AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಭಾರತದೊಂದಿಗೆ ಇದ್ದೇವೆ; ಗುಜರಾತ್​​ನ ಮೊರ್ಬಿ ಸೇತುವೆ ದುರಂತಕ್ಕೆ ಜೋ ಬೈಡೆನ್ ಸಂತಾಪ

ಸೇತುವೆ ಕುಸಿತದ ಸಮಯದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖದಲ್ಲಿರುವ ಗುಜರಾತ್ ಜನರೊಂದಿಗೆ ನಾವಿದ್ದೇವೆ ಎಂದು ಜೋ ಬೈಡೆನ್ ಹೇಳಿಕೆ ನೀಡಿದ್ದಾರೆ.

ನಾವು ಭಾರತದೊಂದಿಗೆ ಇದ್ದೇವೆ; ಗುಜರಾತ್​​ನ ಮೊರ್ಬಿ ಸೇತುವೆ ದುರಂತಕ್ಕೆ ಜೋ ಬೈಡೆನ್ ಸಂತಾಪ
ಮೊರ್ಬಿ ಸೇತುವೆ ಕುಸಿತವಾದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 01, 2022 | 8:21 AM

ವಾಷಿಂಗ್ಟನ್: ಗುಜರಾತ್‌ನ ಮೊರ್ಬಿ (Morbi Tragedy) ನಗರದಲ್ಲಿ ಕೇಬಲ್ ಸೇತುವೆ ಕುಸಿದು 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ (Joe Biden) ತೀವ್ರ ಸಂತಾಪ ಸೂಚಿಸಿದ್ದಾರೆ. 1 ಶತಮಾನಕ್ಕೂ ಹೆಚ್ಚು ಹಳೆಯದಾದ ಕೇಬಲ್ ಸೇತುವೆಯನ್ನು ಇತ್ತೀಚೆಗೆ ದುರಸ್ತಿ ಮಾಡಿ, ನವೀಕರಣಗೊಳಿಸಲಾಗಿತ್ತು. ಕಳೆದ 6 ದಿನಗಳ ಹಿಂದೆ ಈ ಸೇತುವೆಯನ್ನು ಸಾರ್ವಜನಿಕರಿಗೆ ತೆರೆಯಲಾಗಿತ್ತು. ಭಾನುವಾರ ಸಂಜೆ ಸೇತುವೆಯನ್ನು ನೋಡಲು ಜನರು ಕಿಕ್ಕಿರಿದು ಸೇರಿದ್ದರು. ಈ ವೇಳೆ ಭಾರ ತಾಳಲಾರದೆ ಸೇತುವೆ ಕುಸಿದುಬಿದ್ದಿತ್ತು. ನದಿಯಲ್ಲಿ ಬಿದ್ದವರಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಲೇ ಇದೆ.

“ನಾವು ಹಾಗೂ ನಮ್ಮ ಮನಸು ಭಾರತದೊಂದಿಗಿದೆ. ಸೇತುವೆ ಕುಸಿತದ ಸಮಯದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಜಿಲ್ ಮತ್ತು ನಾನು ನಮ್ಮ ಆಳವಾದ ಸಂತಾಪವನ್ನು ಕಳುಹಿಸುತ್ತೇವೆ. ಹಲವಾರು ಜೀವಗಳನ್ನು ಕಳೆದುಕೊಂಡಿರುವ ದುಃಖದಲ್ಲಿರುವ ಗುಜರಾತ್ ಜನರೊಂದಿಗೆ ನಾವಿದ್ದೇವೆ” ಎಂದು ಜೋ ಬೈಡೆನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಗುಜರಾತ್: ಮೊರ್ಬಿ ನದಿ ತೂಗುಸೇತುವೆ ಮೇಲೆ ಕೆಲ ಯುವಕರು ನಡೆಸಿದ ಹುಚ್ಚಾಟ ಉಳಿದವರ ಪಾಲಿಗೆ ಮುಳುವಾಯಿತೇ?

“ಅಮೆರಿಕಾ ಮತ್ತು ಭಾರತದ ಪ್ರಜೆಗಳ ನಡುವೆ ಉತ್ತಮ ಬಾಂಧವ್ಯವಿದೆ. ಈ ಕಷ್ಟದ ಸಮಯದಲ್ಲಿ ನಾವು ಭಾರತೀಯ ಜನರೊಂದಿಗೆ ನಿಲ್ಲುತ್ತೇವೆ ಮತ್ತು ಅವರನ್ನು ಬೆಂಬಲಿಸುತ್ತೇವೆ” ಎಂದು ಜೋ ಬೈಡೆನ್ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೃತರ ಪ್ರತಿ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ಗುಜರಾತ್ ಸರ್ಕಾರ ಮೃತರ ಕುಟುಂಬಕ್ಕೆ 4 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದೆ.

ಇದನ್ನೂ ಓದಿ: Morbi Bridge Tragedy: ಮೊರ್ಬಿ ಸೇತುವೆ ಕುಸಿತ ದುರಂತದಲ್ಲಿ ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು

ಗುಜರಾತ್‌ನ ಮೊರ್ಬಿಯಲ್ಲಿ ಅಕ್ಟೋಬರ್ 30 ಒಂದು ‘ಕರಾಳ ಭಾನುವಾರ’ವಾಗಿತ್ತು. ಪ್ರಸಿದ್ಧ ತೂಗು ಸೇತುವೆ ಮೇಲೆ ನಡೆಯಲು 17 ರೂ. ಕೊಟ್ಟು ಪಡೆದ ಪಾಸ್ ಅನೇಕರಿಗೆ ಅದು ಸಾವಿನ ಟಿಕೆಟ್ ಆಗಿತ್ತು. 15 ವರ್ಷಗಳ ಕಾಲ ಸೇತುವೆಯ ನಿರ್ವಹಣೆ ಮತ್ತು ಉಸ್ತುವಾರಿ ವಹಿಸಿಕೊಂಡ ಒರೆವಾ ಕಂಪನಿಯು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಶತಮಾನದಷ್ಟು ಹಳೆಯದಾದ, ಕೇವಲ 150ರಿಂದ 200 ಜನರ ಸಾಮರ್ಥ್ಯದ ಸೇತುವೆಯ ಮೇಲೆ ಹೋಗಲು ಬರೋಬ್ಬರಿ 650 ಜನರಿಗೆ ಟಿಕೆಟ್ ನೀಡಿತ್ತು. ವೀಕೆಂಡ್ ಆದ್ದರಿಂದ ಜನ ಕಿಕ್ಕಿರಿದು ಸೇರಿದ್ದರು. ಇದು ದುರಂತಕ್ಕೆ ಕಾರಣವಾಯಿತು ಎನ್ನಲಾಗಿದೆ.

ಗುಜರಾತ್‌ನ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒರೆವಾ ಪೊಲೀಸ್ ಅಧಿಕಾರಿಗಳು ಸೇತುವೆಯನ್ನು ನವೀಕರಿಸಿದ ಕಂಪನಿ, ಟಿಕೆಟ್ ಮಾರಾಟಗಾರರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ 9 ಜನರನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ