AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedaranath Dham: ಹವಾಮಾನ ವೈಪರೀತ್ಯದ ನಡುವೆಯೂ ಕೇದಾರನಾಥಕ್ಕೆ ಭೇಟಿ ನೀಡಿದ 80,000ಕ್ಕೂ ಹೆಚ್ಚು ಭಕ್ತರು; ವಿಡಿಯೋ ಇಲ್ಲಿದೆ

Kedarnath Dham piligrims: ಕೇದಾರನಾಥ ಧಾಮದ ಬಾಗಿಲು ತೆರೆದ ಐದನೇ ದಿನದಂದು ಸುಮಾರು 80,000 ಕ್ಕೂ ಹೆಚ್ಚು ಯಾತ್ರಿಕರು ದೇವಾಲಯಕ್ಕೆ ಭೇಟಿ ನೀಡಿ ಕೇದಾರನಾಥನ ದರ್ಶನ ಪಡೆದಿದ್ದಾರೆ. ಯಾತ್ರೆಗೆ ಬಂದಿದ್ದ 6 ಮಂದಿ ಭಕ್ತರು ಆರೋಗ್ಯ ಹದಗೆಟ್ಟು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Kedaranath Dham: ಹವಾಮಾನ ವೈಪರೀತ್ಯದ ನಡುವೆಯೂ ಕೇದಾರನಾಥಕ್ಕೆ ಭೇಟಿ ನೀಡಿದ 80,000ಕ್ಕೂ ಹೆಚ್ಚು ಭಕ್ತರು; ವಿಡಿಯೋ ಇಲ್ಲಿದೆ
ಕೇದಾರನಾಥ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on: May 11, 2022 | 7:56 AM

ಕೇದಾರನಾಥ ಧಾಮದ (Kedarnath Dham) ಬಾಗಿಲು ತೆರೆದ ಐದನೇ ದಿನದಂದು ಸುಮಾರು 80,000 ಕ್ಕೂ ಹೆಚ್ಚು ಯಾತ್ರಿಕರು ದೇವಾಲಯಕ್ಕೆ ಭೇಟಿ ನೀಡಿ ಕೇದಾರನಾಥನ ದರ್ಶನ ಪಡೆದಿದ್ದಾರೆ. ಈ ಕುರಿತು ಎಎನ್​ಐ ಜತೆ ಮಾತನಾಡಿರುವ ರುದ್ರಪ್ರಯಾಗದ ಎಸ್ಪಿ ಆಯುಷ್ ಅಗರ್ವಾಲ್, ‘‘ಕೇದಾರನಾಥ ಧಾಮಕ್ಕೆ ಯಾತ್ರಿಕರ ಪ್ರಯಾಣ ಸುಗಮವಾಗಿ ಸಾಗುತ್ತಿದೆ. ದರ್ಶನಕ್ಕಾಗಿ ಪ್ರಯಾಣಿಕರು ಸರದಿಯಲ್ಲಿ ಕಾದಿದ್ದಾರೆ’’ ಎಂದು ತಿಳಿಸಿದ್ದಾರೆ. ದೇವರ ದರ್ಶನ ಪಡೆಯಲು ಕೇದಾರನಾಥ ಧಾಮದಲ್ಲಿರುವ ಹೆಲಿಪ್ಯಾಡ್‌ನಿಂದ ದೇವಸ್ಥಾನದವರೆಗೆ ಭಕ್ತಾದಿಗಳು ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಕೆಟ್ಟ ಹವಾಮಾನದ ನಡುವೆಯೂ ಭಕ್ತರು ಭೇಟಿ ನೀಡುತ್ತಿದ್ದು, ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಯಾತ್ರೆಗೆ ಬಂದಿದ್ದ 6 ಮಂದಿ ಭಕ್ತರು ಆರೋಗ್ಯ ಹದಗೆಟ್ಟು ಸಾವನ್ನಪ್ಪಿದ್ದಾರೆ ಎಂದು ಆಯುಷ್ ಅಗರ್ವಾಲ್ ಇದೇ ವೇಳೆ ಎಎನ್​ಐಗೆ ತಿಳಿಸಿದ್ದಾರೆ. ಕೆಟ್ಟ ಹವಾಮಾನದ ಕಾರಣದಿಂದ ಪ್ರಯಾಣಿಕರನ್ನು ಸೋನ್‌ಪ್ರಯಾಗದಲ್ಲಿ ನಿಲ್ಲಿಸಲಾಗಿದೆ. ಹವಾಮಾನದ ಬಗ್ಗೆ ಸ್ಪಷ್ಟ ಅರಿವು ಲಭಿಸಿದ ನಂತರ ಅವರನ್ನು ಸೋನ್‌ಪ್ರಯಾಗದಿಂದ ಕೇದಾರನಾಥ ಧಾಮಕ್ಕೆ ಕಳುಹಿಸಲಾಗುತ್ತಿದೆ ಎಂದು ಅಗರ್ವಾಲ್ ಮಾಹಿತಿ ನೀಡಿದ್ದಾರೆ

ಇದನ್ನೂ ಓದಿ
Image
ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ
Image
Chanakya Niti: ಚಾಣಕ್ಯ ನೀತಿ ಪ್ರಕಾರ ಈ ವಿಶೇಷ ಗುಣ ಹೊಂದಿರುವ ವಿದ್ಯಾರ್ಥಿ ಯಾವುದೆ ಕ್ಷೇತ್ರದಲ್ಲಾದರೂ ಜಯ ಸಾಧಿಸಬಲ್ಲ!
Image
Google: ಇಂದಿನಿಂದ ಗೂಗಲ್ ಹೊಸ ನಿಯಮ ಜಾರಿ: ಇನ್ಮುಂದೆ ಕಾರ್ಯನಿರ್ವಹಿಸಲ್ಲ ಈ ಆ್ಯಪ್​ಗಳು
Image
ಬಾಗಿಲು ತೆರೆದ ಕೇದಾರನಾಥ ದೇಗುಲ: ಮೊದಲ ದಿನವೇ 10 ಸಾವಿರ ಭಕ್ತರಿಂದ ದರ್ಶನ

5ನೇ ದಿನ ವಾತಾವರಣ ಹೇಗಿತ್ತು? ವಿಡಿಯೋ ಇಲ್ಲಿದೆ: 

ಮೇ 6ರಿಂದ ಭಕ್ತರಿಗೆ ದರ್ಶನ ಪಡೆಯಲು ಅವಕಾಶ:

ಕೇದಾರನಾಥ ದೇಗುಲದ ಬಾಗಿಲನ್ನು ಮೇ 6ರ ಶುಕ್ರವಾರ ಮುಂಜಾನೆ 6.25ಕ್ಕೆ ತೆರೆಯಲಾಗಿತ್ತು. ಮೊದಲ ದಿನ ಸುಮಾರು 10 ಸಾವಿರ ಭಕ್ತರು ದೇವರ ದರ್ಶನ ಪಡೆದಿದ್ದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಅಂದು ಉಪಸ್ಥಿತರಿದ್ದರು. ಮೇ 3ರಂದು ಗಂಗೋತ್ರಿ ಧಾಮ, ಯಮುನೋತ್ರಿ ಧಾಮಗಳನ್ನು ಅಕ್ಷಯ ತೃತೀಯದ ಪ್ರಯುಕ್ತ ತೆರೆಯಲಾಗಿತ್ತು.

ಆರು ತಿಂಗಳ ನಂತರ ಕೇದಾರನಾಥ ದೇವಾಲಯದ ಬಾಗಿಲು ತೆರೆಯುವ ದೃಶ್ಯ:

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್