AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕರ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ, ವಿಡಿಯೋ ವೈರಲ್

ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಬಿಜೆಪಿ ಶಾಸಕರ ಇನ್ನೋವಾ ಕಾರನ್ನು ಸರ್ಕಾರಿ ಅಗ್ನಿಶಾಮಕ ವಾಹನದಿಂದ ತೊಳೆಯುವ ವಿಡಿಯೋ ವೈರಲ್ ಆಗಿದ್ದು, ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ತುರ್ತು ಸೇವೆಗೆ ಮೀಸಲಾದ ಸಂಪನ್ಮೂಲಗಳ ದುರ್ಬಳಕೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಸಕರ ಸಮರ್ಥನೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಘಟನೆ ಅಧಿಕಾರ ದುರ್ಬಳಕೆ ಮತ್ತು ಹೊಣೆಗಾರಿಕೆಯ ಕೊರತೆಯನ್ನು ಎತ್ತಿ ತೋರಿಸಿದೆ.

ಬಿಜೆಪಿ ಶಾಸಕರ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ, ವಿಡಿಯೋ ವೈರಲ್
ಕಾರು
ನಯನಾ ರಾಜೀವ್
|

Updated on: Aug 26, 2026 | 12:36 PM

Share

ಸಿಂಗ್ರೌಲಿ, ಆಗಸ್ಟ್​ 26: ತುರ್ತು ಸಂದರ್ಭಗಳಲ್ಲಿ ಜನರ ಜೀವ ಮತ್ತು ಆಸ್ತಿಪಾಸ್ತಿ ರಕ್ಷಿಸಬೇಕಾದ ಸರ್ಕಾರಿ ಅಗ್ನಿಶಾಮಕ ದಳದ ವಾಹನವನ್ನು ಶಾಸಕರೊಬ್ಬರ  ಇನ್ನೋವಾ ಕಾರು ತೊಳೆಯಲು ಬಳಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ.

ಮಧ್ಯಪ್ರದೇಶದ ಸಿಂಗ್ರೌಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್‌ನಿವಾಸ್ ಶಾ ಅವರ ಬಿಲೌಂಜಿಯಲ್ಲಿರುವ ಸರ್ಕಾರಿ ನಿವಾಸದ ಮುಂಭಾಗ ಈ ಘಟನೆ ನಡೆದಿದ್ದು, ಮುನ್ಸಿಪಲ್ ಕಾರ್ಪೊರೇಷನ್‌ನ ಮೂವರು ಸಿಬ್ಬಂದಿ ಅಗ್ನಿಶಾಮಕ ವಾಹನದ ಪೈಪ್ ಮೂಲಕ ಶಾಸಕರ ಕಾರಿಗೆ ಪ್ರೆಶರ್ ನೀರು ಸಿಂಪಡಿಸಿ ತೊಳೆಯುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ.

ವಿಡಿಯೋ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಉತ್ತರಿಸಿದ ಶಾಸಕ ರಾಮ್‌ನಿವಾಸ್ ಶಾ, ಜನರು ಮೊದಲು ಅರ್ಥಮಾಡಿಕೊಳ್ಳಬೇಕು, ಒಬ್ಬ ಶಾಸಕ ತನ್ನ ವಾಹನವನ್ನು ತಾನೇ ತೊಳೆಯಲು ಸಾಧ್ಯವೇ? ಎಂದು ಮರುಪ್ರಶ್ನಿಸುವ ಮೂಲಕ ಉಡಾಫೆಯಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಎನ್​ಡಿಟಿವಿ ವರದಿ ಮಾಡಿದೆ.

ವಿಡಿಯೋ

ಆ ಸಮಯದಲ್ಲಿ ತಾನು ಸ್ಥಳೀಯ ಕಾರ್ಯಕ್ರಮಗಳಲ್ಲಿದ್ದ ಕಾರಣ ನಿವಾಸದಲ್ಲಿ ಇರಲಿಲ್ಲ ಎಂದು ಹೇಳಿಕೊಂಡ ಅವರು, ಮಹಾನಗರ ಪಾಲಿಕೆ ಕಚೇರಿಗೆ ನೀರು ಸರಬರಾಜು ಮಾಡಲು ಬಂದಿದ್ದ ವಾಹನವನ್ನು ಚಾಲಕ ಕಾರು ತೊಳೆಯಲು ಬಳಸಿಕೊಂಡಿರಬಹುದು ಎಂದು ಸಮರ್ಥಿಸಿಕೊಂಡಿದ್ದಾರೆ.

ಉಮಾಂಗ್ ಸಿಂಘರ್ ಕಿಡಿ: ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉಮಾಂಗ್ ಸಿಂಘರ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಸಾಮಾನ್ಯ ಜನರ ಮನೆಗೆ ಬೆಂಕಿ ಬಿದ್ದಾಗ ಸಕಾಲಕ್ಕೆ ಬಾರದ ಅಗ್ನಿಶಾಮಕ ವಾಹನಗಳು, ಬಿಜೆಪಿ ಶಾಸಕರ ಕಾರು ತೊಳೆಯುವ ಖಾಸಗಿ ವಾಷಿಂಗ್ ಸೆಂಟರ್ ಆಗಿ ಮಾರ್ಪಟ್ಟಿವೆ ಎಂದು ಟೀಕಿಸಿದ್ದಾರೆ.

ಮತ್ತಷ್ಟು ಓದಿ: ಪಿಎಸ್‌ಐ ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; 10 ದಿನಗಳ ಬಳಿಕ ವೀಡಿಯೋ ವೈರಲ್

ನೆಟ್ಟಿಗರ ವ್ಯಂಗ್ಯ: ಸಾರ್ವಜನಿಕರ ತೆರಿಗೆ ಹಣ ಮತ್ತು ತುರ್ತು ಸಂಪನ್ಮೂಲಗಳನ್ನು ರಾಜಕಾರಣಿಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತುರ್ತು ಸೇವಾ ನಿಯಮಗಳ ಉಲ್ಲಂಘನೆ: ನಿಯಮಗಳ ಪ್ರಕಾರ, ಅಗ್ನಿಶಾಮಕ ವಾಹನಗಳನ್ನು ಕೇವಲ ಬೆಂಕಿ ಅವಘಡಗಳು, ಪ್ರವಾಹ ಅಥವಾ ತುರ್ತು ರಕ್ಷಣಾ ಕಾರ್ಯಾಚರಣೆಗಳಿಗೆ ಮಾತ್ರ ಬಳಸಲು ಅನುಮತಿಯಿದೆ. ಯಾವುದೇ ವ್ಯಕ್ತಿಯ ಖಾಸಗಿ ವಾಹನ ತೊಳೆಯಲು ಅಥವಾ ವೈಯಕ್ತಿಕ ಬಳಕೆಗೆ ಇವುಗಳನ್ನು ಬಳಸುವುದು ಅಧಿಕಾರ ದುರುಪಯೋಗ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ.

ಅಧಿಕಾರಿಗಳ ಮೌನ: ಘಟನೆ ಸಾರ್ವಜನಿಕವಾಗಿ ಬಯಲಾಗಿದ್ದರೂ, ಸ್ಥಳೀಯ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಡಳಿತವು ಘಟನೆಯ ಬಗ್ಗೆ ಸ್ಪಷ್ಟ ತನಿಖೆ ನಡೆಸದೆ ಜಾಣಮೌನ ವಹಿಸಿರುವುದು ಸ್ಥಳೀಯ ಆಡಳಿತದ ಮೇಲಿನ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗದಗದಲ್ಲಿ 5 ದಿನಗಳಿಂದ ಬಂದ್ ಆಗಿದ್ದ ಸರ್ಕಾರಿ ಶಾಲೆ ಓಪನ್!
ಗದಗದಲ್ಲಿ 5 ದಿನಗಳಿಂದ ಬಂದ್ ಆಗಿದ್ದ ಸರ್ಕಾರಿ ಶಾಲೆ ಓಪನ್!
ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ? ಸಿಎಂ ಡಿಕೆಶಿ ಏನಂದ್ರು?
ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ? ಸಿಎಂ ಡಿಕೆಶಿ ಏನಂದ್ರು?
ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಬಂಡೀಪುರ ಅರಣ್ಯ ಸಿಬ್ಬಂದಿ ಬಲೆಗೆ
ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಬಂಡೀಪುರ ಅರಣ್ಯ ಸಿಬ್ಬಂದಿ ಬಲೆಗೆ
ಮೈಸೂರು ದಸರಾ 2026: ಗಜಪಡೆಗೆ ಸಚಿವ ಯತೀಂದ್ರರಿಂದ ಚಾಲನೆ
ಮೈಸೂರು ದಸರಾ 2026: ಗಜಪಡೆಗೆ ಸಚಿವ ಯತೀಂದ್ರರಿಂದ ಚಾಲನೆ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ
ಬಿಡದಿ ಟೌನ್​ಶಿಪ್, ಹೈಕೋರ್ಟ್​ನಿಂದ ಯಾವುದೇ ಸಾಮಾನ್ಯ ತಡೆ ಇಲ್ಲ: ಪ್ರಾಧಿಕಾರ
ಬಿಡದಿ ಟೌನ್​ಶಿಪ್, ಹೈಕೋರ್ಟ್​ನಿಂದ ಯಾವುದೇ ಸಾಮಾನ್ಯ ತಡೆ ಇಲ್ಲ: ಪ್ರಾಧಿಕಾರ
ಟಾಕ್ಸಿಕ್ ಸಿನಿಮಾ ಬಿಡುಗಡೆ; ರಾವಣ ವೇಷ ತೊಟ್ಟು ಥಿಯೇಟರ್​​ಗೆ ಬಂದ ಅಭಿಮಾನಿ
ಟಾಕ್ಸಿಕ್ ಸಿನಿಮಾ ಬಿಡುಗಡೆ; ರಾವಣ ವೇಷ ತೊಟ್ಟು ಥಿಯೇಟರ್​​ಗೆ ಬಂದ ಅಭಿಮಾನಿ
'ಟಾಕ್ಸಿಕ್' ಟ್ರೋಲ್ ಮಾಡುತ್ತಿದ್ದವರಿಗೆ ರಾಕಿ ಭಾಯ್ ಅಭಿಮಾನಿಗಳ ಟಾಂಗ್
'ಟಾಕ್ಸಿಕ್' ಟ್ರೋಲ್ ಮಾಡುತ್ತಿದ್ದವರಿಗೆ ರಾಕಿ ಭಾಯ್ ಅಭಿಮಾನಿಗಳ ಟಾಂಗ್
‘ಟಾಕ್ಸಿಕ್ 2 ಸಾವಿರ ಕೋಟಿ ಕಲೆಕ್ಷನ್ ಮಾಡದಿದ್ದರೆ ಮೀಸೆ ಬೋಳಿಸಿಕೊಳ್ಳುವೆ’
‘ಟಾಕ್ಸಿಕ್ 2 ಸಾವಿರ ಕೋಟಿ ಕಲೆಕ್ಷನ್ ಮಾಡದಿದ್ದರೆ ಮೀಸೆ ಬೋಳಿಸಿಕೊಳ್ಳುವೆ’
ಯಶ್‌ಗೆ ವಿಶೇಷ ಸರ್ಪ್ರೈಸ್ ನೀಡಿದ ಮಂಗಳೂರಿನ ಅಭಿಮಾನಿ
ಯಶ್‌ಗೆ ವಿಶೇಷ ಸರ್ಪ್ರೈಸ್ ನೀಡಿದ ಮಂಗಳೂರಿನ ಅಭಿಮಾನಿ