009ರಲ್ಲಿ ಮೇ 23ರಂದು ಮಾನ್ಸೂನ್ ಆಗಮನವಾಗಿತ್ತು. ಅದಾದ ಬಳಿಕ ಇದೇ ಮೊದಲ ಬಾರಿ ಅಂದರೆ 16 ವರ್ಷಗಳ ಬಳಿಕ ಮೇ ಕೊನೆಯ ವಾರದೊಳಗೆ ಮಾನ್ಸೂನ್ ಆರಂಭವಾಗಿದೆ. ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1ರ ಬಳಿಕ ಕೇರಳಕ್ಕೆ ಪ್ರವೇಶವಾಗಲಿದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ ಮತ್ತು ಅಕ್ಟೋಬರ್ 15ರ ವೇಳೆಗೆ ಸಂಪೂರ್ಣವಾಗಿ ಕಡಿಮೆಯಾಗುತ್ತದೆ.
ಕಳೆದ ವರ್ಷ ಮೇ 30ರಂದು ದಕ್ಷಿಣ ರಾಜ್ಯದ ಮೇಲೆ ಮಾನ್ಸೂನ್ ಪ್ರವೇಶಿಸಿತು. 2023ರಲ್ಲಿ ಜೂನ್ 8, 2022ರಲ್ಲಿ ಮೇ 29, 2021ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 2019ರಲ್ಲಿ ಜೂನ್ 8 ಮತ್ತು 2018ರಲ್ಲಿ ಮೇ 29ಎಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿತ್ತು. ಹವಾಮಾನಶಾಸ್ತ್ರಜ್ಞರ ಪ್ರಕಾರ, ಮಳೆಗಾಲದ ಋತುವಿನಲ್ಲಿ ಮಳೆಯ ಪ್ರಾರಂಭದ ದಿನಾಂಕ ಮತ್ತು ದೇಶದಲ್ಲಿ ಒಟ್ಟು ಮಳೆಯ ನಡುವೆ ಯಾವುದೇ ನೇರ ಸಂಬಂಧವಿಲ್ಲ. ಕೇರಳದಲ್ಲಿ ಮುಂಗಾರು ಬೇಗ ಅಥವಾ ತಡವಾಗಿ ಆಗಮಿಸುತ್ತದೆ ಎಂದರೆ ಅದು ದೇಶದ ಇತರ ಭಾಗಗಳನ್ನು ಅದಕ್ಕೆ ಅನುಗುಣವಾಗಿ ಆವರಿಸುತ್ತದೆ ಎಂದರ್ಥವಲ್ಲ.
Southwest Monsoon has set in over Kerala today, the 24th May, 2025, against the normal date of 1st June. Thus, southwest monsoon has set in over Kerala 8 days before the normal date: IMD pic.twitter.com/sstbHe0TnM
— ANI (@ANI) May 24, 2025
ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಆಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮೇ 28ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ
ಐಎಂಡಿ ಪ್ರಕಾರ, ಮುಂಗಾರು ಕೇರಳದಲ್ಲಿ ಮಾತ್ರವಲ್ಲದೆ ಕರ್ನಾಟಕದ ಕೆಲವು ಭಾಗಗಳು, ಪುದುಚೇರಿ, ತಮಿಳುನಾಡು ಮತ್ತು ಮಿಜೋರಾಂನಲ್ಲಿಯೂ ಆಗಮಿಸಿದೆ. ಇದು ವೇಗವಾಗಿ ಮುಂದುವರಿಯುತ್ತಿದ್ದು, ಮುಂದಿನ 2-3 ದಿನಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡಿನ ಉಳಿದ ಪ್ರದೇಶಗಳು ಹಾಗೂ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ತಲುಪುವ ನಿರೀಕ್ಷೆಯಿದೆ. ಕೇರಳಕ್ಕೆ ಕೊನೆಯ ಬಾರಿಗೆ ಮುಂಗಾರು ಮಳೆ 2009 ಮತ್ತು 2001ರಲ್ಲಿ ಇಷ್ಟು ಬೇಗ ಆಗಮಿಸಿತ್ತು. ಆಗ ಮೇ 23ರಂದು ಮುಂಗಾರು ಕೇರಳ ರಾಜ್ಯವನ್ನು ತಲುಪಿತ್ತು.
Southwest Monsoon has set in over Kerala, today the 24 th May 2025:
Southwest Monsoon has set in over Kerala today, the 24th May, 2025, against the normal date of 1st June. Thus, southwest monsoon has set in over Kerala 8 days before the normal date. This is the earliest date… pic.twitter.com/n9TcdkG3Ym
— India Meteorological Department (@Indiametdept) May 24, 2025
ಕಳೆದ 25 ವರ್ಷಗಳಲ್ಲಿ, ಅತ್ಯಂತ ವಿಳಂಬವಾದ ಆಗಮನ 2016ರಲ್ಲಿ ಸಂಭವಿಸಿತ್ತು. ಆಗ ಮಾನ್ಸೂನ್ ಜೂನ್ 9ರಂದು ಕೇರಳವನ್ನು ಪ್ರವೇಶಿಸಿತ್ತು. ಕಳೆದ ಎರಡು ದಿನಗಳಿಂದ ಕೇರಳ ರಾಜ್ಯದಲ್ಲಿ ಮಾನ್ಸೂನ್ ಆರಂಭಕ್ಕೆ ಅನುಕೂಲಕರವಾದ ಎಲ್ಲಾ ಪರಿಸ್ಥಿತಿಗಳು ಅಭಿವೃದ್ಧಿಗೊಂಡಿವೆ. ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮಾನ್ಸೂನ್ ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ: ದೆಹಲಿಯಲ್ಲಿ 23 ಕೊವಿಡ್ ಕೇಸ್ ದಾಖಲು; ಬೆಡ್, ಆಕ್ಸಿಜನ್ ರೆಡಿ ಮಾಡಿಟ್ಟುಕೊಳ್ಳಲು ಸರ್ಕಾರ ಆದೇಶ
ಮೇ 29ರವರೆಗೆ ಕೇರಳ ಮತ್ತು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದೆ. ಮುಂದಿನ ಐದು ದಿನಗಳಲ್ಲಿ ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿಯೂ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:46 pm, Sat, 24 May 25