AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಷ್ಟು ತೀವ್ರಗೊಳ್ಳುಲಿದೆ ರೈತರ ಪ್ರತಿಭಟನೆ.. ಗಾಜೀಪುರ್ ಗಡಿಗೆ ಇಂದು ಬರಲಿದ್ದಾರೆ 5 ಸಾವಿರಕ್ಕೂ ಹೆಚ್ಚು ರೈತರು

ಗಾಜೀಪುರ್ ಗಡಿಗೆ ಇಂದು 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ. ನಿನ್ನೆ ಮುಜಾಫುರ್​ನಗರದಲ್ಲಿ ನಡೆದ ಮಹಾಪಂಚಾಯತ್​ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ರಾಕೇಶ್ ಟಿಕಾಯತ್ ಬೆಂಬಲಕ್ಕೆ ಮಹಾಪಂಚಾಯತ್ ನಿರ್ಧರಿಸಿದೆ. 10 ಸಾವಿರಕ್ಕೂ ಹೆಚ್ಚು ರೈತರು ಮಹಾಪಂಚಾಯತ್​ನಲ್ಲಿ ಸೇರಿದ್ದರು.

ಮತ್ತಷ್ಟು ತೀವ್ರಗೊಳ್ಳುಲಿದೆ ರೈತರ ಪ್ರತಿಭಟನೆ.. ಗಾಜೀಪುರ್ ಗಡಿಗೆ ಇಂದು ಬರಲಿದ್ದಾರೆ 5 ಸಾವಿರಕ್ಕೂ ಹೆಚ್ಚು ರೈತರು
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 30, 2021 | 8:12 AM

Share

ದೆಹಲಿ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಹಿಂಸಾಚಾರದ ನೆಪದಲ್ಲಿ ರೈತರ ತೆರವಿಗೆ ಸರ್ಕಾರ ಮುಂದಾಗಿದೆ. ಆದ್ರೆ ಪ್ರತಿಭಟನಾ ಸ್ಥಳಕ್ಕೆ ಇಂದು ಮತ್ತಷ್ಟು ರೈತರು ಆಗಮಿಸಲಿದ್ದು ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ.

ಗಾಜೀಪುರ್ ಗಡಿಗೆ ಇಂದು 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ. ನಿನ್ನೆ ಮುಜಾಫುರ್​ನಗರದಲ್ಲಿ ನಡೆದ ಮಹಾಪಂಚಾಯತ್​ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ರಾಕೇಶ್ ಟಿಕಾಯತ್ ಬೆಂಬಲಕ್ಕೆ ಮಹಾಪಂಚಾಯತ್ ನಿರ್ಧರಿಸಿದೆ. 10 ಸಾವಿರಕ್ಕೂ ಹೆಚ್ಚು ರೈತರು ಮಹಾಪಂಚಾಯತ್​ನಲ್ಲಿ ಸೇರಿದ್ದರು. ರೈತರ ಹೋರಾಟಕ್ಕೆ ರಾಷ್ಟ್ರೀಯ ಲೋಕದಳದಿಂದಲೂ ಬೆಂಬಲ ಸಿಕ್ಕಿತ್ತು. ಸದ್ಯ ನಿನ್ನೆ ನಡೆದ ಘರ್ಷಣೆ ಬಳಿಕ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಟಿಕ್ರಿ, ಸಿಂಘು ಬಾರ್ಡರ್ ಪೊಲೀಸ್ ಕೋಟೆಯಂತಾಗಿದೆ. ಧರಣಿ ಸ್ಥಳದಲ್ಲಿ ಹೆಚ್ಚುವರಿಯಾಗಿ ಅರೆ ಸೇನಾಪಡೆ ನಿಯೋಜನೆ ಮಾಡಲಾಗಿದೆ. ಇಂದೂ ಕೂಡ ಗಾಜೀಪುರ್ ಗಡಿಗೆ 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ.

ಒಂದೇ ದಿನದಲ್ಲಿ ತಮ್ಮ ನಿಲುವು ಬದಲಿಸಿದ ಅಣ್ಣಾ ಹಜಾರೆ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಎರಡು ದಿನಗಳ ಹಿಂದೆ ರೈತರಿಗಾಗಿ ಉಪವಾಸ ಕೂರುವುದಾಗಿ ಹೇಳಿದ್ದರು. ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ರು. ಆದ್ರೆ ಬಿಜೆಪಿ ನಾಯಕರು ಭೇಟಿ ಬಳಿಕ ಅಣ್ಣಾ ಹಜಾರೆ ಯು ಟರ್ನ್ ಹೊಡೆದಿದ್ದಾರೆ. ಒಂದೇ ದಿನದಲ್ಲಿ ತಮ್ಮ ನಿಲವು ಬದಲಿಸಿದ್ದು ನೂತನ ಕೃಷಿ ಮಸೂದೆಗಳಿಗೆ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದಂತಾಗಿದೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!