AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪ್ರೇಮ ವಿವಾಹವಾದವರಲ್ಲೇ ಜಾಸ್ತಿ ವಿಚ್ಛೇದನ: ಸುಪ್ರೀಂಕೋರ್ಟ್

ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್​​ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು.

ಭಾರತದಲ್ಲಿ ಪ್ರೇಮ ವಿವಾಹವಾದವರಲ್ಲೇ ಜಾಸ್ತಿ ವಿಚ್ಛೇದನ: ಸುಪ್ರೀಂಕೋರ್ಟ್
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:May 17, 2023 | 4:56 PM

Share

ಭಾರತದಲ್ಲಿ ನಡೆಯುವ ಹೆಚ್ಚಿನ ವಿಚ್ಛೇದನಗಳಿಗೆ (divorce) ಪ್ರೇಮ ವಿವಾಹಗಳೇ (Love marriage) ಪ್ರಮುಖ ಕಾರಣ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್‌ನ (Supreme Court of India) ದ್ವಿಸದಸ್ಯ ಪೀಠದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ವೈವಾಹಿಕ ಸಂಬಂಧದ ಅರ್ಜಿಯೊಂದರ ವಿಚಾರಣೆ ವೇಳೆ ಈ ರೀತಿ ಹೇಳಿದೆ. ಅವರದು ಪ್ರೇಮ ವಿವಾಹ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಮೂರ್ತಿ ಗವಾಯಿ ಹೆಚ್ಚಿನ ವಿಚ್ಛೇದನಗಳಿಗೆ ಪ್ರೇಮ ವಿವಾಹಗಳೇ ಕಾರಣ ಎಂದು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.ಅಂತಿಮವಾಗಿ ಪೀಠವು ದಂಪತಿಗಳ ನಡುವೆ ಮಧ್ಯಸ್ಥಿಕೆಗೆ ಕರೆ ನೀಡಿತು. ಈ ತಿಂಗಳ ಆರಂಭದಲ್ಲಿ ಪರಸ್ಪರ ಒಪ್ಪಿಗೆ ಇದ್ದರೇ ವಿವಾಹ ವಿಚ್ಛೇದನ ಪಡೆಯಲು ಸಂವಿಧಾನದ ಪರಿಚ್ಛೇದ 142ರ ಅಡಿಯಲ್ಲಿ ಮುರಿದುಹೋದ ವಿವಾಹಗಳನ್ನು ವಿಸರ್ಜಿಸುವ ಅಧಿಕಾರ ಇದೆ. ಆರ್ಟಿಕಲ್‌ 142ರ ಮೂಲಕ ಪರಿಸ್ಥಿತಿಗನುಗುಣವಾಗಿ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯ ಕಾಯುವ ಅವಧಿಯನ್ನು ತೆಗೆದುಹಾಕಬಹುದು ಎಂದು ಸುಪ್ರೀಂ ಹೇಳಿತ್ತು.

ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್​​ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು.

ಇದನ್ನೂ ಓದಿ: Turbulence: ದೆಹಲಿ-ಸಿಡ್ನಿ ಏರ್​ ಇಂಡಿಯಾ ವಿಮಾನ ಹಾರಾಟದ ವೇಳೆ ಗಾಳಿಯ ದಿಢೀರ್ ಏರಿಳಿತ, ಪ್ರಯಾಣಿಕರಿಗೆ ಗಾಯ

ಮದುವೆ ಎಂಬುದು ಸರಿಪಡಿಸಲಾಗದಂತೆ ಮುರಿದುಹೋಗಿದೆ ಎಂದು ನ್ಯಾಯಾಲಯವು ಹೇಳಿತು.ಇದಕ್ಕಾಗಿ ಹಲವಾರು ಅಂಶಗಳನ್ನು ಪರಿಗಣಿಸಬೇಕು. ಮದುವೆಯ ನಂತರ ಪಕ್ಷಗಳು ಸಹಬಾಳ್ವೆ ನಡೆಸಿದ ಅವಧಿ, ಇಬ್ಬರು ಕೊನೆಯದಾಗಿ ಸಹಬಾಳ್ವೆ ನಡೆಸಿದಾಗ ಪರಸ್ಪರ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾಡಿದ ಆರೋಪಗಳ ಸ್ವರೂಪ ಎಲ್ಲವನ್ನೂ ಪರಿಗಣಿಸಬೇಕಾಗುತ್ತದೆ.

ಪರಿಗಣಿಸಬೇಕಾದ ಇತರ ಅಂಶಗಳು ಕಾಲಕಾಲಕ್ಕೆ ಕಾನೂನು ಪ್ರಕ್ರಿಯೆಯಲ್ಲಿ ಹೊರಡಿಸಿದ ಆದೇಶಗಳನ್ನು ಒಳಗೊಂಡಿವೆ, ವೈಯಕ್ತಿಕ ಸಂಬಂಧದ ಮೇಲೆ ಸಂಚಿತ ಪರಿಣಾಮ, ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಅಥವಾ ಮಧ್ಯಸ್ಥಿಕೆಯ ಮೂಲಕ ವಿವಾದಗಳನ್ನು ಇತ್ಯರ್ಥಗೊಳಿಸಲು ಎಷ್ಟು ಪ್ರಯತ್ನಗಳನ್ನು ಮಾಡಲಾಗಿದೆ? ಕೊನೆಯದು ಯಾವಾಗ ಪ್ರಯತ್ನಿಸಲಾಯಿತು ಎಂಬುದನ್ನು ನ್ಯಾಯಾಲಯ ಕೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Wed, 17 May 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ