AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮತ್ತೊಮ್ಮೆ ಸರ್ಜಿಕಲ್​ ಸ್ಟ್ರೈಕ್​​ ನಡೆಸುತ್ತೇವೆ..’-ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಖಡಕ್​ ಎಚ್ಚರಿಕೆ ನೀಡಿದ ಅಮಿತ್​ ಶಾ

ಭಾರತ ಪಾಕಿಸ್ತಾನದ ಉಗ್ರನೆಲೆಗಳ ಮೇಲೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್​ ಇಂದಿಗೂ ಮೈನವಿರೇಳಿಸುವ ಒಂದು ಸಂದರ್ಭ. ಉರಿಯಲ್ಲಿ ಯೋಧರ ಮೇಲೆ ನಡೆದ ಉಗ್ರದಾಳಿಗೆ ಪ್ರತೀಕಾರವಾಗಿ 2016ರ ಸೆಪ್ಟೆಂಬರ್ 29ರಂದು ಭಾರತ ಪಾಕಿಸ್ತಾನದ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿತ್ತು.

‘ಮತ್ತೊಮ್ಮೆ ಸರ್ಜಿಕಲ್​ ಸ್ಟ್ರೈಕ್​​ ನಡೆಸುತ್ತೇವೆ..’-ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಖಡಕ್​ ಎಚ್ಚರಿಕೆ ನೀಡಿದ ಅಮಿತ್​ ಶಾ
ಗೃಹ ಸಚಿವ ಅಮಿತ್ ಶಾ
TV9 Web
| Edited By: |

Updated on:Oct 14, 2021 | 4:03 PM

Share

ಗೃಹಸಚಿವ ಅಮಿತ್​ ಶಾ ಪಾಕಿಸ್ತಾನಕ್ಕೊಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ. ‘ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್​ ಸ್ಟ್ರೈಕ್​ ನಡೆಸುತ್ತೇವೆ’ ಎಂದು ನೆರೆರಾಷ್ಟ್ರಕ್ಕೆ ಕಟುವಾಗಿ ಎಚ್ಚರಿಸಿದ್ದಾರೆ.  ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತಿಕ್ರಮಣ, ನಿಯಮ ಉಲ್ಲಂಘನೆ, ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯಂಥ ಕೃತ್ಯಗಳು ಮುಂದುವರಿದರೆ ಇನ್ನೊಮ್ಮೆ ಸರ್ಜಿಕಲ್​ ಸ್ಟ್ರೈಕ್​ ನಿಶ್ಚಿತ ಎಂದಿದ್ದಾರೆ.  

ಮನೋಹರ್​ ಪರಿಕ್ಕರ್​ ಅವರು ರಕ್ಷಣಾ ಮಂತ್ರಿಯಾಗಿದ್ದಾಗ, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆಸಿದ ಸರ್ಜಿಕಲ್​ ಸ್ಟ್ರೈಕ್​ ಒಂದು ಮಹತ್ವದ ಹೆಜ್ಜೆ. ಭಾರತದ ಗಡಿ ಪ್ರದೇಶಕ್ಕೆ ತೊಂದರೆ ನೀಡುವ ಯಾರನ್ನೂ ಬಿಡುವುದಿಲ್ಲ ಎಂದು ಆ ಸರ್ಜಿಕಲ್​ ಸ್ಟ್ರೈಕ್​ ಮೂಲಕ ಸಂದೇಶ ನೀಡಿದ್ದೇವೆ.  ಹಿಂದೆ ಮಾತುಕತೆಗೆ ಸಮಯವಿತ್ತು. ಆದರೆ ಈಗ ಏನಿದ್ದರೂ ತೆಗೆದುಕೊಂಡಿದ್ದನ್ನು ಕೊಡುವುದಷ್ಟೇ ನಮಗೆ ಗೊತ್ತಿದೆ ಎಂದು ಶಾ ಹೇಳಿದ್ದಾರೆ.

ಭಾರತ ಪಾಕಿಸ್ತಾನದ ಉಗ್ರನೆಲೆಗಳ ಮೇಲೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್​ ಇಂದಿಗೂ ಮೈನವಿರೇಳಿಸುವ ಒಂದು ಸಂದರ್ಭ. ಉರಿಯಲ್ಲಿ ಯೋಧರ ಮೇಲೆ ನಡೆದ ಉಗ್ರದಾಳಿಗೆ ಪ್ರತೀಕಾರವಾಗಿ 2016ರ ಸೆಪ್ಟೆಂಬರ್ 29ರಂದು ಭಾರತ ಪಾಕಿಸ್ತಾನದ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿತ್ತು. ಉರಿಯಲ್ಲಿ ದಾಳಿ ನಡೆಸಿದ್ದು ಜೈಷ್​ ಎ ಮೊಹಮ್ಮದ್​ ಸಂಘಟನೆ ಎಂಬುದು ಸಾಬೀತಾಗಿತ್ತು. ಇವರ ದಾಳಿಗೆ ಸುಮಾರು 19 ಯೋಧರು ಹುತಾತ್ಮರಾಗಿದ್ದರು. ಅದಕ್ಕೆ ಪ್ರತಿಯಾಗಿ ಭಾರತ ಸೇನೆ ನಡೆಸಿದ ದಾಳಿಯಲ್ಲಿ 20ಕ್ಕೂ ಹೆಚ್ಚಿನ ಉಗ್ರರು ಮೃತರಾಗಿದ್ದರು. ಅದಾದ ನಂತರ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಆತ್ಮಾಹುತಿ ಬಾಂಬ್​ ದಾಳಿ ನಡೆಸಿ, ಸುಮಾರು 40 ಸೈನಿಕರನ್ನು ಹತ್ಯೆ ಮಾಡಿದ್ದ ಉಗ್ರರಿಗೆ ಭಾರತ ಬಾಲಾಕೋಟ್​ ಏರ್​ಸ್ಟ್ರೈಕ್​ ಮೂಲಕ ಪಾಠ ಕಲಿಸಿತ್ತು. ಇದೀಗ ಪಾಕ್​ ಅಂಥ ಕೃತ್ಯ ಮುಂದುವರಿಸಿದರೆ ಸರ್ಜಿಕಲ್​ ಸ್ಟ್ರೈಕ್​ ಮುಂದುವರಿಯುತ್ತದೆ ಎಂದು ಅಮಿತ್​ ಶಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ:  ಅರ್ಚಕನನ್ನು ದೇಗುಲದ ಆವರಣದಲ್ಲೇ ಹತ್ಯೆಗೈದ ದುಷ್ಕರ್ಮಿಗಳು; ಪುತ್ರನೇ ಕಾರಣವಂತೆ ತಂದೆಯ ಕೊಲೆಗೆ !

T20 World Cup: ಭಾರತ ಫೈನಲ್‌ನಲ್ಲಿರುತ್ತದೆ; ಟಿ20 ವಿಶ್ವಕಪ್‌ನಲ್ಲಿ ಕನ್ನಡಿಗ ಮಿಂಚಲಿದ್ದಾರೆ ಎಂದ ಬ್ರೆಟ್ ಲೀ!

Published On - 3:37 pm, Thu, 14 October 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್