AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶ ಯಾವಾಗ? ಹವಾಮಾನ ಇಲಾಖೆ ಏನು ಹೇಳುತ್ತೆ ಇಲ್ಲಿದೆ ಮಾಹಿತಿ

ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ.

Monsoon: ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶ ಯಾವಾಗ? ಹವಾಮಾನ ಇಲಾಖೆ ಏನು ಹೇಳುತ್ತೆ ಇಲ್ಲಿದೆ ಮಾಹಿತಿ
ಮುಂಗಾರು
ನಯನಾ ರಾಜೀವ್
|

Updated on: May 17, 2023 | 7:58 AM

Share

ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ಮತ್ತಷ್ಟು ಓದಿ: Cyclone Mocha: ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ, ಇದುವರೆಗೆ 81 ಮಂದಿ ಸಾವು

ಭಾರತವು ಕೃಷಿಯನ್ನೇ ಆಧರಿಸಿದ ದೇಶವಾಗಿದ್ದು, ಭಾರತದ ಆರ್ಥಿಕತೆಯು ಮಳೆಯನ್ನು ಅವಲಂಬಿಸಿದೆ. ದೇಶದ ಒಟ್ಟಾರೆ ವಾರ್ಷಿಕ ಮಳೆ ಪ್ರಮಾಣದಲ್ಲಿ ಶೇ.75ರಷ್ಟನ್ನು ಮುಂಗಾರು ಮಳೆಯೇ ಒಳಗೊಂಡಿದೆ.

ಈ ಬಾರಿ ಮುಂಗಾರು ವಿಳಂಬವಾದರೆ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?