AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋರ್ಬಿ ಸೇತುವೆ ಪ್ರಕರಣ: ನ್ಯಾಯಾಲಯಕ್ಕೆ ಎಸ್​​ಐಟಿ ಸಲ್ಲಿಸಿದ ತನಿಖಾ ವರದಿಯಲ್ಲೇನಿದೆ?

ಗುಜರಾತಿನ ಮೋರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿ ಪ್ರಕಾರ ಮೊರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಒರೆವಾ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡವನ್ನು ರಚನೆ ಮಾಡಿತ್ತು.

ಮೋರ್ಬಿ ಸೇತುವೆ ಪ್ರಕರಣ: ನ್ಯಾಯಾಲಯಕ್ಕೆ ಎಸ್​​ಐಟಿ ಸಲ್ಲಿಸಿದ ತನಿಖಾ ವರದಿಯಲ್ಲೇನಿದೆ?
ಸಾಂದರ್ಭಿಕ ಚಿತ್ರ Image Credit source: gujarati
ಅಕ್ಷಯ್​ ಪಲ್ಲಮಜಲು​​
|

Updated on: Oct 10, 2023 | 4:23 PM

Share

ಗುಜರಾತಿನ ಮೋರ್ಬಿ ಕೇಬಲ್ ಸೇತುವೆ (Morbi Cable Bridge) ಅಪಘಾತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿ ಪ್ರಕಾರ ಮೊರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಒರೆವಾ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡವನ್ನು ರಚನೆ ಮಾಡಿತ್ತು. ಇದೀಗ ಈ ಬಗ್ಗೆ ಎಸ್ ಐಟಿ ತಂಡ 5 ಸಾವಿರ ಪುಟಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಸೇತುವೆಯನ್ನು ನಿರ್ವಹಿಸಿದ ಮತ್ತು ದುರಸ್ತಿ ಮಾಡಿದ ಓರೆವಾ ಕಂಪನಿಯೇ ಕಾರಣ ಎಂದು ಎಸ್​​ಐಟಿ ವರದಿ ಹೇಳಿದೆ. ಎಂಡಿ, ಮ್ಯಾನೇಜರ್ ದಿನೇಶ್ ದವೆ, ಮ್ಯಾನೇಜರ್ ದೀಪಕ್ ಪರೇಖ್ ಸೇರಿದಂತೆ ಅನೇಕ ನಿರ್ಲಕ್ಷ್ಯದ ಕೆಲಸ ಇದಕ್ಕೆ ಕಾರಣ ಎಂದು ಹೇಳಿದೆ. ಇದೀಗ ಈ ಬಗ್ಗೆ ಎಸ್​​ಐಟಿ ಕೋರ್ಟ್​​ ಮುಂದೆ ವರದಿಯನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತ; 35 ಮಂದಿ ಸಾವು

ಒರೆವಾ ಕಂಪನಿಯ ತಾಂತ್ರಿಕ ಮತ್ತು ಕಾರ್ಯಾಚರಣೆಯ ದೋಷಗಳು: ಎಸ್​​ಐಟಿ ವರದಿ

ಮೊರ್ಬಿ ಕೇಬಲ್ ಸೇತುವೆ ಮೇಲೆ ಯಾವುದೇ ನಿರ್ಬಂಧವಿರಲಿಲ್ಲ. ಇಷ್ಟೇ ಜನರು ಅಲ್ಲಿ ಹೋಗಬಹುದು ಎಂದು ಯಾವುದೇ ನಿಯಮ ಮಾಡಿರಲಿಲ್ಲ. ಸೇತುವೆಯನ್ನು ತೆರೆಯುವ ಮೊದಲು ಯಾವುದೇ ಫಿಟ್‌ನೆಸ್ ವರದಿಯನ್ನು ಸಿದ್ಧಪಡಿಸಲಾಗಿಲ್ಲ. ಈ ಬಗ್ಗೆ ಕಂಪನಿ ಪುರಸಭೆಯ ಗಮನಕ್ಕೆ ತಂದಿಲ್ಲ ಮತ್ತು ಟಿಕೆಟ್​​​ ಮಾರಾಟಕ್ಕೆ ಯಾವುದೇ ನಿರ್ಬಂಧವಿರಲಿಲ್ಲ. ಇನ್ನು ಸೇತುವೆಯಲ್ಲಿ ಯಾವುದೇ ಸುರಕ್ಷಿತ ಕ್ರಮಗಳು ಇರಲಿಲ್ಲ ಹಾಗೂ ಭದ್ರತಾ ಸಿಬ್ಬಂದಿಗಳ ಕೊರತೆ ಇತ್ತು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್