AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ

ತಮಿಳುನಾಡಿನ ಅನೈವಾರಿ ಮುಟ್ಟಲ್ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದ ನೀರಿನಿಂದ ಕೆಲವೇ ಮೀಟರ್ ದೂರದಲ್ಲಿ ತಾಯಿ ಮತ್ತು ಮಗು ಸಿಲುಕಿದ್ದರು. ಬಂಡೆಯೊಂದನ್ನು ಹಿಡಿದುಕೊಂಡು ಪ್ರಾಣ ರಕ್ಷಣೆಗಾಗಿ ಹೋರಾಡುತ್ತಿದ್ದ ತಾಯಿ-ಮಗುವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ
ತಮಿಳುನಾಡಿನ ಜಲಪಾತದಿಂದ ತಾಯ-ಮಗುವಿನ ರಕ್ಷಣೆ
TV9 Web
| Edited By: |

Updated on:Oct 27, 2021 | 4:49 PM

Share

ಚೆನ್ನೈ: ಜಲಪಾತದ ಬಳಿ ಸಿಲುಕಿಕೊಂಡಿದ್ದ ತಾಯಿ ಮತ್ತು ಮಗುವನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ತಮಿಳುನಾಡಿನ ಅರಣ್ಯಾಧಿಕಾರಿಗಳು ಜಲಪಾತದಿಂದ ತಾಯಿ ಮತ್ತು ಮಗುವನ್ನು ರಕ್ಷಿಸುತ್ತಿರುವ ಈ ವಿಡಿಯೋವನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ತಮಿಳುನಾಡಿನ ಅನೈವಾರಿ ಮುಟ್ಟಲ್ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದ ನೀರಿನಿಂದ ಕೆಲವೇ ಮೀಟರ್ ದೂರದಲ್ಲಿ ತಾಯಿ ಮತ್ತು ಮಗು ಸಿಲುಕಿದ್ದರು. ಬಂಡೆಯೊಂದನ್ನು ಹಿಡಿದುಕೊಂಡು ಪ್ರಾಣ ರಕ್ಷಣೆಗಾಗಿ ಹೋರಾಡುತ್ತಿದ್ದ ತಾಯಿ-ಮಗುವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಈ ಜಲಪಾತವು ಸೇಲಂ ಜಿಲ್ಲೆಯ ಸಮೀಪದ ಕಲ್ಲವರಾಯನ ಬೆಟ್ಟಗಳ ಬಳಿಯಿದೆ. ಎರಡು ತಿಂಗಳ ಹಿಂದೆ ಈ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.

ಮಹಿಳೆ ತನ್ನ ಮಗುವನ್ನು ಹಿಡಿದುಕೊಂಡು ಬಂಡೆಯ ಮೇಲೆ ಕುಳಿತಾಗ ಅರಣ್ಯಾಧಿಕಾರಿಗಳು ನಿಧಾನವಾಗಿ ಅವಳ ಬಳಿಗೆ ಹೋಗಿ, ಹಗ್ಗದ ಸಹಾಯದಿಂದ ಆಕೆಯ ಮಗುವನ್ನು ಮೊದಲು ಎಳೆದುಕೊಂಡು ಮೇಲಿನವರಿಗೆ ವರ್ಗಾಯಿಸಿದ್ದಾರೆ. ಬಳಿಕ ಆ ಮಹಿಳೆಯನ್ನು ಕೂಡ ರಕ್ಷಿಸಲಾಗಿದೆ. ಜಲಪಾತದ ಇನ್ನೊಂದು ಬದಿಯಲ್ಲಿ ಜನರು ಕಿರುಚುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಅರಣ್ಯಾಧಿಕಾರಿಗಳ ಧೈರ್ಯ ಮತ್ತು ಸಮಯಪ್ರಜ್ಞೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದು, ಹಲವರು ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅರಣ್ಯಾಧಿಕಾರಿಗಳು ಮೇಲಿನ ಮರಕ್ಕೆ ಕಟ್ಟಿದ್ದ ಹಗ್ಗದ ಸಹಾಯದಿಂದ ಮಗು ಮತ್ತು ಮಹಿಳೆಯನ್ನು ಮೇಲಕ್ಕೆತ್ತುವ ಮೂಲಕ ರಕ್ಷಣೆ ಮಾಡಿದ್ದಾರೆ. ಅವರು ಅಲ್ಲಿಗೆ ತಲುಪುವುದು ಕೊಂಚ ತಡವಾಗಿದ್ದರೂ ತಾಯಿ-ಮಗು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು.

‘ತಾಯಿ ಮತ್ತು ಮಗುವನ್ನು ರಕ್ಷಿಸಿದವರ ಧೈರ್ಯದ ಈ ಕೆಲಸ ಬಹಳ ಶ್ಲಾಘನೀಯವಾಗಿದೆ. ಈ ಸಿಬ್ಬಂದಿಗೆ ನಮ್ಮ ಸರ್ಕಾರ ಧನ್ಯವಾದ ತಿಳಿಸುತ್ತಿದೆ. ಇತರರ ಪ್ರಾಣವನ್ನು ಉಳಿಸುವ ಮೂಲಕ ಅವರು ಧೈರ್ಯದ ಜೊತೆಗೆ ಮಾನವೀಯತೆ ಮೆರೆದಿದ್ದಾರೆ. ಸಾರ್ವಜನಿಕರು ವಿಪತ್ತುಗಳ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಂಡ ಸೈನಿಕರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ; ವಿಡಿಯೋ ವೈರಲ್

Viral Video: ಮನೆ ಎದುರು ಲಾಲೂಪ್ರಸಾದ್ ಯಾದವ್ ಪಾದ ತೊಳೆದ ಮಗ ತೇಜ್ ಪ್ರತಾಪ್

Published On - 4:45 pm, Wed, 27 October 21

Follow Us
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’