AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ‘ಧನ್ನೀಪುರ ಮಸೀದಿ’ ನೀಲನಕ್ಷೆ ಬಿಡುಗಡೆ: ಆವರಣದಲ್ಲಿ ಆಸ್ಪತ್ರೆ, ಗ್ರಂಥಾಲಯ, ಅಧ್ಯಯನ ಕೇಂದ್ರ

ಐದು ಎಕರೆ ವಿಸ್ತೀರ್ಣದಲ್ಲಿ ಮಸೀದಿಯ ಜೊತೆಗೆ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಭೋಜನ ಶಾಲೆ, ಇಂಡೊ-ಇಸ್ಲಾಮಿಕ್ ಅಧ್ಯಯನ ಕೇಂದ್ರ ಮುಂತಾದವುಗಳು ಸಹ ತಲೆ ಎತ್ತಲಿವೆ.

ಅಯೋಧ್ಯೆಯ ‘ಧನ್ನೀಪುರ ಮಸೀದಿ’ ನೀಲನಕ್ಷೆ ಬಿಡುಗಡೆ: ಆವರಣದಲ್ಲಿ ಆಸ್ಪತ್ರೆ, ಗ್ರಂಥಾಲಯ, ಅಧ್ಯಯನ ಕೇಂದ್ರ
ನೂತನ ‘ಧನ್ನೀಪುರ ಮಸೀದಿ’ಯ ನೀಲನಕ್ಷೆ
guruganesh bhat
| Edited By: |

Updated on: Dec 20, 2020 | 11:34 AM

Share

ಅಯೋಧ್ಯೆ: ಬಾಬ್ರಿ ಮಸೀದಿಯ ಬದಲಾಗಿ ಅಯೋಧ್ಯೆಯ ಧನ್ನೀಪುರದಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ನೀಲನಕ್ಷೆ ಬಿಡುಗಡೆಯಾಗಿದೆ. ಆಗಸ್ಟ್ 15ರಂದು ನೂತನ ಮಸೀದಿಯ ಕಾಮಗಾರಿ ಆರಂಭವಾಗಲಿದೆ. 5 ಎಕರೆ ವಿಸ್ತೀರ್ಣದಲ್ಲಿ ಮಸೀದಿಯ ಜೊತೆಗೆ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಭೋಜನ ಶಾಲೆ, ಇಂಡೋ-ಇಸ್ಲಾಮಿಕ್ ಅಧ್ಯಯನ ಕೇಂದ್ರ ಸೇರಿದಂತೆ ಹಲವು ಸೌಲಭ್ಯಗಳು ತಲೆ ಎತ್ತಲಿವೆ.

ಜಾಮೀಯಾ ವಿಶ್ವವಿದ್ಯಾಲಯದ ಪ್ರೊ.ಅಖ್ತರ್ ನೂತನ ಮಸೀದಿಯ ನೀಲನಕ್ಷೆ ರೂಪಿಸಿದ್ದಾರೆ. ಏಕಕಾಲಕ್ಕೆ 2 ಸಾವಿರ ಜನರು ನಮಾಜ್ ಮಾಡಬಹುದಾದ ನೂತನ ಮಸೀದಿ ಅಂಡಾಕೃತಿ ಹೊಂದಿರಲಿದೆ. ಮಸೀದಿಯಲ್ಲಿ ಸೌರಶಕ್ತಿ ಬಳಸಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಆಸ್ಪತ್ರೆಯ ವಿನ್ಯಾಸವೂ ವಿಶಿಷ್ಟವಾಗಿದ್ದು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕಟ್ಟಡಗಳು ನಿರ್ಮಾಣವಾಗಲಿವೆ.

ನೂತನ ಮಸೀದಿಯ ಹೆಸರೇನು? ಬಾಬ್ರಿ ಮಸೀದಿಗೆ ಪರ್ಯಾಯವಾಗಿ ನಿರ್ಮಾಣವಾಗಲಿರುವ ಕಾರಣ ನೂತನ ಮಸೀದಿಗೆ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (IICF) ಯಾವ ಹೆಸರಿಡಲಿದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಸದ್ಯದ ಮಾಹಿತಿ ಪ್ರಕಾರ ಯಾವುದೇ ರಾಜ ಅಥವಾ ವಿವಾದಕ್ಕೀಡಾಗಬಲ್ಲ ಹೆಸರನ್ನು ಇಡುವ ಯೋಚನೆ IICFಗಿಲ್ಲ. ಧನ್ನೀಪುರದಲ್ಲಿ ನಿರ್ಮಾಣವಾಗಲಿರುವ ಕಾರಣ ‘ಧನ್ನೀಪುರ ಮಸೀದಿ’ ಎಂದೇ ನೂತನ ಮಸೀದಿಗೆ ಹೆಸರಿಡುವ ಸಾಧ್ಯತೆಯಿದೆ. ಭಾರತದ ಇತರ ಮಸೀದಿಗಳಿಗಿಂತ ವಿಭಿನ್ನವಾಗಿ ‘ಧನ್ನೀಪುರ ಮಸೀದಿ’ಯನ್ನು ನಿರ್ಮಿಸುವ ಕುರಿತು ಸಂಸ್ಥೆ ಯೋಜನೆ ರೂಪಿಸಿದೆ.

ಧನ್ನೀಪುರ ಮಸೀದಿಯ ನೀಲನಕ್ಷೆ

ಇಂದು ಬಿಡುಗಡೆಯಾಗಲಿದೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ಬ್ಲ್ಯೂಪ್ರಿಂಟ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!