AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಷ್ಟು ತೀವ್ರಗೊಳ್ಳುಲಿದೆ ರೈತರ ಪ್ರತಿಭಟನೆ.. ಗಾಜೀಪುರ್ ಗಡಿಗೆ ಇಂದು ಬರಲಿದ್ದಾರೆ 5 ಸಾವಿರಕ್ಕೂ ಹೆಚ್ಚು ರೈತರು

ಗಾಜೀಪುರ್ ಗಡಿಗೆ ಇಂದು 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ. ನಿನ್ನೆ ಮುಜಾಫುರ್​ನಗರದಲ್ಲಿ ನಡೆದ ಮಹಾಪಂಚಾಯತ್​ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ರಾಕೇಶ್ ಟಿಕಾಯತ್ ಬೆಂಬಲಕ್ಕೆ ಮಹಾಪಂಚಾಯತ್ ನಿರ್ಧರಿಸಿದೆ. 10 ಸಾವಿರಕ್ಕೂ ಹೆಚ್ಚು ರೈತರು ಮಹಾಪಂಚಾಯತ್​ನಲ್ಲಿ ಸೇರಿದ್ದರು.

ಮತ್ತಷ್ಟು ತೀವ್ರಗೊಳ್ಳುಲಿದೆ ರೈತರ ಪ್ರತಿಭಟನೆ.. ಗಾಜೀಪುರ್ ಗಡಿಗೆ ಇಂದು ಬರಲಿದ್ದಾರೆ 5 ಸಾವಿರಕ್ಕೂ ಹೆಚ್ಚು ರೈತರು
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Jan 30, 2021 | 8:12 AM

Share

ದೆಹಲಿ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಹಿಂಸಾಚಾರದ ನೆಪದಲ್ಲಿ ರೈತರ ತೆರವಿಗೆ ಸರ್ಕಾರ ಮುಂದಾಗಿದೆ. ಆದ್ರೆ ಪ್ರತಿಭಟನಾ ಸ್ಥಳಕ್ಕೆ ಇಂದು ಮತ್ತಷ್ಟು ರೈತರು ಆಗಮಿಸಲಿದ್ದು ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ.

ಗಾಜೀಪುರ್ ಗಡಿಗೆ ಇಂದು 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ. ನಿನ್ನೆ ಮುಜಾಫುರ್​ನಗರದಲ್ಲಿ ನಡೆದ ಮಹಾಪಂಚಾಯತ್​ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ರಾಕೇಶ್ ಟಿಕಾಯತ್ ಬೆಂಬಲಕ್ಕೆ ಮಹಾಪಂಚಾಯತ್ ನಿರ್ಧರಿಸಿದೆ. 10 ಸಾವಿರಕ್ಕೂ ಹೆಚ್ಚು ರೈತರು ಮಹಾಪಂಚಾಯತ್​ನಲ್ಲಿ ಸೇರಿದ್ದರು. ರೈತರ ಹೋರಾಟಕ್ಕೆ ರಾಷ್ಟ್ರೀಯ ಲೋಕದಳದಿಂದಲೂ ಬೆಂಬಲ ಸಿಕ್ಕಿತ್ತು. ಸದ್ಯ ನಿನ್ನೆ ನಡೆದ ಘರ್ಷಣೆ ಬಳಿಕ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಟಿಕ್ರಿ, ಸಿಂಘು ಬಾರ್ಡರ್ ಪೊಲೀಸ್ ಕೋಟೆಯಂತಾಗಿದೆ. ಧರಣಿ ಸ್ಥಳದಲ್ಲಿ ಹೆಚ್ಚುವರಿಯಾಗಿ ಅರೆ ಸೇನಾಪಡೆ ನಿಯೋಜನೆ ಮಾಡಲಾಗಿದೆ. ಇಂದೂ ಕೂಡ ಗಾಜೀಪುರ್ ಗಡಿಗೆ 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ.

ಒಂದೇ ದಿನದಲ್ಲಿ ತಮ್ಮ ನಿಲುವು ಬದಲಿಸಿದ ಅಣ್ಣಾ ಹಜಾರೆ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಎರಡು ದಿನಗಳ ಹಿಂದೆ ರೈತರಿಗಾಗಿ ಉಪವಾಸ ಕೂರುವುದಾಗಿ ಹೇಳಿದ್ದರು. ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ರು. ಆದ್ರೆ ಬಿಜೆಪಿ ನಾಯಕರು ಭೇಟಿ ಬಳಿಕ ಅಣ್ಣಾ ಹಜಾರೆ ಯು ಟರ್ನ್ ಹೊಡೆದಿದ್ದಾರೆ. ಒಂದೇ ದಿನದಲ್ಲಿ ತಮ್ಮ ನಿಲವು ಬದಲಿಸಿದ್ದು ನೂತನ ಕೃಷಿ ಮಸೂದೆಗಳಿಗೆ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದಂತಾಗಿದೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ