AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ

ತಮಿಳುನಾಡಿನ ಅನೈವಾರಿ ಮುಟ್ಟಲ್ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದ ನೀರಿನಿಂದ ಕೆಲವೇ ಮೀಟರ್ ದೂರದಲ್ಲಿ ತಾಯಿ ಮತ್ತು ಮಗು ಸಿಲುಕಿದ್ದರು. ಬಂಡೆಯೊಂದನ್ನು ಹಿಡಿದುಕೊಂಡು ಪ್ರಾಣ ರಕ್ಷಣೆಗಾಗಿ ಹೋರಾಡುತ್ತಿದ್ದ ತಾಯಿ-ಮಗುವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ
ತಮಿಳುನಾಡಿನ ಜಲಪಾತದಿಂದ ತಾಯ-ಮಗುವಿನ ರಕ್ಷಣೆ
TV9 Web
| Edited By: |

Updated on:Oct 27, 2021 | 4:49 PM

Share

ಚೆನ್ನೈ: ಜಲಪಾತದ ಬಳಿ ಸಿಲುಕಿಕೊಂಡಿದ್ದ ತಾಯಿ ಮತ್ತು ಮಗುವನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ತಮಿಳುನಾಡಿನ ಅರಣ್ಯಾಧಿಕಾರಿಗಳು ಜಲಪಾತದಿಂದ ತಾಯಿ ಮತ್ತು ಮಗುವನ್ನು ರಕ್ಷಿಸುತ್ತಿರುವ ಈ ವಿಡಿಯೋವನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ತಮಿಳುನಾಡಿನ ಅನೈವಾರಿ ಮುಟ್ಟಲ್ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದ ನೀರಿನಿಂದ ಕೆಲವೇ ಮೀಟರ್ ದೂರದಲ್ಲಿ ತಾಯಿ ಮತ್ತು ಮಗು ಸಿಲುಕಿದ್ದರು. ಬಂಡೆಯೊಂದನ್ನು ಹಿಡಿದುಕೊಂಡು ಪ್ರಾಣ ರಕ್ಷಣೆಗಾಗಿ ಹೋರಾಡುತ್ತಿದ್ದ ತಾಯಿ-ಮಗುವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಈ ಜಲಪಾತವು ಸೇಲಂ ಜಿಲ್ಲೆಯ ಸಮೀಪದ ಕಲ್ಲವರಾಯನ ಬೆಟ್ಟಗಳ ಬಳಿಯಿದೆ. ಎರಡು ತಿಂಗಳ ಹಿಂದೆ ಈ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.

ಮಹಿಳೆ ತನ್ನ ಮಗುವನ್ನು ಹಿಡಿದುಕೊಂಡು ಬಂಡೆಯ ಮೇಲೆ ಕುಳಿತಾಗ ಅರಣ್ಯಾಧಿಕಾರಿಗಳು ನಿಧಾನವಾಗಿ ಅವಳ ಬಳಿಗೆ ಹೋಗಿ, ಹಗ್ಗದ ಸಹಾಯದಿಂದ ಆಕೆಯ ಮಗುವನ್ನು ಮೊದಲು ಎಳೆದುಕೊಂಡು ಮೇಲಿನವರಿಗೆ ವರ್ಗಾಯಿಸಿದ್ದಾರೆ. ಬಳಿಕ ಆ ಮಹಿಳೆಯನ್ನು ಕೂಡ ರಕ್ಷಿಸಲಾಗಿದೆ. ಜಲಪಾತದ ಇನ್ನೊಂದು ಬದಿಯಲ್ಲಿ ಜನರು ಕಿರುಚುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಅರಣ್ಯಾಧಿಕಾರಿಗಳ ಧೈರ್ಯ ಮತ್ತು ಸಮಯಪ್ರಜ್ಞೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದು, ಹಲವರು ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅರಣ್ಯಾಧಿಕಾರಿಗಳು ಮೇಲಿನ ಮರಕ್ಕೆ ಕಟ್ಟಿದ್ದ ಹಗ್ಗದ ಸಹಾಯದಿಂದ ಮಗು ಮತ್ತು ಮಹಿಳೆಯನ್ನು ಮೇಲಕ್ಕೆತ್ತುವ ಮೂಲಕ ರಕ್ಷಣೆ ಮಾಡಿದ್ದಾರೆ. ಅವರು ಅಲ್ಲಿಗೆ ತಲುಪುವುದು ಕೊಂಚ ತಡವಾಗಿದ್ದರೂ ತಾಯಿ-ಮಗು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು.

‘ತಾಯಿ ಮತ್ತು ಮಗುವನ್ನು ರಕ್ಷಿಸಿದವರ ಧೈರ್ಯದ ಈ ಕೆಲಸ ಬಹಳ ಶ್ಲಾಘನೀಯವಾಗಿದೆ. ಈ ಸಿಬ್ಬಂದಿಗೆ ನಮ್ಮ ಸರ್ಕಾರ ಧನ್ಯವಾದ ತಿಳಿಸುತ್ತಿದೆ. ಇತರರ ಪ್ರಾಣವನ್ನು ಉಳಿಸುವ ಮೂಲಕ ಅವರು ಧೈರ್ಯದ ಜೊತೆಗೆ ಮಾನವೀಯತೆ ಮೆರೆದಿದ್ದಾರೆ. ಸಾರ್ವಜನಿಕರು ವಿಪತ್ತುಗಳ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಂಡ ಸೈನಿಕರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ; ವಿಡಿಯೋ ವೈರಲ್

Viral Video: ಮನೆ ಎದುರು ಲಾಲೂಪ್ರಸಾದ್ ಯಾದವ್ ಪಾದ ತೊಳೆದ ಮಗ ತೇಜ್ ಪ್ರತಾಪ್

Published On - 4:45 pm, Wed, 27 October 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು