AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರಿಗೆ ಬೆಂಕಿ; ರಜೆಯಲ್ಲಿದ್ದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ

ಕಾರಿಗೆ ಬೆಂಕಿ ಹತ್ತಿಕೊಂಡಿದ್ದರ ಅರಿವಿಲ್ಲದ ಚಾಲಕ ಸುಮಾರು 1.5 ಕಿಲೋಮೀಟರ್ ವರೆಗೆ ಕಾರು ಚಲಾಯಿಸುತ್ತಲೇ ಇದ್ದ. ನಂತರ ದಾರಿಹೋಕರು ಆತನನ್ನು ಎಚ್ಚರಿಸಿ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದರು.

ಪುಣೆ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರಿಗೆ ಬೆಂಕಿ; ರಜೆಯಲ್ಲಿದ್ದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ
ಬಿಎಂಡಬ್ಲ್ಯು ಕಾರಿಗೆ ಬೆಂಕಿ ಹತ್ತಿಕೊಂಡಿರುವುದು
ರಶ್ಮಿ ಕಲ್ಲಕಟ್ಟ
|

Updated on:Apr 12, 2023 | 3:18 PM

Share

ಪುಣೆ: ಚಲಿಸುತ್ತಿದ್ದ ಬಿಎಂಡಬ್ಲ್ಯು(BMW) ಕಾರಿಗೆ ಮಂಗಳವಾರ ರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಘಟನೆ ಪುಣೆಯ(Pune) ಉಂಡ್ರಿ ಪ್ರದೇಶದಲ್ಲಿ ನಡೆದಿದೆ. ರಜೆಯಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ರಕ್ಷಣೆಗೆ ಬಂದು ಸಮೀಪದ ಪೆಟ್ರೋಲ್ ಪಂಪ್‌ನಲ್ಲಿದ್ದ ಅಗ್ನಿಶಾಮಕ ಯಂತ್ರವನ್ನು ಬಳಸಿ ಬೆಂಕಿ ನಿಯಂತ್ರಿಸಿದ್ದಾರೆ. ಬೆಂಕಿಯ ತೀವ್ರತೆ ಕ್ರಮೇಣ ಹೆಚ್ಚಿ ಇದ್ದು ಪುಣೆ ರಸ್ತೆಯಲ್ಲಿಯೂ ಬೆಂಕಿ ಆವರಿಸಿದೆ. ಕಾರಿಗೆ ಬೆಂಕಿ ಹತ್ತಿಕೊಂಡಿದ್ದರ ಅರಿವಿಲ್ಲದ ಚಾಲಕ ಸುಮಾರು 1.5 ಕಿಲೋಮೀಟರ್ ವರೆಗೆ ಕಾರು ಚಲಾಯಿಸುತ್ತಲೇ ಇದ್ದ. ನಂತರ ದಾರಿಹೋಕರು ಆತನನ್ನು ಎಚ್ಚರಿಸಿ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದರು.ಆಗ ಅಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಹರ್ಷ ಯೆವಳೆ ಸಮೀಪದ ಪೆಟ್ರೋಲ್ ಪಂಪ್‌ನಿಂದ ಅಗ್ನಿಶಾಮಕ ಯಂತ್ರವನ್ನು ಬಳಸಿ ಬೆಂಕಿಯನ್ನು ಹತೋಟಿಗೆ ತಂದರು. ನಂತರ ಕೊಂಡ್ವಾ ಬುದ್ರುಕ್ ಅಗ್ನಿಶಾಮಕ ದಳದ ಸಿಬ್ಬಂದಿ ನೆರವು ನೀಡಿದ್ದು ಅವರು ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.

ಕಾರಿಗೆ ಭಾರೀ ಹಾನಿಯಾಗಿದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿಎಂಡಬ್ಲ್ಯು ಇಂಧನ ಟ್ಯಾಂಕ್ ಸೋರಿಕೆಯೇ ಬೆಂಕಿಗೆ ಕಾರಣ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ದಳದ ಹರ್ಷ ಯೆವಳೆ,ಮೊದಲು ಬೆಂಕಿಯ ತೀವ್ರತೆ ಕಡಿಮೆಯಾಗಿತ್ತು ಆದರೆ ನಂತರ ನಿಧಾನವಾಗಿ ಬೆಂಕಿ ಹೆಚ್ಚಾಯಿತು. ಇಡೀ ಬಿಎಂಡಬ್ಲ್ಯು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಿಎಂಡಬ್ಲ್ಯು ಇಂಧನ ಟ್ಯಾಂಕ್ ಸೋರಿಕೆಯಿಂದಾಗಿ ಈ ಘಟನೆ ಸಂಭವಿಸಿದೆ. ಘಟನೆಯ ಅರಿವಿಲ್ಲದೆ ಕಾರಿನಲ್ಲಿದ್ದ ಚಾಲಕ ಕಾರಿಗೆ ಬೆಂಕಿ ಹೊತ್ತಿಕೊಂಡ ನಂತರ ಸುಮಾರು ಒಂದೂವರೆ ಕಿಲೋಮೀಟರ್ ಓಡಿಸಿದ್ದಾನೆ. ಚಾಲಕನಿಗೆ ಮಾಹಿತಿ ನೀಡಿದ ನಂತರವೇ ಆತ ಕಾರು ನಿಲ್ಲಿಸಿದ್ದು.

ಇದನ್ನೂ ಓದಿ: Vande Bharat Express: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಮೊದಲು ಅಗ್ನಿಶಾಮಕ ಯಂತ್ರವನ್ನು ಬಳಸಿ ಅಗ್ನಿಶಾಮಕ ಟೆಂಡರ್ ಬರುವವರೆಗೆ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದೆ. ಆದರೆ ಭಾರೀ ಪ್ರಮಾಣದ ಬೆಂಕಿಯಿಂದಾಗಿ ಅದು ಕಷ್ಟವಾಗಿತ್ತು. ನಂತರ ಅಗ್ನಿಶಾಮಕದಳದವರು ಬಂದು ಬೆಂಕಿ ನಂದಿಸಿದ್ದಾರೆ ಎಂದು ಯೆವಳೆ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Wed, 12 April 23

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ