AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪ್ರೇಮ ವಿವಾಹವಾದವರಲ್ಲೇ ಜಾಸ್ತಿ ವಿಚ್ಛೇದನ: ಸುಪ್ರೀಂಕೋರ್ಟ್

ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್​​ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು.

ಭಾರತದಲ್ಲಿ ಪ್ರೇಮ ವಿವಾಹವಾದವರಲ್ಲೇ ಜಾಸ್ತಿ ವಿಚ್ಛೇದನ: ಸುಪ್ರೀಂಕೋರ್ಟ್
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:May 17, 2023 | 4:56 PM

Share

ಭಾರತದಲ್ಲಿ ನಡೆಯುವ ಹೆಚ್ಚಿನ ವಿಚ್ಛೇದನಗಳಿಗೆ (divorce) ಪ್ರೇಮ ವಿವಾಹಗಳೇ (Love marriage) ಪ್ರಮುಖ ಕಾರಣ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್‌ನ (Supreme Court of India) ದ್ವಿಸದಸ್ಯ ಪೀಠದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ವೈವಾಹಿಕ ಸಂಬಂಧದ ಅರ್ಜಿಯೊಂದರ ವಿಚಾರಣೆ ವೇಳೆ ಈ ರೀತಿ ಹೇಳಿದೆ. ಅವರದು ಪ್ರೇಮ ವಿವಾಹ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಮೂರ್ತಿ ಗವಾಯಿ ಹೆಚ್ಚಿನ ವಿಚ್ಛೇದನಗಳಿಗೆ ಪ್ರೇಮ ವಿವಾಹಗಳೇ ಕಾರಣ ಎಂದು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.ಅಂತಿಮವಾಗಿ ಪೀಠವು ದಂಪತಿಗಳ ನಡುವೆ ಮಧ್ಯಸ್ಥಿಕೆಗೆ ಕರೆ ನೀಡಿತು. ಈ ತಿಂಗಳ ಆರಂಭದಲ್ಲಿ ಪರಸ್ಪರ ಒಪ್ಪಿಗೆ ಇದ್ದರೇ ವಿವಾಹ ವಿಚ್ಛೇದನ ಪಡೆಯಲು ಸಂವಿಧಾನದ ಪರಿಚ್ಛೇದ 142ರ ಅಡಿಯಲ್ಲಿ ಮುರಿದುಹೋದ ವಿವಾಹಗಳನ್ನು ವಿಸರ್ಜಿಸುವ ಅಧಿಕಾರ ಇದೆ. ಆರ್ಟಿಕಲ್‌ 142ರ ಮೂಲಕ ಪರಿಸ್ಥಿತಿಗನುಗುಣವಾಗಿ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯ ಕಾಯುವ ಅವಧಿಯನ್ನು ತೆಗೆದುಹಾಕಬಹುದು ಎಂದು ಸುಪ್ರೀಂ ಹೇಳಿತ್ತು.

ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್​​ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು.

ಇದನ್ನೂ ಓದಿ: Turbulence: ದೆಹಲಿ-ಸಿಡ್ನಿ ಏರ್​ ಇಂಡಿಯಾ ವಿಮಾನ ಹಾರಾಟದ ವೇಳೆ ಗಾಳಿಯ ದಿಢೀರ್ ಏರಿಳಿತ, ಪ್ರಯಾಣಿಕರಿಗೆ ಗಾಯ

ಮದುವೆ ಎಂಬುದು ಸರಿಪಡಿಸಲಾಗದಂತೆ ಮುರಿದುಹೋಗಿದೆ ಎಂದು ನ್ಯಾಯಾಲಯವು ಹೇಳಿತು.ಇದಕ್ಕಾಗಿ ಹಲವಾರು ಅಂಶಗಳನ್ನು ಪರಿಗಣಿಸಬೇಕು. ಮದುವೆಯ ನಂತರ ಪಕ್ಷಗಳು ಸಹಬಾಳ್ವೆ ನಡೆಸಿದ ಅವಧಿ, ಇಬ್ಬರು ಕೊನೆಯದಾಗಿ ಸಹಬಾಳ್ವೆ ನಡೆಸಿದಾಗ ಪರಸ್ಪರ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾಡಿದ ಆರೋಪಗಳ ಸ್ವರೂಪ ಎಲ್ಲವನ್ನೂ ಪರಿಗಣಿಸಬೇಕಾಗುತ್ತದೆ.

ಪರಿಗಣಿಸಬೇಕಾದ ಇತರ ಅಂಶಗಳು ಕಾಲಕಾಲಕ್ಕೆ ಕಾನೂನು ಪ್ರಕ್ರಿಯೆಯಲ್ಲಿ ಹೊರಡಿಸಿದ ಆದೇಶಗಳನ್ನು ಒಳಗೊಂಡಿವೆ, ವೈಯಕ್ತಿಕ ಸಂಬಂಧದ ಮೇಲೆ ಸಂಚಿತ ಪರಿಣಾಮ, ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಅಥವಾ ಮಧ್ಯಸ್ಥಿಕೆಯ ಮೂಲಕ ವಿವಾದಗಳನ್ನು ಇತ್ಯರ್ಥಗೊಳಿಸಲು ಎಷ್ಟು ಪ್ರಯತ್ನಗಳನ್ನು ಮಾಡಲಾಗಿದೆ? ಕೊನೆಯದು ಯಾವಾಗ ಪ್ರಯತ್ನಿಸಲಾಯಿತು ಎಂಬುದನ್ನು ನ್ಯಾಯಾಲಯ ಕೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Wed, 17 May 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!