AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ವಿದೇಶದಲ್ಲಿ ಕೂತು ಸರ್ಕಾರವನ್ನು ಪ್ರಶ್ನಿಸಲಿದ್ದಾರೆಯೇ?

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾಲೆಳೆಯುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲಿಚ್ಛಿಸದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಇಂದು ಮತ್ತೊಂದು ಟ್ವೀಟ್ ಮೂಲಕ ಪ್ರಧಾನಿಯನ್ನು ಛೇಡಿಸಿದ್ದಾರೆ. ಭಾರತದಲ್ಲಿ ಕೊವಿಡ್-19 ವ್ಯಾಪಕವಾಗಿ ಹರಡಲು ಮೋದಿಯವರ ಅವೈಜ್ಞಾನಿಕ, ಅನಿಯೋಜಿತ ಲಾಕ್​ಡೌನ್ ಕಾರಣ ಎಂದು ಆರೋಪಿಸಿರುವ ರಾಹುಲ್, ಜನರು ತಮ್ಮ ಜೀವ ರಕ್ಷಿಸಿಕೊಳ್ಳಲು ತಾವೇ ಪ್ರಯತ್ನಪಡಬೇಕು ಯಾಕೆಂದರೆ, ಪ್ರಧಾನಿ ಮೋದಿಯವರು ನವಿಲಿನೊಂದಿಗೆ ಆಟವಾಡುವುದರಲ್ಲಿ ತಲ್ಲೀನರಾಗಿದ್ದಾರೆ ಎಂದು ಮೂದಲಿಸಿದ್ದಾರೆ. ‘‘ಭಾರತದಲ್ಲಿ ಈ ವಾರ ಕೊವಿಡ್-19 ಸೋಂಕಿತರ ಸಂಖ್ಯೆ […]

ರಾಹುಲ್ ಗಾಂಧಿ ವಿದೇಶದಲ್ಲಿ ಕೂತು ಸರ್ಕಾರವನ್ನು ಪ್ರಶ್ನಿಸಲಿದ್ದಾರೆಯೇ?
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 14, 2020 | 4:46 PM

Share

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾಲೆಳೆಯುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲಿಚ್ಛಿಸದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಇಂದು ಮತ್ತೊಂದು ಟ್ವೀಟ್ ಮೂಲಕ ಪ್ರಧಾನಿಯನ್ನು ಛೇಡಿಸಿದ್ದಾರೆ.

ಭಾರತದಲ್ಲಿ ಕೊವಿಡ್-19 ವ್ಯಾಪಕವಾಗಿ ಹರಡಲು ಮೋದಿಯವರ ಅವೈಜ್ಞಾನಿಕ, ಅನಿಯೋಜಿತ ಲಾಕ್​ಡೌನ್ ಕಾರಣ ಎಂದು ಆರೋಪಿಸಿರುವ ರಾಹುಲ್, ಜನರು ತಮ್ಮ ಜೀವ ರಕ್ಷಿಸಿಕೊಳ್ಳಲು ತಾವೇ ಪ್ರಯತ್ನಪಡಬೇಕು ಯಾಕೆಂದರೆ, ಪ್ರಧಾನಿ ಮೋದಿಯವರು ನವಿಲಿನೊಂದಿಗೆ ಆಟವಾಡುವುದರಲ್ಲಿ ತಲ್ಲೀನರಾಗಿದ್ದಾರೆ ಎಂದು ಮೂದಲಿಸಿದ್ದಾರೆ.

‘‘ಭಾರತದಲ್ಲಿ ಈ ವಾರ ಕೊವಿಡ್-19 ಸೋಂಕಿತರ ಸಂಖ್ಯೆ 50 ಲಕ್ಷದ ಗಡಿ ದಾಟಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷ ತಲುಪಲಿದೆ. ಒಬ್ಬ ವ್ಯಕ್ತಿಯ ಅಹಂಕಾರದ ಪ್ರತೀಕವಾಗಿರುವ ಅವೈಜ್ಞಾನಿಕ ಲಾಕ್​ಡೌನ್ ಇಡೀ ದೇಶದಲ್ಲಿ ಕೊರೊನಾ ಸೋಂಕು ಹರಡಲು ಕಾರಣವಾಯಿತು. ಮೋದಿ ಸರ್ಕಾರ ಜನರಿಗೆ ಆತ್ಮನಿರ್ಭರರಾಗಲು ಹೇಳುತ್ತಿದೆ. ಅದರರ್ಥ ನಿಮ್ಮ ಜೀವ ಉಳಿಸಿಕೊಳ್ಳಲು ನೀವೇ ಹೋರಾಡಬೇಕು, ಯಾಕೆಂದರೆ, ಪ್ರಧಾನಿಯವರು ನವಿಲಿನೊಂದಿಗೆ ಆಡುವುದರಲ್ಲಿ ವ್ಯಸ್ತರಾಗಿದ್ದಾರೆ@RahulGandhi’’

ಆದರೆ, ವಿಪರ್ಯಾಸದ ಸಂಗತಿಯೆಂದರೆ, ಸರ್ಕಾರದ ತಪ್ಪುಗಳತ್ತ ಬೊಟ್ಟು ಮಾಡಿ ತೋರುವ ರಾಹುಲ್ ಗಾಂಧಿ ಇಂದು ಆರಂಭಗೊಂಡಿರುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಉಪಸ್ಥಿತರಿಲ್ಲ. ಅವರ ತಾಯಿ ಸೋನಿಯಾ ಗಾಂಧಿಯವರ ವೈದ್ಯಕೀಯ ತಪಾಸಣೆಗೆ ವಿದೇಶಕ್ಕೆ ಹಾರಿದ್ದಾರೆ. ಸಂಸತ್ತಿನಲ್ಲಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಇದಕ್ಕಿಂತ ಉತ್ತಮ ಅವಕಾಶ ರಾಹುಲ್​ಗಾಗಲೀ, ಕಾಂಗ್ರೆಸ್​ಗಾಗಲೀ ಅಥವಾ ವಿರೋಧಪಕ್ಷಗಳ ಮಿತ್ರಕೂಟಕ್ಕಾಗಲೀ ಮತ್ತೊಂದಿಲ್ಲ.

ನೂರೆಂಟು ಜ್ವಲಂತ ಸಮಸ್ಯೆಗಳು ದೇಶವನ್ನು ಶೊಚನೀಯ ಸ್ಥಿತಿಗೆ ನೂಕಿವೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ, ಖುದ್ದು ರಾಹುಲ್ ಹೇಳಿರುವಂತೆ ಅಪಾಯಕಾರಿಯಾಗಿ ಹಬ್ಬುತ್ತಿರುವ ಕೊವಿಡ್ ಸೋಂಕು, ಪಾತಾಳಕ್ಕೆ ಕುಸಿದಿರುವ ಜಿಡಿಪಿ (-23.9%), ಕಳೆದ ಅರ್ಧ ಶತಮಾನದಲ್ಲೇ ಕಂಡರಿಯದ ನಿರುದ್ಯೋಗ ಸಮಸ್ಯೆ, ರಾಜ್ಯಗಳಿಗೆ ಅವುಗಳ ಪಾಲಿನ ಜಿಎಸ್​ಟಿಯನ್ನು ಹಂಚದಿರುವುದು, ಚೀನಾದೊಂದಿಗೆ ನಿಲ್ಲದ ಗಡಿ ಸಂಘರ್ಷ, ಎಲ್​ಒಸಿಯಲ್ಲಿ ಮುಂದುವರಿದಿರುವ ಭಯೋತ್ಪಾದಕ ಚಟುವಟಿಕೆಗಳು, ಇನ್ನೂ ಹತ್ತಾರು ಸಮಸ್ಯೆಗಳು.

ವಿದೇಶದಲ್ಲಿ ಕೂತು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುವ ನಿರ್ಧಾರವನ್ನು ರಾಹುಲ್ ಮಾಡಿಕೊಂಡಿದ್ದಾರೆಯೇ?

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ