AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರ ಸ್ಥಾನ; ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ

ಶೇಕಡಾ 76 ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಅನುಮೋದಿಸಿದ್ದಾರೆ. ಶೇಕಡಾ 18 ರಷ್ಟು ಜನರು ಮಾತ್ರ ಅವರನ್ನು ಒಪ್ಪುವುದಿಲ್ಲ ಮತ್ತು ಶೇಕಡಾ 6 ರಷ್ಟು ಜನರು ಯಾವುದೇ ಅಭಿಪ್ರಾಯವನ್ನು ನೀಡಿಲ್ಲ. ಈ ಹಿಂದಿನ ರೇಟಿಂಗ್‌ಗಳಲ್ಲಿಯೂ ಮೋದಿ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದರು

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರ ಸ್ಥಾನ; ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ
ಪ್ರಧಾನಿ ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Sep 15, 2023 | 8:54 PM

Share

ನವದೆಹಲಿ, ಸೆಪ್ಟೆಂಬರ್ 15: ಅಮೆರಿಕ ಮೂಲದ ‘ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್’ ಮಾರ್ನಿಂಗ್ ಕನ್ಸಲ್ಟ್ (Morning Consult) ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಾಗತಿಕ ನಾಯಕರ ಪಟ್ಟಿಯಲ್ಲಿ ಶೇ 76 ರಷ್ಟು ರೇಟಿಂಗ್​ನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಶೇಕಡಾ 76 ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಅನುಮೋದಿಸಿದ್ದಾರೆ. ಶೇಕಡಾ 18 ರಷ್ಟು ಜನರು ಮಾತ್ರ ಅವರನ್ನು ಒಪ್ಪುವುದಿಲ್ಲ ಮತ್ತು ಶೇಕಡಾ 6 ರಷ್ಟು ಜನರು ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಮಾರ್ನಿಂಗ್ ಕನ್ಸಲ್ಟ್ ವರದಿ ತಿಳಿಸಿದೆ.

ಈ ತಿಂಗಳ ಆರಂಭದಲ್ಲಿ ನವದೆಹಲಿಯಲ್ಲಿ ಜಿ20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮೋದಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ ಅವರು ಶೇಕಡಾ 64 ರಷ್ಟು ಅನುಮೋದನೆ ಪಡೆದಿದ್ದರೆ, ಮೆಕ್ಸಿಕೊದ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ಶೇ 61 ರಷ್ಟು ಅನುಮೋದನೆಯನ್ನು ಹೊಂದಿದ್ದಾರೆ.

ಈ ಹಿಂದಿನ ರೇಟಿಂಗ್‌ಗಳಲ್ಲಿಯೂ ಮೋದಿ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದರು.

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಶೇಕಡಾ 40, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಶೇಕಡಾ 37, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶೇಕಡಾ 27 ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಶೇಕಡಾ 24 ರ ಅನುಮೋದನೆಯನ್ನು ಪಡೆದಿದ್ದಾರೆ.

ಈ ರೇಟಿಂಗ್‌ಗಳು ಸೆಪ್ಟೆಂಬರ್ 6 ರಿಂದ 12 ರವರೆಗೆ ಸಂಗ್ರಹಿಸಿದ ಡೇಟಾವನ್ನು ಆಧರಿಸಿವೆ ಎಂದು ಮಾರ್ನಿಂಗ್ ಕನ್ಸಲ್ಟ್ ಹೇಳಿದೆ. ಅಮೆರಿಕದಿಂದ, ಸರಾಸರಿ 45,000 ಮಂದಿ ಸಮೀಕ್ಷೆಯಲ್ಲಿ ಭಾಗಿಯಾದರೆ, ಇತರ ದೇಶಗಳಿಂದ, ಸರಿಸುಮಾರು 500 ರಿಂದ 5,000 ವರೆಗೆ ಜನ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Engineers Day 2023: ದೇಶ ನಿರ್ಮಾಣಕ್ಕೆ ಕನ್ನಡಿಗ ಸರ್ ಎಂ ವಿಶ್ವೇಶ್ವರಯ್ಯ ಅವರ ಪಾತ್ರ ಉಲ್ಲೇಖಿಸಿ ವಿಶೇಷ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಜಿ20 ನಾಯಕರ ಶೃಂಗಸಭೆಯಲ್ಲಿ, ನವದೆಹಲಿ ಘೋಷಣೆಯನ್ನು ಸಂಪೂರ್ಣ ಒಮ್ಮತದೊಂದಿಗೆ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಘೋಷಣೆಯ ಪ್ರಮುಖ ನಿಲುವು ಎಲ್ಲಾ ಜಾಗತಿಕ ಶಕ್ತಿಗಳನ್ನು ಒಂದೇ ವೇದಿಕೆಯಡಿ ತರುವುದು ಮತ್ತು ರಷ್ಯಾ-ಉಕ್ರೇನ್ ಯುದ್ಧದಂತಹ ವಿಭಜಿತ ವಿಷಯದ ಬಗ್ಗೆ ಒಮ್ಮತವನ್ನು ರೂಪಿಸುವುದಾಗಿದೆ.

ಮಾರ್ನಿಂಗ್ ಕನ್ಸಲ್ಟ್ ಪ್ರಕಾರ, ಪೊಲಿಟಿಕಲ್ ಇಂಟೆಲಿಜೆನ್ಸ್ ಅದರ ಸ್ವಾಮ್ಯದ ವೇದಿಕೆಯಾಗಿದೆ ಮತ್ತು ಇದು ರಾಜಕೀಯ ಚುನಾವಣೆಗಳು, ಚುನಾಯಿತ ಅಧಿಕಾರಿಗಳು ಮತ್ತು ಮತದಾನದ ಸಮಸ್ಯೆಗಳ ಕುರಿತು ರಿಯಲ್ ಟೈಂ ಮತದಾನದ ಡೇಟಾವನ್ನು ಒದಗಿಸುತ್ತದೆ. ಮಾರ್ನಿಂಗ್ ಕನ್ಸಲ್ಟ್ ಪ್ರತಿದಿನ 20,000 ಕ್ಕೂ ಹೆಚ್ಚು ಜಾಗತಿಕ ಸಂದರ್ಶನಗಳನ್ನು ನಡೆಸುತ್ತದೆ. ಎಲ್ಲಾ ಸಂದರ್ಶನಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ