AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ‘ಧನ್ನೀಪುರ ಮಸೀದಿ’ ನೀಲನಕ್ಷೆ ಬಿಡುಗಡೆ: ಆವರಣದಲ್ಲಿ ಆಸ್ಪತ್ರೆ, ಗ್ರಂಥಾಲಯ, ಅಧ್ಯಯನ ಕೇಂದ್ರ

ಐದು ಎಕರೆ ವಿಸ್ತೀರ್ಣದಲ್ಲಿ ಮಸೀದಿಯ ಜೊತೆಗೆ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಭೋಜನ ಶಾಲೆ, ಇಂಡೊ-ಇಸ್ಲಾಮಿಕ್ ಅಧ್ಯಯನ ಕೇಂದ್ರ ಮುಂತಾದವುಗಳು ಸಹ ತಲೆ ಎತ್ತಲಿವೆ.

ಅಯೋಧ್ಯೆಯ ‘ಧನ್ನೀಪುರ ಮಸೀದಿ’ ನೀಲನಕ್ಷೆ ಬಿಡುಗಡೆ: ಆವರಣದಲ್ಲಿ ಆಸ್ಪತ್ರೆ, ಗ್ರಂಥಾಲಯ, ಅಧ್ಯಯನ ಕೇಂದ್ರ
ನೂತನ ‘ಧನ್ನೀಪುರ ಮಸೀದಿ’ಯ ನೀಲನಕ್ಷೆ
guruganesh bhat
| Edited By: |

Updated on: Dec 20, 2020 | 11:34 AM

Share

ಅಯೋಧ್ಯೆ: ಬಾಬ್ರಿ ಮಸೀದಿಯ ಬದಲಾಗಿ ಅಯೋಧ್ಯೆಯ ಧನ್ನೀಪುರದಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ನೀಲನಕ್ಷೆ ಬಿಡುಗಡೆಯಾಗಿದೆ. ಆಗಸ್ಟ್ 15ರಂದು ನೂತನ ಮಸೀದಿಯ ಕಾಮಗಾರಿ ಆರಂಭವಾಗಲಿದೆ. 5 ಎಕರೆ ವಿಸ್ತೀರ್ಣದಲ್ಲಿ ಮಸೀದಿಯ ಜೊತೆಗೆ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಭೋಜನ ಶಾಲೆ, ಇಂಡೋ-ಇಸ್ಲಾಮಿಕ್ ಅಧ್ಯಯನ ಕೇಂದ್ರ ಸೇರಿದಂತೆ ಹಲವು ಸೌಲಭ್ಯಗಳು ತಲೆ ಎತ್ತಲಿವೆ.

ಜಾಮೀಯಾ ವಿಶ್ವವಿದ್ಯಾಲಯದ ಪ್ರೊ.ಅಖ್ತರ್ ನೂತನ ಮಸೀದಿಯ ನೀಲನಕ್ಷೆ ರೂಪಿಸಿದ್ದಾರೆ. ಏಕಕಾಲಕ್ಕೆ 2 ಸಾವಿರ ಜನರು ನಮಾಜ್ ಮಾಡಬಹುದಾದ ನೂತನ ಮಸೀದಿ ಅಂಡಾಕೃತಿ ಹೊಂದಿರಲಿದೆ. ಮಸೀದಿಯಲ್ಲಿ ಸೌರಶಕ್ತಿ ಬಳಸಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಆಸ್ಪತ್ರೆಯ ವಿನ್ಯಾಸವೂ ವಿಶಿಷ್ಟವಾಗಿದ್ದು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕಟ್ಟಡಗಳು ನಿರ್ಮಾಣವಾಗಲಿವೆ.

ನೂತನ ಮಸೀದಿಯ ಹೆಸರೇನು? ಬಾಬ್ರಿ ಮಸೀದಿಗೆ ಪರ್ಯಾಯವಾಗಿ ನಿರ್ಮಾಣವಾಗಲಿರುವ ಕಾರಣ ನೂತನ ಮಸೀದಿಗೆ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (IICF) ಯಾವ ಹೆಸರಿಡಲಿದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಸದ್ಯದ ಮಾಹಿತಿ ಪ್ರಕಾರ ಯಾವುದೇ ರಾಜ ಅಥವಾ ವಿವಾದಕ್ಕೀಡಾಗಬಲ್ಲ ಹೆಸರನ್ನು ಇಡುವ ಯೋಚನೆ IICFಗಿಲ್ಲ. ಧನ್ನೀಪುರದಲ್ಲಿ ನಿರ್ಮಾಣವಾಗಲಿರುವ ಕಾರಣ ‘ಧನ್ನೀಪುರ ಮಸೀದಿ’ ಎಂದೇ ನೂತನ ಮಸೀದಿಗೆ ಹೆಸರಿಡುವ ಸಾಧ್ಯತೆಯಿದೆ. ಭಾರತದ ಇತರ ಮಸೀದಿಗಳಿಗಿಂತ ವಿಭಿನ್ನವಾಗಿ ‘ಧನ್ನೀಪುರ ಮಸೀದಿ’ಯನ್ನು ನಿರ್ಮಿಸುವ ಕುರಿತು ಸಂಸ್ಥೆ ಯೋಜನೆ ರೂಪಿಸಿದೆ.

ಧನ್ನೀಪುರ ಮಸೀದಿಯ ನೀಲನಕ್ಷೆ

ಇಂದು ಬಿಡುಗಡೆಯಾಗಲಿದೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಯ ಬ್ಲ್ಯೂಪ್ರಿಂಟ್

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ