AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ತಂಗಿ ಮೇಲೆ ಅತ್ಯಾಚಾರ, ಕೊಲೆ, ಅಪರಾಧ ಮರೆಮಾಚಲು ತಾಯಿಯ ಬೆಂಬಲ

ಅಪ್ರಾಪ್ತ ಬಾಲಕನೊಬ್ಬ ತನ್ನ ತಂಗಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ, ಈ ಕೃತ್ಯವನ್ನು ಮರೆ ಮಾಚಲು ಆತನ ಹಿರಿಯ ಸಹೋದರಿ ಹಾಗೂ ತಾಯಿ ಸಹಾಯ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಆತ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿ ಬಳಿಕ ತಂಗಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ.

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ತಂಗಿ ಮೇಲೆ ಅತ್ಯಾಚಾರ, ಕೊಲೆ, ಅಪರಾಧ ಮರೆಮಾಚಲು ತಾಯಿಯ ಬೆಂಬಲ
ಅಪರಾಧ
ನಯನಾ ರಾಜೀವ್
|

Updated on: Jul 28, 2024 | 9:50 AM

Share

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ 9 ವರ್ಷದ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣದಲ್ಲಿ ಈ ಕೃತ್ಯ ಮರೆ ಮಾಚಲು ಆತನ ತಾಯಿಯೇ ಸಹಾಯ ಮಾಡಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ.

13 ವರ್ಷದ ಬಾಲಕನೊಬ್ಬ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡಿ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದ ಬಳಿಕ ಆಕೆ ಈ ವಿಚಾರವನ್ನು ಎಲ್ಲಾದರೂ ಬಾಯಿಬಿಟ್ಟಾಳು ಎನ್ನುವ ಭಯದಿಂದ ಆಕೆಯನ್ನು ಹತ್ಯೆ ಮಾಡಿದ್ದ.

ಈ ಘಟನೆಯನ್ನು ಮುಚ್ಚಿಡಲು ಆತನ ತಾಯಿ ಹಾಗೂ ಸಹೋದರಿ ಸಹಾಯ ಮಾಡಿದ್ದರು ಎಂದು ಮಧ್ಯಪ್ರದೇಶದ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು 50 ಜನರ ವಿಚಾರಣೆ ನಡೆಸಿದ್ದಾರೆ, ಕೆಲವು ಸಾಕ್ಷ್ಯಾಧಾರ ಆಧಾರದ ಮೇಲೆ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: Shocking News: 1 ವರ್ಷದಿಂದ ಅತ್ಯಾಚಾರ; ಸ್ವಂತ ಅಣ್ಣಂದಿರಿಂದಲೇ ಗರ್ಭಿಣಿಯಾದ ಬಾಲಕಿ

ಏಪ್ರಿಲ್ 24ರಂದು ಮಧ್ಯಪ್ರದೇಶದ ರೇವಾ ಜಿಲ್ಲೆಯ ಮನೆಯೊಂದರಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿಯ ಶವ ಸಿಕ್ಕಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದು ತಿಳಿದುಬಂದಿತ್ತು.

ಕುಟುಂಬ ಸದಸ್ಯರ ತೀವ್ರ ವಿಚಾರಣೆ ಬಳಿಕ ಸಂತ್ರಸ್ತೆಯ 13 ವರ್ಷದ ಸಹೋದರ ರಾತ್ರಿ ಆಕೆಯ ಪಕ್ಕದಲ್ಲಿ ಮಲಗಿದ್ದ, ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ್ದಾನೆ, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ