AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪ್ರೇಮ ವಿವಾಹವಾದವರಲ್ಲೇ ಜಾಸ್ತಿ ವಿಚ್ಛೇದನ: ಸುಪ್ರೀಂಕೋರ್ಟ್

ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್​​ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು.

ಭಾರತದಲ್ಲಿ ಪ್ರೇಮ ವಿವಾಹವಾದವರಲ್ಲೇ ಜಾಸ್ತಿ ವಿಚ್ಛೇದನ: ಸುಪ್ರೀಂಕೋರ್ಟ್
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:May 17, 2023 | 4:56 PM

Share

ಭಾರತದಲ್ಲಿ ನಡೆಯುವ ಹೆಚ್ಚಿನ ವಿಚ್ಛೇದನಗಳಿಗೆ (divorce) ಪ್ರೇಮ ವಿವಾಹಗಳೇ (Love marriage) ಪ್ರಮುಖ ಕಾರಣ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್‌ನ (Supreme Court of India) ದ್ವಿಸದಸ್ಯ ಪೀಠದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ವೈವಾಹಿಕ ಸಂಬಂಧದ ಅರ್ಜಿಯೊಂದರ ವಿಚಾರಣೆ ವೇಳೆ ಈ ರೀತಿ ಹೇಳಿದೆ. ಅವರದು ಪ್ರೇಮ ವಿವಾಹ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಮೂರ್ತಿ ಗವಾಯಿ ಹೆಚ್ಚಿನ ವಿಚ್ಛೇದನಗಳಿಗೆ ಪ್ರೇಮ ವಿವಾಹಗಳೇ ಕಾರಣ ಎಂದು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.ಅಂತಿಮವಾಗಿ ಪೀಠವು ದಂಪತಿಗಳ ನಡುವೆ ಮಧ್ಯಸ್ಥಿಕೆಗೆ ಕರೆ ನೀಡಿತು. ಈ ತಿಂಗಳ ಆರಂಭದಲ್ಲಿ ಪರಸ್ಪರ ಒಪ್ಪಿಗೆ ಇದ್ದರೇ ವಿವಾಹ ವಿಚ್ಛೇದನ ಪಡೆಯಲು ಸಂವಿಧಾನದ ಪರಿಚ್ಛೇದ 142ರ ಅಡಿಯಲ್ಲಿ ಮುರಿದುಹೋದ ವಿವಾಹಗಳನ್ನು ವಿಸರ್ಜಿಸುವ ಅಧಿಕಾರ ಇದೆ. ಆರ್ಟಿಕಲ್‌ 142ರ ಮೂಲಕ ಪರಿಸ್ಥಿತಿಗನುಗುಣವಾಗಿ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯ ಕಾಯುವ ಅವಧಿಯನ್ನು ತೆಗೆದುಹಾಕಬಹುದು ಎಂದು ಸುಪ್ರೀಂ ಹೇಳಿತ್ತು.

ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್​​ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು.

ಇದನ್ನೂ ಓದಿ: Turbulence: ದೆಹಲಿ-ಸಿಡ್ನಿ ಏರ್​ ಇಂಡಿಯಾ ವಿಮಾನ ಹಾರಾಟದ ವೇಳೆ ಗಾಳಿಯ ದಿಢೀರ್ ಏರಿಳಿತ, ಪ್ರಯಾಣಿಕರಿಗೆ ಗಾಯ

ಮದುವೆ ಎಂಬುದು ಸರಿಪಡಿಸಲಾಗದಂತೆ ಮುರಿದುಹೋಗಿದೆ ಎಂದು ನ್ಯಾಯಾಲಯವು ಹೇಳಿತು.ಇದಕ್ಕಾಗಿ ಹಲವಾರು ಅಂಶಗಳನ್ನು ಪರಿಗಣಿಸಬೇಕು. ಮದುವೆಯ ನಂತರ ಪಕ್ಷಗಳು ಸಹಬಾಳ್ವೆ ನಡೆಸಿದ ಅವಧಿ, ಇಬ್ಬರು ಕೊನೆಯದಾಗಿ ಸಹಬಾಳ್ವೆ ನಡೆಸಿದಾಗ ಪರಸ್ಪರ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾಡಿದ ಆರೋಪಗಳ ಸ್ವರೂಪ ಎಲ್ಲವನ್ನೂ ಪರಿಗಣಿಸಬೇಕಾಗುತ್ತದೆ.

ಪರಿಗಣಿಸಬೇಕಾದ ಇತರ ಅಂಶಗಳು ಕಾಲಕಾಲಕ್ಕೆ ಕಾನೂನು ಪ್ರಕ್ರಿಯೆಯಲ್ಲಿ ಹೊರಡಿಸಿದ ಆದೇಶಗಳನ್ನು ಒಳಗೊಂಡಿವೆ, ವೈಯಕ್ತಿಕ ಸಂಬಂಧದ ಮೇಲೆ ಸಂಚಿತ ಪರಿಣಾಮ, ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಅಥವಾ ಮಧ್ಯಸ್ಥಿಕೆಯ ಮೂಲಕ ವಿವಾದಗಳನ್ನು ಇತ್ಯರ್ಥಗೊಳಿಸಲು ಎಷ್ಟು ಪ್ರಯತ್ನಗಳನ್ನು ಮಾಡಲಾಗಿದೆ? ಕೊನೆಯದು ಯಾವಾಗ ಪ್ರಯತ್ನಿಸಲಾಯಿತು ಎಂಬುದನ್ನು ನ್ಯಾಯಾಲಯ ಕೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Wed, 17 May 23

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್