AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಲೋಕಸಭೆಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ಮುಂಗಾರು ಅಧಿವೇಶನದಿಂದ 4 ಕಾಂಗ್ರೆಸ್ ಸಂಸದರು ವಜಾ

ಸಂಸದರಾದ ಮಣಿಕಂ ಟಾಗೋರ್, ರಮ್ಯಾ ಹರಿದಾಸ್, ಜೋತಿಮಣಿ ಮತ್ತು ಟಿಎನ್ ಪ್ರತಾಪನ್ ಅವರನ್ನು  ಮುಂಗಾರು ಅಧಿವೇಶನದಿಂದ ಅಮಾನತು ಮಾಡಲಾಗಿದೆ.

Breaking ಲೋಕಸಭೆಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ಮುಂಗಾರು ಅಧಿವೇಶನದಿಂದ 4 ಕಾಂಗ್ರೆಸ್ ಸಂಸದರು ವಜಾ
ಲೋಕಸಭೆಯಿಂದ ಅಮಾನತುಗೊಂಡ ಸಂಸದರು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 25, 2022 | 4:29 PM

ಲೋಕಸಭೆಯಲ್ಲಿ(Lok Sabha) ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ. ಸಂಸದರಾದ ಮಣಿಕಂ ಟಾಗೋರ್, ರಮ್ಯಾ ಹರಿದಾಸ್, ಜೋತಿಮಣಿ ಮತ್ತು ಟಿಎನ್ ಪ್ರತಾಪನ್ ಅವರನ್ನು ಮುಂಗಾರು ಅಧಿವೇಶನದಿಂದ (Monsoon Session) ಅಮಾನತು ಮಾಡಲಾಗಿದೆ.  ಮುಂಗಾರು ಅಧಿವೇಶನದ 6ನೇ ದಿನವಾದ ಇಂದು (ಸೋಮವಾರ) ಬೆಲೆ ಏರಿಕೆ ವಿರುದ್ದ ಪ್ಲೆಕಾರ್ಡ್ ಹಿಡಿದು ಸಂಸದರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಇದಕ್ಕಿಂತ ಮುನ್ನ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿರುವುದನ್ನು ಖಂಡಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುವುದಾದರೆ ಸದನದಿಂದ ಹೊರಗೆ ಹೋಗಿ ಎಂದು ಗುಡುಗಿದ್ದರು. ಸಂಸದರ ಪ್ರತಿಭಟನೆಗೆ ಅಸಮಾಧಾನ ಸೂಚಿಸಿದ ಸ್ಪೀಕರ್, ನಾನು 3 ಗಂಟೆಯ ನಂತರ ಚರ್ಚೆ ಮಾಡಲು ಸಿದ್ಧ. ಆದರೆ ಸದನದ ಒಳಗೆ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುವುದನ್ನು ನಾನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ನೀವು ಪ್ಲೆಕಾರ್ಡ್ ತೋರಿಸಬೇಕೆಂದಿದ್ದರೆ ಅದನ್ನು ಸದನದ ಹೊರಗೆ ಮಾಡಿ. ನಾನು ಚರ್ಚೆಗೆ ಸಿದ್ದ ಆದರೆ ನನ್ನ ಮೃದು ಸ್ವಭಾವವನ್ನು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಸ್ಪೀಕರ್ ಬಿರ್ಲಾ, ಸದನದ ಕಲಾಪನ್ನು ನಾಳೆಗೆ ಮುಂದೂಡಿದ್ದಾರೆ.

Published On - 4:02 pm, Mon, 25 July 22

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!