AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಭೀಕರ ಕೃತ್ಯ: ಹಾಸಿಗೆಯ ಬಾಕ್ಸ್‌ನೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಡ್ಯಾನ್ಸರ್ ಮೃತದೇಹ

ಮಧ್ಯಪ್ರದೇಶದ ಸಾಗರ್‌ನಲ್ಲಿ ಡ್ಯಾನ್ಸರ್ ಮಮತಾ ಅಹಿರ್ವಾರ್ ಕೊಳೆತ ಸ್ಥಿತಿಯಲ್ಲಿ ಹಾಸಿಗೆ ಪೆಟ್ಟಿಗೆಯೊಳಗೆ ಪತ್ತೆಯಾಗಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಹೋರಾಡುತ್ತಿದ್ದ ಈ ತಾಯಿ 10 ದಿನಗಳಿಂದ ನಾಪತ್ತೆಯಾಗಿದ್ದರು. ಮಕ್ಕಳು ಮನೆಗೆ ಮರಳಿದಾಗ ದುರ್ವಾಸನೆ ಹರಡಿತ್ತು. ಪೆಟ್ಟಿಗೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದು ಪರಿಚಿತರ ಕೃತ್ಯ ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಮಧ್ಯಪ್ರದೇಶದಲ್ಲಿ ಭೀಕರ ಕೃತ್ಯ: ಹಾಸಿಗೆಯ ಬಾಕ್ಸ್‌ನೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು  ಡ್ಯಾನ್ಸರ್ ಮೃತದೇಹ
ಕ್ರೈಂ Image Credit source: University of central Florida
ನಯನಾ ರಾಜೀವ್
|

Updated on: Apr 14, 2026 | 7:41 AM

Share

ಸಾಗರ್, ಏಪ್ರಿಲ್ 14: ಮದುವೆ, ಜಾತ್ರೆಗಳಲ್ಲಿ ನೃತ್ಯ(Dance) ಮಾಡುತ್ತಾ ತನ್ನಿಬ್ಬರು ಮಕ್ಕಳ ಭವಿಷ್ಯಕ್ಕಾಗಿ ಹೋರಾಡುತ್ತಿದ್ದ ಒಬ್ಬ ತಾಯಿ, ಕೊನೆಗೆ ಮನೆಯಲ್ಲೇ ಹೆಣವಾಗಿ ಪತ್ತೆಯಾದ ಘೋರ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಹತ್ತು ದಿನಗಳಿಂದ ನಾಪತ್ತೆಯಾಗಿದ್ದ 45 ವರ್ಷದ ಡ್ಯಾನ್ಸರ್ ಮಮತಾ ಅಹಿರ್ವಾರ್ ಅವರ ಮೃತದೇಹ ಹಾಸಿಗೆಯ ಪೆಟ್ಟಿಗೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಮತಾ ಅವರ ಮಕ್ಕಳು, ದೇವ್ ಮತ್ತು ಮುಸ್ಕಾನ್, ಕಳೆದ ಹತ್ತು ದಿನಗಳಿಂದ ವಿದಿಶಾದಲ್ಲಿರುವ ತಮ್ಮ ಅಕ್ಕನ ಮನೆಯಲ್ಲಿದ್ದರು. ತಾಯಿಯಂತೆ ತಾವೂ ಕಷ್ಟಪಟ್ಟು ದುಡಿದು ಸಂಸಾರಕ್ಕೆ ನೆರವಾಗಲೆಂದು ಉದ್ಯೋಗ ಅರಸುತ್ತಿದ್ದ ಮಕ್ಕಳು, ಏಪ್ರಿಲ್ 5 ರಿಂದ ತಾಯಿಯೊಂದಿಗೆ ಮಾತನಾಡಲು ಸತತ ಪ್ರಯತ್ನ ನಡೆಸಿದ್ದರು. ಆದರೆ ತಾಯಿಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಆತಂಕಗೊಂಡ ಮಕ್ಕಳು ಭಾನುವಾರ ಸಾಗರ್ ಜಿಲ್ಲೆಯ ಸಹೋದ್ರಾ ರಾಯ್ ವಾರ್ಡ್‌ನಲ್ಲಿರುವ ತಮ್ಮ ಮನೆಗೆ ಮರಳಿದರು.

ಬೀಗ ಹಾಕಿದ್ದ ಮನೆ, ಒಳಗೆ ಮೌನವಾಗಿದ್ದ ಸಾವಿನ ರಹಸ್ಯ ಮನೆಗೆ ಬಂದ ಮಕ್ಕಳಿಗೆ ಮುಂಭಾಗದ ಬಾಗಿಲು ಹೊರಗಿನಿಂದ ಲಾಕ್ ಆಗಿರುವುದು ಕಂಡುಬಂದಿದೆ. ನೆರೆಹೊರೆಯವರ ಸಹಾಯದಿಂದ ಬಾಗಿಲು ಒಡೆದು ಒಳಗೆ ಹೋದಾಗ, ಇಡೀ ಮನೆಯಲ್ಲಿ ವಿಪರೀತ ದುರ್ವಾಸನೆ ಹರಡಿತ್ತು. ಕಿಟಕಿ, ಬಾಗಿಲು ಮುಚ್ಚಿದ್ದ ಮನೆಯಲ್ಲಿ ಯಾವುದೋ ಅನಾಹುತ ನಡೆದಿದೆ ಎಂಬ ಸಂಶಯದಿಂದ ಹುಡುಕಾಟ ನಡೆಸಿದಾಗ, ಕೋಣೆಯಲ್ಲಿದ್ದ ಬೆಡ್ ಬಾಕ್ಸ್ ತೆರೆದಾಗ ಮಕ್ಕಳು ಕಂಡ ದೃಶ್ಯ ಅವರ ಬದುಕಿನಲ್ಲೇ ಮರೆಯಲಾಗದ ಕರಾಳ ಕ್ಷಣವಾಗಿತ್ತು.

ಮತ್ತಷ್ಟು ಓದಿ: ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ

ತಾಯಿಯ ಮೃತದೇಹ ಪೆಟ್ಟಿಗೆಯೊಳಗೆ ಅರೆ ಕೊಳೆತ ಸ್ಥಿತಿಯಲ್ಲಿತ್ತು. ಹಂತಕರು ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಶವವನ್ನು ಅಲ್ಲಿ ಬಚ್ಚಿಟ್ಟಿದ್ದರು ಎಂದು ಮಕ್ಕಳು ಕಣ್ಣೀರಿಟ್ಟಿದ್ದಾರೆ. ಮಮತಾ ಅಹಿರ್ವಾರ್ ಕಳೆದ 15 ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಇಬ್ಬರು ಮಕ್ಕಳನ್ನು ಸಾಕಿ ಸಲಹಲು ಅವರು ವೃತ್ತಿಪರ ಡ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದರು. ಜಿಲ್ಲೆಯ ಸುತ್ತಮುತ್ತಲಿನ ಜಾತ್ರೆ ಮತ್ತು ಮದುವೆ ಸಮಾರಂಭಗಳಲ್ಲಿ ನೃತ್ಯ ಮಾಡಿ ಅವರು ಜೀವನ ಸಾಗಿಸುತ್ತಿದ್ದರು.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅಸ್ತಾನಾ ಮತ್ತು ತಂಡ, ಸ್ಥಳದಲ್ಲಿನ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಮನೆಯ ಹೊರಗಿನಿಂದ ಬೀಗ ಹಾಕಿರುವುದು ಇದು ಪರಿಚಿತರೇ ಮಾಡಿದ ಕೃತ್ಯ ಇರಬಹುದು ಎಂಬ ಅನುಮಾನ ಮೂಡಿಸಿದೆ. ಮೃತದೇಹ ಭಾಗಶಃ ಕೊಳೆತಿರುವುದರಿಂದ ಸುಮಾರು ಒಂದು ವಾರದ ಹಿಂದೆಯೇ ಕೊಲೆ ನಡೆದಿರುವ ಸಾಧ್ಯತೆಯಿದೆ.

ಮರಣೋತ್ತರ ಪರೀಕ್ಷಾ ವರದಿಯು ಸಾವು ಉಸಿರುಗಟ್ಟಿ ಸಂಭವಿಸಿದೆಯೇ ಅಥವಾ ಯಾವುದಾದರೂ ಆಯುಧದಿಂದ ನಡೆದಿದೆಯೇ ಎಂಬುದನ್ನು ಖಚಿತಪಡಿಸಲಿದೆ. ಪೊಲೀಸರು ಈಗ ಮಮತಾ ಅವರ ಕೊನೆಯ ಫೋನ್ ಕರೆಗಳು ಮತ್ತು ಅವರ ಆಪ್ತರ ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ