AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಲಸಿಕೆ ಅಭಿಯಾನದಲ್ಲಿ ಭಾರತದ ಇನ್ನೊಂದು ಸಾಧನೆ; ಶೇ.50ಕ್ಕೂ ಹೆಚ್ಚು ಅರ್ಹರಿಗೆ 2ಡೋಸ್ ಪೂರ್ಣ, ಪ್ರಧಾನಿ ಮೋದಿ ಟ್ವೀಟ್​​

ಭಾರತದಲ್ಲಿ ಜನವರಿ 16ರಿಂದ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಮೇ ತಿಂಗಳಲ್ಲಿ ಸರಾಸರಿ ಒಂದು ದಿನಕ್ಕೆ 16.69 ಲಕ್ಷ ಡೋಸ್ ನೀಡಲಾಗುತ್ತಿತ್ತು. ಅದು ನವೆಂಬರ್​ ಹೊತ್ತಿಗೆ ಒಂದು ದಿನಕ್ಕೆ ಸರಾಸರಿ 59.32 ಲಕ್ಷ ಡೋಸ್​ ಕೊಡಲಾಗುತ್ತಿದೆ. 

ಕೊವಿಡ್​ 19 ಲಸಿಕೆ ಅಭಿಯಾನದಲ್ಲಿ ಭಾರತದ ಇನ್ನೊಂದು ಸಾಧನೆ; ಶೇ.50ಕ್ಕೂ ಹೆಚ್ಚು ಅರ್ಹರಿಗೆ 2ಡೋಸ್ ಪೂರ್ಣ, ಪ್ರಧಾನಿ ಮೋದಿ ಟ್ವೀಟ್​​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 06, 2021 | 10:13 AM

Share

ವಿಶ್ವದ ಎಲ್ಲ ರಾಷ್ಟ್ರಗಳಿಂಗಿಂತಲೂ ಮೊದಲು ಕೊರೊನಾ ಲಸಿಕೆ ನೀಡಲು ಶುರು ಮಾಡಿದ ಭಾರತ ಇದೀಗ ಕೊವಿಡ್​ 19 ಲಸಿಕಾ ಅಭಿಯಾನ (Covid 19 Vaccination Drive)ದಲ್ಲಿ ಇನ್ನೊಂದು ಮೈಲುಗಲ್ಲು ಸ್ಥಾಪಿಸಿದೆ. ದೇಶದಲ್ಲಿ ಶೇ.50ಕ್ಕಿಂತಲೂ ಹೆಚ್ಚು ಅರ್ಹ ವಯಸ್ಕರು ಸಂಪೂರ್ಣವಾಗಿ ಕೊವಿಡ್​ 19 ಲಸಿಕೆ ಪಡೆದಿದ್ದಾರೆ. ಅಂದರೆ ಭಾರತದಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರಿಗೆ ಎರಡೂ ಡೋಸ್ ಕೊರೊನಾ ಲಸಿಕೆ ಪೂರ್ಣಗೊಂಡಿದೆ.  ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿ, ಸಂತೋಷ ವ್ಯಕ್ತಪಡಿಸಿದ್ದಾರೆ. ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಹೀಗೆ ಎಲ್ಲರೂ ಒಟ್ಟಾಗಿ ಸಾಗೋಣ ಎಂಬ ಸಂದೇಶ ನೀಡಿದ್ದಾರೆ. 

ನಿನ್ನೆ ಈ ಬಗ್ಗೆ ಟ್ವೀಟ್​ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ನಾವು ಯಶಸ್ವಿಯಾಗುತ್ತೇವೆ. ಅಭಿನಂದನೆಗಳು ಭಾರತ..ದೇಶದಲ್ಲಿ ಶೇ.50ರಷ್ಟು ವಯಸ್ಕರು ಸಂಪೂರ್ಣವಾಗಿ ಲಸಿಕೆ ಪಡೆದಿದ್ದು ಹೆಮ್ಮೆಯ ಕ್ಷಣ ಎಂದು ಹೇಳಿದ್ದರು. ಹಾಗೇ, ಈ ಟ್ವೀಟ್​​ನ್ನು ಇಂದು ಪ್ರಧಾನಿ ಮೋದಿ ರೀಟ್ವೀಟ್ ಮಾಡಿಕೊಂಡಿದ್ದು, ಭಾರತದ ಲಸಿಕೆ ಅಭಿಯಾನ ಇನ್ನೊಂದು ಮೈಲಿಗಲ್ಲು ದಾಟಿದೆ. ಕೊವಿಡ್​ 19 ವಿರುದ್ಧ ಹೋರಾಟವನ್ನು ಬಲಪಡಿಸಿಕೊಳ್ಳಲು ಈ ವೇಗವನ್ನು ಕಾಯ್ದುಕೊಳ್ಳಬೇಕು. ಹಾಗೇ, ಕೊರೊನಾ ವಿರುದ್ಧದ ನಿಯಂತ್ರಣ ಕ್ರಮಗಳಾದ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಮರೆಯಬಾರದು ಎಂದು ಹೇಳಿದ್ದಾರೆ.

ದೇಶದಲ್ಲಿ ಒಟ್ಟಾರೆ 127.61 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಲಾಗಿದೆ. ಅದರಲ್ಲಿ 79.90 ಕೋಟಿ ವಯಸ್ಕರಿಗೆ ಒಂದು ಡೋಸ್​ ಮಾತ್ರ ಆಗಿದ್ದು, ಶೇ.47.71ಕೋಟಿ ಜನರಿಗೆ ಎರಡೂ ಡೋಸ್​ ಸಂಪೂರ್ಣಗೊಂಡಿದೆ ಎಂದು ಶುಕ್ರವಾರ ಕೇಂದ್ರ ಆರೋಗ್ಯ ಇಲಾಖೆ ಹೇಳಿತ್ತು. ಆದರೆ ಶನಿವಾರ ಒಂದೇ ದಿನ ದೇಶಾದ್ಯಂ ಒಟ್ಟೂ 1.04 ಕೋಟಿ ಡೋಸ್​ ಲಸಿಕೆ ನೀಡಲಾಗಿದ್ದು, ಅದರಲ್ಲಿ 75.12 ಕೋಟಿ ಲಕ್ಷ ಮಂದಿ ಎರಡನೇ ಡೋಸ್​ ತೆಗೆದುಕೊಂಡವರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಎರಡೂ ಡೋಸ್​ ಪೂರ್ಣಗೊಳಿಸಿದ ಅರ್ಹ ವಯಸ್ಕರ ಪ್ರಮಾಣ ಶೇ.50ಕ್ಕೂ ಹೆಚ್ಚಾಗಿದೆ. ಸದ್ಯ ದೇಶದಲ್ಲಿ ಶೇ.84.8ರಷ್ಟು ಮಂದಿಗೆ ಒಂದೇ ಡೋಸ್​ ಲಸಿಕೆಯಾಗಿದೆ.

ಭಾರತದಲ್ಲಿ ಜನವರಿ 16ರಿಂದ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಮೇ ತಿಂಗಳಲ್ಲಿ ಸರಾಸರಿ ಒಂದು ದಿನಕ್ಕೆ 16.69 ಲಕ್ಷ ಡೋಸ್ ನೀಡಲಾಗುತ್ತಿತ್ತು. ಅದು ನವೆಂಬರ್​ ಹೊತ್ತಿಗೆ ಒಂದು ದಿನಕ್ಕೆ ಸರಾಸರಿ 59.32 ಲಕ್ಷ ಡೋಸ್​ ಕೊಡಲಾಗುತ್ತಿದೆ.  ಭಾರತದಲ್ಲಿ ಫೆಬ್ರವರಿ 19ರ ಹೊತ್ತಿಗೆ 1 ಕೋಟಿ ಡೋಸ್​, ಏಪ್ರಿಲ್ 10ರಂದು 10 ಕೋಟಿ ಡೋಸ್​ ಲಸಿಕೆ ನೀಡಲಾಗಿತ್ತು. ನಂತರ ಅಕ್ಟೋಬರ್​ 21ಕ್ಕೆ 100 ಕೋಟಿ ಡೋಸ್​ ಲಸಿಕೆ ನೀಡಿಕೆ ಪೂರ್ಣಗೊಳಿಸುವ ಮೂಲಕ ಒಂದು ಮೈಲಿಗಲ್ಲು ಸ್ಥಾಪಿಸಲಾಗಿತ್ತು. ಅಂತೆಯೇ ಒಂದು ದಿನಕ್ಕೆ ಒಂದು ಕೋಟಿ ಡೋಸ್​ ನೀಡಿರುವ ದಾಖಲೆಗೂ ಭಾರತ ಸಾಕ್ಷಿಯಾಗಿದ್ದು, ಒಟ್ಟು 5 ಬಾರಿ ಈ ಸಾಧನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು (ಸೆ.17) ದೇಶಾದ್ಯಂತ ಲಸಿಕೆ ಅಭಿಯಾನ ಮಾಡಿ, 2.5 ಕೋಟಿ ಡೋಸ್ ನೀಡಲಾಗಿತ್ತು. ಈಗಂತೂ ಒಮಿಕ್ರಾನ್​ ಸೋಂಕು ಶುರುವಾಗಿರುವ ಹಿನ್ನೆಲೆಯಲ್ಲಿ ಜನರೂ ಲಸಿಕೆ ತೆಗೆದುಕೊಳ್ಳಲು ಮುಂದೆ ಬರುತ್ತಿದ್ದಾರೆ.

ಇದನ್ನೂ ಓದಿ: ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​

Published On - 9:58 am, Mon, 6 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ