AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Session 2022: ಇಂದಿನಿಂದ ಸಂಸತ್​​ ಮುಂಗಾರು ಅಧಿವೇಶನ ಆರಂಭ; 32 ಮಸೂದೆಗಳ ಮಂಡನೆ ಸಾಧ್ಯತೆ

Parliament Session: ಸಂಸತ್ತಿನ ಮುಂಗಾರು ಅಧಿವೇಶನ ಇಂದು (ಜುಲೈ 18) ಆರಂಭವಾಗಲಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ. ಈ ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಯವರ ಚುನಾವಣೆ ನಡೆಯಲಿದೆ.

Monsoon Session 2022: ಇಂದಿನಿಂದ ಸಂಸತ್​​ ಮುಂಗಾರು ಅಧಿವೇಶನ ಆರಂಭ; 32 ಮಸೂದೆಗಳ ಮಂಡನೆ ಸಾಧ್ಯತೆ
ಸಂಸತ್ ಭವನImage Credit source: Hindustan Times
TV9 Web
| Edited By: |

Updated on:Jul 18, 2022 | 9:19 AM

Share

ನವದೆಹಲಿ: ಇಂದಿನಿಂದ ಸಂಸತ್​ನಲ್ಲಿ ಮುಂಗಾರು ಅಧಿವೇಶನ (Monsoon Session) ಶುರುವಾಗಲಿದೆ. ಮುಂಗಾರು ಅಧಿವೇಶನದ ಎರಡು ಸದನಗಳಲ್ಲಿ ಮಂಡಿಸಲು ವಿವಿಧ ಇಲಾಖೆಗಳು ಈಗಾಗಲೇ 32 ಮಸೂದೆಗಳನ್ನು ಸೂಚಿಸಿವೆ. ಆ 32 ಮಸೂದೆಗಳಲ್ಲಿ 14 ಮಂಡನೆಗೆ ಸಿದ್ಧವಾಗಿವೆ. ಸಂಸತ್ತಿನ ಮುಂಗಾರು ಅಧಿವೇಶನ ಇಂದು (ಜುಲೈ 18) ಆರಂಭವಾಗಲಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ. ಈ ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ (President Polls) ಮತ್ತು ಉಪರಾಷ್ಟ್ರಪತಿಯವರ ಚುನಾವಣೆ ನಡೆಯಲಿದೆ. ಹಾಗಾಗಿ, ಈ ಮುಂಗಾರು ಅಧಿವೇಶನ ಹೆಚ್ಚಿನ ಮಹತ್ವ ಹೊಂದಿದೆ.

2022ರ ಮುಂಗಾರು ಅಧಿವೇಶನದಲ್ಲಿ 18 ಸಿಟ್ಟಿಂಗ್‌ಗಳು ನಡೆಯಲಿದ್ದು, ಒಟ್ಟು 108 ಗಂಟೆಗಳ ಕಾಲಾವಕಾಶ ಲಭ್ಯವಾಗಲಿದೆ. 108 ಗಂಟೆಗಳಲ್ಲಿ ಸುಮಾರು 62 ಗಂಟೆಗಳು ಸರ್ಕಾರಿ ವ್ಯವಹಾರಕ್ಕಾಗಿ ಮೀಸಲಿರುತ್ತದೆ. ಉಳಿದ ಸಮಯವನ್ನು ಪ್ರಶ್ನೋತ್ತರ ಸಮಯ, ಶೂನ್ಯ ವೇಳೆ ಮತ್ತು ಖಾಸಗಿ ಸದಸ್ಯರ ವ್ಯವಹಾರಕ್ಕೆ ನಿಗದಿಪಡಿಸಲಾಗಿದೆ. ಸಂಸತ್ತಿನ ಹಿಂದಿನ ಅಧಿವೇಶನಗಳಂತೆ ಈ ಅಧಿವೇಶನದಲ್ಲಿಯೂ ಸರಿಯಾದ ಕೊವಿಡ್ ಪ್ರೋಟೋಕಾಲ್ ಅನುಸರಿಸಲಾಗುವುದು. ಈ ನಿಟ್ಟಿನಲ್ಲಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ
Image
Presidential Election: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ; ಚುನಾವಣಾ ಕಣದಲ್ಲಿ ದ್ರೌಪದಿ ಮುರ್ಮು, ಯಶವಂತ ಸಿನ್ಹಾ
Image
ಶ್ರೀಲಂಕಾ ಬಿಕ್ಕಟ್ಟು: ಭಾರತದ ಹಸ್ತಕ್ಷೇಪಕ್ಕೆ ಡಿಎಂಕೆ, ಎಐಎಡಿಎಂಕೆ ಒತ್ತಾಯ, ಜುಲೈ 19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ
Image
ಮಹಾರಾಷ್ಟ್ರದ ಶಾಸಕರ ಅನರ್ಹತೆ ವಿಚಾರ; ಜುಲೈ 20ರಲ್ಲಿ ಸುಪ್ರೀಂಕೋರ್ಟ್​​​ನಲ್ಲಿ ವಿಚಾರಣೆ

ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಈ 32 ಮಸೂದೆಗಳ ಪೈಕಿ ಕೆಲವನ್ನು ಈಗಾಗಲೇ ಸಂಸತ್ತಿನ ಸ್ಥಾಯಿ ಸಮಿತಿಗಳು ಚರ್ಚಿಸಿವೆ. ಸಂಸತ್ತಿನ ಈ ಅಧಿವೇಶನದಲ್ಲಿ ಮಂಡಿಸಲು ವಿವಿಧ ಇಲಾಖೆಗಳು 32 ಮಸೂದೆಗಳನ್ನು ಸೂಚಿಸಿವೆ. ಅದರಲ್ಲಿ 14 ಮಸೂದೆಗಳು ಸಿದ್ಧವಾಗಿವೆ. ಆದರೆ ನಾವು ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸುವುದಿಲ್ಲ ಎಂದು ತಿಳಿಸಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರವು ಸುಮಾರು 45 ಪಕ್ಷಗಳನ್ನು ಆಹ್ವಾನಿಸಲಾಗಿತ್ತು. ಅದರಲ್ಲಿ 36 ಪಕ್ಷಗಳು ಭಾಗವಹಿಸಿದ್ದವು.

ಇದನ್ನೂ ಓದಿ: Maharashtra Politics: ಏಕನಾಥ್ ಶಿಂಧೆ ಬೆಂಬಲಿಗ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು; ಠಾಕ್ರೆ ತಂಡದಿಂದ ಸುಪ್ರೀಂ ಕೋರ್ಟ್​ಗೆ ಮನವಿ

ಇಂದು (ಜುಲೈ 18ಕ್ಕೆ) ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 24ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರವಧಿ ಕೊನೆಗೊಳ್ಳಲಿದ್ದು, ಆಗಸ್ಟ್ 10ರಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರವಧಿ ಪೂರ್ಣಗೊಳ್ಳಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವುದಕ್ಕಾಗಿ ವಿಪಕ್ಷಗಳು ನಾಳೆ ಸಭೆ ಸೇರಲಿದೆ. ಬಿಜೆಪಿ ಶನಿವಾರ ಪಶ್ಚಿಮ ಬಂಗಾಳದ ಗವರ್ನರ್ ಜಗದೀಪ್ ದನ್ಖರ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್​​ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಈ ಬಾರಿಯ ಅಧಿವೇಶನದಲ್ಲಿ ವಿಪಕ್ಷಗಳು ಅಗ್ನಿಪಥ್ ಯೋಜನೆ, ನಿರುದ್ಯೋಗ, ಹಣದುಬ್ಬರ ಸೇರಿದಂತೆ ದೇಶದ ಸಮಸ್ಯೆಗಳ ಬಗ್ಗೆ ಪ್ರಶ್ನಿಸಲಿವೆ. ಇದೇ ವೇಳೆ ಕೇಂದ್ರ ಸರ್ಕಾರ ಹಲವಾರು ಕಾಯ್ದೆಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಈಗಾಗಲೇ ಇಂಡಿಯನ್ ಅಂಟಾರ್ಟಿಕಾ ಮಸೂದೆ 2022 ಲೋಕಸಭೆಯಲ್ಲಿ ಬಾಕಿ ಇದೆ. ಅಂತರ್ ರಾಜ್ಯ ನದಿ ನೀರು ವಿವಾದ (ತಿದ್ದುಪಡಿ) ಮಸೂದೆ 2019 ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು, ಮುಂದಿನ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಸಾಮೂಹಿಕ ವಿನಾಶದ ಶಸ್ತ್ರಾಸ್ತ್ರಗಳು ಮತ್ತು ಅವುಗಳ ವಿತರಣಾ ವ್ಯವಸ್ಥೆಗಳು (ಕಾನೂನುಬಾಹಿರ ಚಟುವಟಿಕೆಗಳ ನಿಷೇಧ) ತಿದ್ದುಪಡಿ ಮಸೂದೆ 2022 ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು, ರಾಜ್ಯಸಭೆಯಲ್ಲಿ ಅನುಮೋದನೆಗೆ ಬಾಕಿ ಇದೆ. ಅರಣ್ಯ ಜೀವಿ (ರಕ್ಷಣೆ) ತಿದ್ದುಪಡಿ ಮಸೂದೆ 2021, ಆ್ಯಂಟಿ ಮೆರಿಟೈಮ್ ಪೈರಸಿ ಮಸೂದೆ 2019, ರಾಷ್ಟ್ರೀಯ ಡೋಪಿಂಗ್ ವಿರೋಧಿ ಮಸೂದೆ 2021 ಲೋಕಸಭೆಯಲ್ಲಿ ಬಾಕಿ ಇದೆ.

ಇದನ್ನೂ ಓದಿ: Monsoon session ನಾಳೆ ಸಂಸತ್ ಮುಂಗಾರು ಅಧಿವೇಶನ: ಕೇಂದ್ರ ಸರ್ಕಾರದಿಂದ ಸರ್ವಪಕ್ಷಗಳ ಸಭೆ, ಮೋದಿ ಗೈರು

ಸಂವಿಧಾನದ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ) ಆದೇಶಗಳು (ಎರಡನೇ ತಿದ್ದುಪಡಿ) ಮಸೂದೆ 2022 (ಉತ್ತರ ಪ್ರದೇಶಕ್ಕೆ ಸಂಬಂಧಿಸಿದಂತೆ ಜಿಲ್ಲೆಗಳ ಹೆಸರು ಬದಲಾವಣೆ) ಮಾರ್ಚ್ 2022ರಲ್ಲಿ ಲೋಕಸಭೆಯಲ್ಲಿ ಮಂಡನೆ ಆಗಿತ್ತು.

ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ 2022, ಕೌಟುಂಬಿಕ ನ್ಯಾಯಾಲಯಗಳ (ತಿದ್ದುಪಡಿ) ಮಸೂದೆ, 2022 ಸೇರಿದಂತೆ ಹಲವು ಮಸೂದೆಗಳು ಮಂಡನೆಯಾಗಲಿವೆ.

Published On - 9:18 am, Mon, 18 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ