AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಜುಲೈನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 90,000ಕ್ಕೂ ಅಧಿಕ ಪ್ರಯಾಣಿಕರನ್ನು ಹಿಡಿದು ದಂಡ ಹಾಕಿದ ರೈಲ್ವೆ ಇಲಾಖೆ

ನಕಲಿ ಗುರುತಿನ ಚೀಟಿ, ಟಿಕೆಟ್ ವರ್ಗಾವಣೆ ಮತ್ತು ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ.

ಮುಂಬೈ: ಜುಲೈನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 90,000ಕ್ಕೂ ಅಧಿಕ ಪ್ರಯಾಣಿಕರನ್ನು ಹಿಡಿದು ದಂಡ ಹಾಕಿದ ರೈಲ್ವೆ ಇಲಾಖೆ
ಪ್ರಾತಿನಿಧಿನ ಚಿತ್ರ
TV9 Web
| Edited By: |

Updated on: Aug 05, 2021 | 1:04 PM

Share

ಜುಲೈ ತಿಂಗಳಿನಲ್ಲಿ ಒಟ್ಟು 90,000ಕ್ಕೂ ಹೆಚ್ಚು ಪ್ರಯಾಣಿಕರು ಟಿಕೆಟ್ ಇಲ್ಲದೇ ಪ್ರಯಾಣ ಕೈಗೊಂಡಿದ್ದು ಅವರಿಗೆ ದಂಡ ಪಾವತಿಸಲಾಗಿದೆ ಎಂದು ಕೇಂದ್ರ ರೈಲ್ವೆ (CR) ಹೇಳಿದೆ. 90,000 ಕ್ಕೂ ಹೆಚ್ಚು ಪ್ರಯಾಣಿಕರು ಟಿಕೆಟ್ ಇಲ್ಲದೇ ಪ್ರಯಾಣ ಕೈಗೊಂಡಿದ್ದಾರೆ. ಅವರಿಂದ ಸಂಗ್ರಹಿಸಿದ ದಂಡದ ಒಟ್ಟೂ ಮೊತ್ತ 3.8 ಕೋಟಿ ರೂಪಾಯಿ. ರೈಲ್ವೆ ಇಲಾಖೆಯ ಪ್ರಕಾರ, ಜೂನ್​ ತಿಂಗಳಿನಿಂದಲೇ ಪ್ರಯಾಣಿಕರು ಟಿಕೆಟ್ ಇಲ್ಲದೇ ಪ್ರಯಾಣಿಸಲು ಪ್ರಾರಂಭಿಸಿದ್ದಾರೆ. ಕೇಂದ್ರ ರೈಲ್ವೆಯ ಪ್ರಕಾರ 62,000 ಕ್ಕೂ ಹೆಚ್ಚು ಮಂದಿ ದಂಡ ಪಾವತಿಸಿದ್ದು ಒಟ್ಟು 2.6 ಕೋಟಿ ಹಣ ಸಂಗ್ರಹವಾಗಿದೆ.

ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ ಪ್ರಸ್ತುತದಲ್ಲಿ ಅಗತ್ಯ ಸೇವೆ ಮತ್ತು ವೈದ್ಯಕೀಯ ಉದ್ದೇಶಗಳಿಗಾಗಿ ಪ್ರಯಾಣಿಸುವ ಜನರಿಗೆ ರೈಲ್ವೆ ಸೇವೆಗಳಿವೆ. ನಕಲಿ ಗುರುತಿನ ಚೀಟಿ, ಟಿಕೆಟ್ ವರ್ಗಾವಣೆ ಮತ್ತು ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. ಸರಿಯಾದ ಮಾನದಂಡದ ಪ್ರಕಾರ ಟಿಕೆಟ್ ಕೊಂಡು ಪ್ರಯಾಣ ಕೈಗೊಳ್ಳುವಂತೆ ಪ್ರಯಾಣಿಕರಲ್ಲಿ ಮನವಿ ಮಾಡಿದ್ದೇವೆ ಎಂದು ಕೇಂದ್ರ ರೈಲ್ವೆ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ರೈಲ್ವೆ ಪ್ರಕಾರ, ಏಪ್ರಿಲ್​ನಲ್ಲಿ ಕೊವಿಡ್ 19 ಸಾಂಕ್ರಾಮಿಕದಿಂದ ಸಾರ್ವಜನಿಕರಿಗೆ ಸ್ಳಳೀಯ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈ ವರ್ಷದ ಏಪ್ರಿಲ್ ಮತ್ತು ಜುಲೈ ತಿಂಗಳ ನಡುವೆ ಟಿಕೆಟ್ ಇಲ್ಲದೇ ಸಂಚರಿಸಿದ 304,000 ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ. ಅವರಿಂದ 15.9 ಕೋಟಿ ರೂಪಾಯಿಗಳ ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ:

Hubli Crime: ಹುಬ್ಬಳ್ಳಿ ಜೈಲಿನಿಂದ ಪರಾರಿಯಾಗಿದ್ದ ಕೈದಿಯ ನಿಗೂಢ ಸಾವು; ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ

Abdul Kalam: ಕಚ್ಚಾ ವಸ್ತುಗಳಿಂದಲೇ ತಯಾರಿಸಿದ ಅಬ್ದುಲ್ ಕಲಾಂ ಮೂರ್ತಿ; ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಅದ್ಭುತ ಪ್ರತಿಮೆ ನಿರ್ಮಾಣ

(More than 90,000 passengers fined because of traveling without ticket in mumbai)

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ