AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ಅತ್ಯಾಚಾರ ಆರೋಪಿ ರಾಯ್ ಎಷ್ಟು ಕ್ರೂರಿ ಎಂಬುದನ್ನು ವಿವರಿಸಿದ ಅತ್ತೆ

ಕೋಲ್ಕತ್ತಾ ಅತ್ಯಾಚಾರ ಆರೋಪಿ ಸಂಜಯ್ ರಾಯ್​ನನ್ನು ಗಲ್ಲಿಗೇರಿಸಿ ಎಂದು ಆತನ ಅತ್ತೆ ಹೇಳಿದ್ದಾರೆ. ಆತ ತನ್ನ ಮಗಳಿಗೆ ಕೊಟ್ಟಿರುವ ಕಷ್ಟಗಳ ಕುರಿತು ಮಾತನಾಡಿದ್ದಾರೆ. ಆತ ತನ್ನ ಮಗಳು ಮೂರು ತಿಂಗಳ ಗರ್ಭಿಣಿಯಾಗಿದ್ದಾಗ ಆಕೆಯ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿಸಿದ್ದ ಎಂದು ಹೇಳಿದ್ದಾರೆ.

ಕೋಲ್ಕತ್ತಾ: ಅತ್ಯಾಚಾರ ಆರೋಪಿ ರಾಯ್ ಎಷ್ಟು ಕ್ರೂರಿ ಎಂಬುದನ್ನು ವಿವರಿಸಿದ ಅತ್ತೆ
ಸಂಜಯ್ ರಾಯ್
ನಯನಾ ರಾಜೀವ್
|

Updated on: Aug 20, 2024 | 11:25 AM

Share

ಕೋಲ್ಕತ್ತಾದ ಆರ್​ಜಿ ಕರ್ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ಸಂಜಯ್ ರಾಯ್ ಎಷ್ಟು ಕ್ರೂರಿ ಎಂಬುದನ್ನು ಆತನ ಅತ್ತೆ ವಿವರಿಸಿದ್ದಾರೆ. ಸಂಜಯ್ ರಾಯ್ ಪತ್ನಿ ಮೂರು ತಿಂಗಳ ಗಣರ್ಭಿಣಿಯಾಗಿದ್ದಾಗ ಆಕೆಯ ಹೊಟ್ಟೆಗೆ ಒದ್ದು, ಹಲ್ಲೆ ನಡೆಸಿದ ಗರ್ಭಪಾತ ಮಾಡಿಸಿದ್ದ ಎನ್ನುವ ವಿಚಾರವನ್ನು ಅವರು ತಿಳಿಸಿದ್ದಾರೆ.

ಆತನನ್ನು ಗಲ್ಲಿಗೇರಿಸುವುದೇ ಸೂಕ್ತ ಎಂದಿರುವ ಅವರು, ತನ್ನ ಮಗಳು ಮತ್ತು ರಾಯ್ ಮದುವೆಯಾಗಿ 2 ವರ್ಷಗಳಾಗಿದ್ದವು, ತನ್ನ ಮಗಳೊಂದಿಗೆ ಆತನ ಮದುವೆ ಎರಡನೇ ಮದುವೆಯಾಗಿತ್ತು. ಆರಂಭದಲ್ಲಿ 6 ತಿಂಗಳು ಎಲ್ಲವೂ ಚೆನ್ನಾಗಿತ್ತು. ಆಕೆ ಗರ್ಭಿಣಿಯಾದಾಗ ಆತ ಮಗಳ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿಸಿದ್ದ, ನಂತರ ಪೊಲೀಸರಿಗೆ ನಾವು ದೂರು ನೀಡಿದ್ದೆವು. ನನ್ನ ಮಗಳು ಅನಾರೋಗ್ಯದಿಂದ ಬಳಲುತ್ತಿದ್ದಳು, ಔಷಧಿ ಸಂಪೂರ್ಣ ಖರ್ಚನ್ನು ತಾನೇ ನೋಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಆತನನ್ನು ಗಲ್ಲಿಗೇರಿಸಿ ಅಥವಾ ನಿಮಗೆ ಬೇಕಾಗಿದ್ದನ್ನು ಮಾಡಿ, ನಾನು ಆತ ಮಾಡಿರುವ ಅಪರಾಧದ ಬಗ್ಗೆ ಮಾತನಾಡುವುದಿಲ್ಲ, ಅದನ್ನು ಆತ ಒಬ್ಬನೇ ಮಾಡಲು ಸಾಧ್ಯವಿಲ್ಲ, ಅವನಿಗೆ ಆ ಸಾಮರ್ಥ್ಯವಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಸಂಜಯ್ ರಾಯ್ ಏಕೈಕ ಆರೋಪಿ, ಬೇರೆಯವರು ಭಾಗಿಯಾಗಿರುವ ಕುರುಹಿಲ್ಲ

ಆರೋಪಿ ಸಂಜಯ್ ರಾಯ್ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದವು. ಆತನಿಗೆ ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಹೋಗಲು ಅವಕಾಶವಿತ್ತು.

ಆತನ ಅನುಮಾನಾಸ್ಪದ ಚಟುವಟಿಕೆಗಳನ್ನು ನೋಡಿ ಆತನನ್ನು ಬಂಧಿಸಲಾಯಿತು. ಆತ ಆಸ್ಪತ್ರೆಯಲ್ಲಿ ಬೇರೆ ಹೆಣ್ಣುಮಕ್ಕಳ ಜತೆಯೂ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?