AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ‘ಧನ್ನೀಪುರ ಮಸೀದಿ’ ನೀಲನಕ್ಷೆ ಬಿಡುಗಡೆ: ಆವರಣದಲ್ಲಿ ಆಸ್ಪತ್ರೆ, ಗ್ರಂಥಾಲಯ, ಅಧ್ಯಯನ ಕೇಂದ್ರ

ಐದು ಎಕರೆ ವಿಸ್ತೀರ್ಣದಲ್ಲಿ ಮಸೀದಿಯ ಜೊತೆಗೆ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಭೋಜನ ಶಾಲೆ, ಇಂಡೊ-ಇಸ್ಲಾಮಿಕ್ ಅಧ್ಯಯನ ಕೇಂದ್ರ ಮುಂತಾದವುಗಳು ಸಹ ತಲೆ ಎತ್ತಲಿವೆ.

ಅಯೋಧ್ಯೆಯ ‘ಧನ್ನೀಪುರ ಮಸೀದಿ’ ನೀಲನಕ್ಷೆ ಬಿಡುಗಡೆ: ಆವರಣದಲ್ಲಿ ಆಸ್ಪತ್ರೆ, ಗ್ರಂಥಾಲಯ, ಅಧ್ಯಯನ ಕೇಂದ್ರ
ನೂತನ ‘ಧನ್ನೀಪುರ ಮಸೀದಿ’ಯ ನೀಲನಕ್ಷೆ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 20, 2020 | 11:34 AM

ಅಯೋಧ್ಯೆ: ಬಾಬ್ರಿ ಮಸೀದಿಯ ಬದಲಾಗಿ ಅಯೋಧ್ಯೆಯ ಧನ್ನೀಪುರದಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ನೀಲನಕ್ಷೆ ಬಿಡುಗಡೆಯಾಗಿದೆ. ಆಗಸ್ಟ್ 15ರಂದು ನೂತನ ಮಸೀದಿಯ ಕಾಮಗಾರಿ ಆರಂಭವಾಗಲಿದೆ. 5 ಎಕರೆ ವಿಸ್ತೀರ್ಣದಲ್ಲಿ ಮಸೀದಿಯ ಜೊತೆಗೆ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಭೋಜನ ಶಾಲೆ, ಇಂಡೋ-ಇಸ್ಲಾಮಿಕ್ ಅಧ್ಯಯನ ಕೇಂದ್ರ ಸೇರಿದಂತೆ ಹಲವು ಸೌಲಭ್ಯಗಳು ತಲೆ ಎತ್ತಲಿವೆ.

ಜಾಮೀಯಾ ವಿಶ್ವವಿದ್ಯಾಲಯದ ಪ್ರೊ.ಅಖ್ತರ್ ನೂತನ ಮಸೀದಿಯ ನೀಲನಕ್ಷೆ ರೂಪಿಸಿದ್ದಾರೆ. ಏಕಕಾಲಕ್ಕೆ 2 ಸಾವಿರ ಜನರು ನಮಾಜ್ ಮಾಡಬಹುದಾದ ನೂತನ ಮಸೀದಿ ಅಂಡಾಕೃತಿ ಹೊಂದಿರಲಿದೆ. ಮಸೀದಿಯಲ್ಲಿ ಸೌರಶಕ್ತಿ ಬಳಸಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಆಸ್ಪತ್ರೆಯ ವಿನ್ಯಾಸವೂ ವಿಶಿಷ್ಟವಾಗಿದ್ದು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕಟ್ಟಡಗಳು ನಿರ್ಮಾಣವಾಗಲಿವೆ.

ನೂತನ ಮಸೀದಿಯ ಹೆಸರೇನು? ಬಾಬ್ರಿ ಮಸೀದಿಗೆ ಪರ್ಯಾಯವಾಗಿ ನಿರ್ಮಾಣವಾಗಲಿರುವ ಕಾರಣ ನೂತನ ಮಸೀದಿಗೆ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (IICF) ಯಾವ ಹೆಸರಿಡಲಿದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಸದ್ಯದ ಮಾಹಿತಿ ಪ್ರಕಾರ ಯಾವುದೇ ರಾಜ ಅಥವಾ ವಿವಾದಕ್ಕೀಡಾಗಬಲ್ಲ ಹೆಸರನ್ನು ಇಡುವ ಯೋಚನೆ IICFಗಿಲ್ಲ. ಧನ್ನೀಪುರದಲ್ಲಿ ನಿರ್ಮಾಣವಾಗಲಿರುವ ಕಾರಣ ‘ಧನ್ನೀಪುರ ಮಸೀದಿ’ ಎಂದೇ ನೂತನ ಮಸೀದಿಗೆ ಹೆಸರಿಡುವ ಸಾಧ್ಯತೆಯಿದೆ. ಭಾರತದ ಇತರ ಮಸೀದಿಗಳಿಗಿಂತ ವಿಭಿನ್ನವಾಗಿ ‘ಧನ್ನೀಪುರ ಮಸೀದಿ’ಯನ್ನು ನಿರ್ಮಿಸುವ ಕುರಿತು ಸಂಸ್ಥೆ ಯೋಜನೆ ರೂಪಿಸಿದೆ.

ಧನ್ನೀಪುರ ಮಸೀದಿಯ ನೀಲನಕ್ಷೆ

ಇಂದು ಬಿಡುಗಡೆಯಾಗಲಿದೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ಬ್ಲ್ಯೂಪ್ರಿಂಟ್

ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ