AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ‘ಧನ್ನೀಪುರ ಮಸೀದಿ’ ನೀಲನಕ್ಷೆ ಬಿಡುಗಡೆ: ಆವರಣದಲ್ಲಿ ಆಸ್ಪತ್ರೆ, ಗ್ರಂಥಾಲಯ, ಅಧ್ಯಯನ ಕೇಂದ್ರ

ಐದು ಎಕರೆ ವಿಸ್ತೀರ್ಣದಲ್ಲಿ ಮಸೀದಿಯ ಜೊತೆಗೆ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಭೋಜನ ಶಾಲೆ, ಇಂಡೊ-ಇಸ್ಲಾಮಿಕ್ ಅಧ್ಯಯನ ಕೇಂದ್ರ ಮುಂತಾದವುಗಳು ಸಹ ತಲೆ ಎತ್ತಲಿವೆ.

ಅಯೋಧ್ಯೆಯ ‘ಧನ್ನೀಪುರ ಮಸೀದಿ’ ನೀಲನಕ್ಷೆ ಬಿಡುಗಡೆ: ಆವರಣದಲ್ಲಿ ಆಸ್ಪತ್ರೆ, ಗ್ರಂಥಾಲಯ, ಅಧ್ಯಯನ ಕೇಂದ್ರ
ನೂತನ ‘ಧನ್ನೀಪುರ ಮಸೀದಿ’ಯ ನೀಲನಕ್ಷೆ
guruganesh bhat
| Edited By: |

Updated on: Dec 20, 2020 | 11:34 AM

Share

ಅಯೋಧ್ಯೆ: ಬಾಬ್ರಿ ಮಸೀದಿಯ ಬದಲಾಗಿ ಅಯೋಧ್ಯೆಯ ಧನ್ನೀಪುರದಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ನೀಲನಕ್ಷೆ ಬಿಡುಗಡೆಯಾಗಿದೆ. ಆಗಸ್ಟ್ 15ರಂದು ನೂತನ ಮಸೀದಿಯ ಕಾಮಗಾರಿ ಆರಂಭವಾಗಲಿದೆ. 5 ಎಕರೆ ವಿಸ್ತೀರ್ಣದಲ್ಲಿ ಮಸೀದಿಯ ಜೊತೆಗೆ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಭೋಜನ ಶಾಲೆ, ಇಂಡೋ-ಇಸ್ಲಾಮಿಕ್ ಅಧ್ಯಯನ ಕೇಂದ್ರ ಸೇರಿದಂತೆ ಹಲವು ಸೌಲಭ್ಯಗಳು ತಲೆ ಎತ್ತಲಿವೆ.

ಜಾಮೀಯಾ ವಿಶ್ವವಿದ್ಯಾಲಯದ ಪ್ರೊ.ಅಖ್ತರ್ ನೂತನ ಮಸೀದಿಯ ನೀಲನಕ್ಷೆ ರೂಪಿಸಿದ್ದಾರೆ. ಏಕಕಾಲಕ್ಕೆ 2 ಸಾವಿರ ಜನರು ನಮಾಜ್ ಮಾಡಬಹುದಾದ ನೂತನ ಮಸೀದಿ ಅಂಡಾಕೃತಿ ಹೊಂದಿರಲಿದೆ. ಮಸೀದಿಯಲ್ಲಿ ಸೌರಶಕ್ತಿ ಬಳಸಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಆಸ್ಪತ್ರೆಯ ವಿನ್ಯಾಸವೂ ವಿಶಿಷ್ಟವಾಗಿದ್ದು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕಟ್ಟಡಗಳು ನಿರ್ಮಾಣವಾಗಲಿವೆ.

ನೂತನ ಮಸೀದಿಯ ಹೆಸರೇನು? ಬಾಬ್ರಿ ಮಸೀದಿಗೆ ಪರ್ಯಾಯವಾಗಿ ನಿರ್ಮಾಣವಾಗಲಿರುವ ಕಾರಣ ನೂತನ ಮಸೀದಿಗೆ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (IICF) ಯಾವ ಹೆಸರಿಡಲಿದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಸದ್ಯದ ಮಾಹಿತಿ ಪ್ರಕಾರ ಯಾವುದೇ ರಾಜ ಅಥವಾ ವಿವಾದಕ್ಕೀಡಾಗಬಲ್ಲ ಹೆಸರನ್ನು ಇಡುವ ಯೋಚನೆ IICFಗಿಲ್ಲ. ಧನ್ನೀಪುರದಲ್ಲಿ ನಿರ್ಮಾಣವಾಗಲಿರುವ ಕಾರಣ ‘ಧನ್ನೀಪುರ ಮಸೀದಿ’ ಎಂದೇ ನೂತನ ಮಸೀದಿಗೆ ಹೆಸರಿಡುವ ಸಾಧ್ಯತೆಯಿದೆ. ಭಾರತದ ಇತರ ಮಸೀದಿಗಳಿಗಿಂತ ವಿಭಿನ್ನವಾಗಿ ‘ಧನ್ನೀಪುರ ಮಸೀದಿ’ಯನ್ನು ನಿರ್ಮಿಸುವ ಕುರಿತು ಸಂಸ್ಥೆ ಯೋಜನೆ ರೂಪಿಸಿದೆ.

ಧನ್ನೀಪುರ ಮಸೀದಿಯ ನೀಲನಕ್ಷೆ

ಇಂದು ಬಿಡುಗಡೆಯಾಗಲಿದೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ಬ್ಲ್ಯೂಪ್ರಿಂಟ್

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ