AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಜುಲೈನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 90,000ಕ್ಕೂ ಅಧಿಕ ಪ್ರಯಾಣಿಕರನ್ನು ಹಿಡಿದು ದಂಡ ಹಾಕಿದ ರೈಲ್ವೆ ಇಲಾಖೆ

ನಕಲಿ ಗುರುತಿನ ಚೀಟಿ, ಟಿಕೆಟ್ ವರ್ಗಾವಣೆ ಮತ್ತು ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ.

ಮುಂಬೈ: ಜುಲೈನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 90,000ಕ್ಕೂ ಅಧಿಕ ಪ್ರಯಾಣಿಕರನ್ನು ಹಿಡಿದು ದಂಡ ಹಾಕಿದ ರೈಲ್ವೆ ಇಲಾಖೆ
ಪ್ರಾತಿನಿಧಿನ ಚಿತ್ರ
TV9 Web
| Edited By: |

Updated on: Aug 05, 2021 | 1:04 PM

Share

ಜುಲೈ ತಿಂಗಳಿನಲ್ಲಿ ಒಟ್ಟು 90,000ಕ್ಕೂ ಹೆಚ್ಚು ಪ್ರಯಾಣಿಕರು ಟಿಕೆಟ್ ಇಲ್ಲದೇ ಪ್ರಯಾಣ ಕೈಗೊಂಡಿದ್ದು ಅವರಿಗೆ ದಂಡ ಪಾವತಿಸಲಾಗಿದೆ ಎಂದು ಕೇಂದ್ರ ರೈಲ್ವೆ (CR) ಹೇಳಿದೆ. 90,000 ಕ್ಕೂ ಹೆಚ್ಚು ಪ್ರಯಾಣಿಕರು ಟಿಕೆಟ್ ಇಲ್ಲದೇ ಪ್ರಯಾಣ ಕೈಗೊಂಡಿದ್ದಾರೆ. ಅವರಿಂದ ಸಂಗ್ರಹಿಸಿದ ದಂಡದ ಒಟ್ಟೂ ಮೊತ್ತ 3.8 ಕೋಟಿ ರೂಪಾಯಿ. ರೈಲ್ವೆ ಇಲಾಖೆಯ ಪ್ರಕಾರ, ಜೂನ್​ ತಿಂಗಳಿನಿಂದಲೇ ಪ್ರಯಾಣಿಕರು ಟಿಕೆಟ್ ಇಲ್ಲದೇ ಪ್ರಯಾಣಿಸಲು ಪ್ರಾರಂಭಿಸಿದ್ದಾರೆ. ಕೇಂದ್ರ ರೈಲ್ವೆಯ ಪ್ರಕಾರ 62,000 ಕ್ಕೂ ಹೆಚ್ಚು ಮಂದಿ ದಂಡ ಪಾವತಿಸಿದ್ದು ಒಟ್ಟು 2.6 ಕೋಟಿ ಹಣ ಸಂಗ್ರಹವಾಗಿದೆ.

ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ ಪ್ರಸ್ತುತದಲ್ಲಿ ಅಗತ್ಯ ಸೇವೆ ಮತ್ತು ವೈದ್ಯಕೀಯ ಉದ್ದೇಶಗಳಿಗಾಗಿ ಪ್ರಯಾಣಿಸುವ ಜನರಿಗೆ ರೈಲ್ವೆ ಸೇವೆಗಳಿವೆ. ನಕಲಿ ಗುರುತಿನ ಚೀಟಿ, ಟಿಕೆಟ್ ವರ್ಗಾವಣೆ ಮತ್ತು ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. ಸರಿಯಾದ ಮಾನದಂಡದ ಪ್ರಕಾರ ಟಿಕೆಟ್ ಕೊಂಡು ಪ್ರಯಾಣ ಕೈಗೊಳ್ಳುವಂತೆ ಪ್ರಯಾಣಿಕರಲ್ಲಿ ಮನವಿ ಮಾಡಿದ್ದೇವೆ ಎಂದು ಕೇಂದ್ರ ರೈಲ್ವೆ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ರೈಲ್ವೆ ಪ್ರಕಾರ, ಏಪ್ರಿಲ್​ನಲ್ಲಿ ಕೊವಿಡ್ 19 ಸಾಂಕ್ರಾಮಿಕದಿಂದ ಸಾರ್ವಜನಿಕರಿಗೆ ಸ್ಳಳೀಯ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈ ವರ್ಷದ ಏಪ್ರಿಲ್ ಮತ್ತು ಜುಲೈ ತಿಂಗಳ ನಡುವೆ ಟಿಕೆಟ್ ಇಲ್ಲದೇ ಸಂಚರಿಸಿದ 304,000 ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ. ಅವರಿಂದ 15.9 ಕೋಟಿ ರೂಪಾಯಿಗಳ ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ:

Hubli Crime: ಹುಬ್ಬಳ್ಳಿ ಜೈಲಿನಿಂದ ಪರಾರಿಯಾಗಿದ್ದ ಕೈದಿಯ ನಿಗೂಢ ಸಾವು; ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ

Abdul Kalam: ಕಚ್ಚಾ ವಸ್ತುಗಳಿಂದಲೇ ತಯಾರಿಸಿದ ಅಬ್ದುಲ್ ಕಲಾಂ ಮೂರ್ತಿ; ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಅದ್ಭುತ ಪ್ರತಿಮೆ ನಿರ್ಮಾಣ

(More than 90,000 passengers fined because of traveling without ticket in mumbai)

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ