AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ಅತ್ಯಾಚಾರ ಆರೋಪಿ ರಾಯ್ ಎಷ್ಟು ಕ್ರೂರಿ ಎಂಬುದನ್ನು ವಿವರಿಸಿದ ಅತ್ತೆ

ಕೋಲ್ಕತ್ತಾ ಅತ್ಯಾಚಾರ ಆರೋಪಿ ಸಂಜಯ್ ರಾಯ್​ನನ್ನು ಗಲ್ಲಿಗೇರಿಸಿ ಎಂದು ಆತನ ಅತ್ತೆ ಹೇಳಿದ್ದಾರೆ. ಆತ ತನ್ನ ಮಗಳಿಗೆ ಕೊಟ್ಟಿರುವ ಕಷ್ಟಗಳ ಕುರಿತು ಮಾತನಾಡಿದ್ದಾರೆ. ಆತ ತನ್ನ ಮಗಳು ಮೂರು ತಿಂಗಳ ಗರ್ಭಿಣಿಯಾಗಿದ್ದಾಗ ಆಕೆಯ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿಸಿದ್ದ ಎಂದು ಹೇಳಿದ್ದಾರೆ.

ಕೋಲ್ಕತ್ತಾ: ಅತ್ಯಾಚಾರ ಆರೋಪಿ ರಾಯ್ ಎಷ್ಟು ಕ್ರೂರಿ ಎಂಬುದನ್ನು ವಿವರಿಸಿದ ಅತ್ತೆ
ಸಂಜಯ್ ರಾಯ್
ನಯನಾ ರಾಜೀವ್
|

Updated on: Aug 20, 2024 | 11:25 AM

Share

ಕೋಲ್ಕತ್ತಾದ ಆರ್​ಜಿ ಕರ್ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ಸಂಜಯ್ ರಾಯ್ ಎಷ್ಟು ಕ್ರೂರಿ ಎಂಬುದನ್ನು ಆತನ ಅತ್ತೆ ವಿವರಿಸಿದ್ದಾರೆ. ಸಂಜಯ್ ರಾಯ್ ಪತ್ನಿ ಮೂರು ತಿಂಗಳ ಗಣರ್ಭಿಣಿಯಾಗಿದ್ದಾಗ ಆಕೆಯ ಹೊಟ್ಟೆಗೆ ಒದ್ದು, ಹಲ್ಲೆ ನಡೆಸಿದ ಗರ್ಭಪಾತ ಮಾಡಿಸಿದ್ದ ಎನ್ನುವ ವಿಚಾರವನ್ನು ಅವರು ತಿಳಿಸಿದ್ದಾರೆ.

ಆತನನ್ನು ಗಲ್ಲಿಗೇರಿಸುವುದೇ ಸೂಕ್ತ ಎಂದಿರುವ ಅವರು, ತನ್ನ ಮಗಳು ಮತ್ತು ರಾಯ್ ಮದುವೆಯಾಗಿ 2 ವರ್ಷಗಳಾಗಿದ್ದವು, ತನ್ನ ಮಗಳೊಂದಿಗೆ ಆತನ ಮದುವೆ ಎರಡನೇ ಮದುವೆಯಾಗಿತ್ತು. ಆರಂಭದಲ್ಲಿ 6 ತಿಂಗಳು ಎಲ್ಲವೂ ಚೆನ್ನಾಗಿತ್ತು. ಆಕೆ ಗರ್ಭಿಣಿಯಾದಾಗ ಆತ ಮಗಳ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿಸಿದ್ದ, ನಂತರ ಪೊಲೀಸರಿಗೆ ನಾವು ದೂರು ನೀಡಿದ್ದೆವು. ನನ್ನ ಮಗಳು ಅನಾರೋಗ್ಯದಿಂದ ಬಳಲುತ್ತಿದ್ದಳು, ಔಷಧಿ ಸಂಪೂರ್ಣ ಖರ್ಚನ್ನು ತಾನೇ ನೋಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಆತನನ್ನು ಗಲ್ಲಿಗೇರಿಸಿ ಅಥವಾ ನಿಮಗೆ ಬೇಕಾಗಿದ್ದನ್ನು ಮಾಡಿ, ನಾನು ಆತ ಮಾಡಿರುವ ಅಪರಾಧದ ಬಗ್ಗೆ ಮಾತನಾಡುವುದಿಲ್ಲ, ಅದನ್ನು ಆತ ಒಬ್ಬನೇ ಮಾಡಲು ಸಾಧ್ಯವಿಲ್ಲ, ಅವನಿಗೆ ಆ ಸಾಮರ್ಥ್ಯವಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಸಂಜಯ್ ರಾಯ್ ಏಕೈಕ ಆರೋಪಿ, ಬೇರೆಯವರು ಭಾಗಿಯಾಗಿರುವ ಕುರುಹಿಲ್ಲ

ಆರೋಪಿ ಸಂಜಯ್ ರಾಯ್ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದವು. ಆತನಿಗೆ ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಹೋಗಲು ಅವಕಾಶವಿತ್ತು.

ಆತನ ಅನುಮಾನಾಸ್ಪದ ಚಟುವಟಿಕೆಗಳನ್ನು ನೋಡಿ ಆತನನ್ನು ಬಂಧಿಸಲಾಯಿತು. ಆತ ಆಸ್ಪತ್ರೆಯಲ್ಲಿ ಬೇರೆ ಹೆಣ್ಣುಮಕ್ಕಳ ಜತೆಯೂ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?