AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋರ್ಬಿ ಸೇತುವೆ ಪ್ರಕರಣ: ನ್ಯಾಯಾಲಯಕ್ಕೆ ಎಸ್​​ಐಟಿ ಸಲ್ಲಿಸಿದ ತನಿಖಾ ವರದಿಯಲ್ಲೇನಿದೆ?

ಗುಜರಾತಿನ ಮೋರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿ ಪ್ರಕಾರ ಮೊರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಒರೆವಾ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡವನ್ನು ರಚನೆ ಮಾಡಿತ್ತು.

ಮೋರ್ಬಿ ಸೇತುವೆ ಪ್ರಕರಣ: ನ್ಯಾಯಾಲಯಕ್ಕೆ ಎಸ್​​ಐಟಿ ಸಲ್ಲಿಸಿದ ತನಿಖಾ ವರದಿಯಲ್ಲೇನಿದೆ?
ಸಾಂದರ್ಭಿಕ ಚಿತ್ರ Image Credit source: gujarati
ಅಕ್ಷಯ್​ ಪಲ್ಲಮಜಲು​​
|

Updated on: Oct 10, 2023 | 4:23 PM

Share

ಗುಜರಾತಿನ ಮೋರ್ಬಿ ಕೇಬಲ್ ಸೇತುವೆ (Morbi Cable Bridge) ಅಪಘಾತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿ ಪ್ರಕಾರ ಮೊರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಒರೆವಾ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡವನ್ನು ರಚನೆ ಮಾಡಿತ್ತು. ಇದೀಗ ಈ ಬಗ್ಗೆ ಎಸ್ ಐಟಿ ತಂಡ 5 ಸಾವಿರ ಪುಟಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಸೇತುವೆಯನ್ನು ನಿರ್ವಹಿಸಿದ ಮತ್ತು ದುರಸ್ತಿ ಮಾಡಿದ ಓರೆವಾ ಕಂಪನಿಯೇ ಕಾರಣ ಎಂದು ಎಸ್​​ಐಟಿ ವರದಿ ಹೇಳಿದೆ. ಎಂಡಿ, ಮ್ಯಾನೇಜರ್ ದಿನೇಶ್ ದವೆ, ಮ್ಯಾನೇಜರ್ ದೀಪಕ್ ಪರೇಖ್ ಸೇರಿದಂತೆ ಅನೇಕ ನಿರ್ಲಕ್ಷ್ಯದ ಕೆಲಸ ಇದಕ್ಕೆ ಕಾರಣ ಎಂದು ಹೇಳಿದೆ. ಇದೀಗ ಈ ಬಗ್ಗೆ ಎಸ್​​ಐಟಿ ಕೋರ್ಟ್​​ ಮುಂದೆ ವರದಿಯನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತ; 35 ಮಂದಿ ಸಾವು

ಒರೆವಾ ಕಂಪನಿಯ ತಾಂತ್ರಿಕ ಮತ್ತು ಕಾರ್ಯಾಚರಣೆಯ ದೋಷಗಳು: ಎಸ್​​ಐಟಿ ವರದಿ

ಮೊರ್ಬಿ ಕೇಬಲ್ ಸೇತುವೆ ಮೇಲೆ ಯಾವುದೇ ನಿರ್ಬಂಧವಿರಲಿಲ್ಲ. ಇಷ್ಟೇ ಜನರು ಅಲ್ಲಿ ಹೋಗಬಹುದು ಎಂದು ಯಾವುದೇ ನಿಯಮ ಮಾಡಿರಲಿಲ್ಲ. ಸೇತುವೆಯನ್ನು ತೆರೆಯುವ ಮೊದಲು ಯಾವುದೇ ಫಿಟ್‌ನೆಸ್ ವರದಿಯನ್ನು ಸಿದ್ಧಪಡಿಸಲಾಗಿಲ್ಲ. ಈ ಬಗ್ಗೆ ಕಂಪನಿ ಪುರಸಭೆಯ ಗಮನಕ್ಕೆ ತಂದಿಲ್ಲ ಮತ್ತು ಟಿಕೆಟ್​​​ ಮಾರಾಟಕ್ಕೆ ಯಾವುದೇ ನಿರ್ಬಂಧವಿರಲಿಲ್ಲ. ಇನ್ನು ಸೇತುವೆಯಲ್ಲಿ ಯಾವುದೇ ಸುರಕ್ಷಿತ ಕ್ರಮಗಳು ಇರಲಿಲ್ಲ ಹಾಗೂ ಭದ್ರತಾ ಸಿಬ್ಬಂದಿಗಳ ಕೊರತೆ ಇತ್ತು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್